ಸಂಗ್ರಹ ಚಿತ್ರ 
ರಾಜ್ಯ

ಬೆಳಗಾವಿ: 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಕಾಮುಕರ ಬಂಧನ

ನವೆಂಬರ್ 23ರಂದು ಬಾಲಕಿ ಸಂಜೆ ಮನೆಯಿಂದ ಹಿಟ್ಟಿನ ಗಿರಣಿಗೆ ಹೋಗಿದ್ದು, ಆ ವೇಳೆ ಪ್ರಮುಖ ಆರೋಪಿ ಮಣಿಕಾಂತ್ ದಿನ್ನಿಮಣಿ ಮತ್ತು ಈರಣ್ಣ ಸಂಕಮ್ಮನವರ್ ಎಂಬುವವರು ಆಕೆಯನ್ನು ಅಡ್ಡಗಟ್ಟಿದ್ದು, ಕಬ್ಬಿನ ಗದ್ದೆಗೆ ಎತ್ತಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ.

ಬೆಳಗಾವಿ: ಏಳನೇ ತರಗತಿಯ ವಿದ್ಯಾರ್ಥಿನಿಯನ್ನು ಕಬ್ಬಿನ ತೋಟಕ್ಕೆ ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆಯೊಂದು ಬೆಳಗಾವಿಯಲ್ಲಿ ನಡೆದಿದೆ.

ನವೆಂಬರ್ 23ರಂದು ಬಾಲಕಿ ಸಂಜೆ ಮನೆಯಿಂದ ಹಿಟ್ಟಿನ ಗಿರಣಿಗೆ ಹೋಗಿದ್ದು, ಆ ವೇಳೆ ಪ್ರಮುಖ ಆರೋಪಿ ಮಣಿಕಾಂತ್ ದಿನ್ನಿಮಣಿ ಮತ್ತು ಈರಣ್ಣ ಸಂಕಮ್ಮನವರ್ ಎಂಬುವವರು ಆಕೆಯನ್ನು ಅಡ್ಡಗಟ್ಟಿದ್ದು, ಕಬ್ಬಿನ ಗದ್ದೆಗೆ ಎತ್ತಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಅತ್ಯಾಚಾರದ ಬಳಿಕ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ. ಇದರಿಂದ ಕೃತ್ಯ ಬೆಳಕಿಗೆ ಬರುವುದು ತಡವಾಗಿದೆ.

ಏತನ್ಮಧ್ಯೆ ವಿಚಾರ ತಿಳಿದ ಪೋಷಕರು ಡಿಸೆಂಬರ್ 1ರಂದು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣ ಸಂಬಂಧ ಆರೋಪಿಗಳಿಬ್ಬರನ್ನೂ ಬಂಧಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup: ಭಾರತಕ್ಕೆ ಬರದಿದ್ದರೇ ಟೂರ್ನಿಯಿಂದ ಹೊರಕ್ಕೆ; ಬಾಂಗ್ಲಾಗೆ ಐಸಿಸಿ 24 ಗಂಟೆ ಅಂತಿಮ ಗಡುವು!

35 ಎಸೆತಗಳಲ್ಲಿ 84 ರನ್: 5000 ರನ್ ಸೇರಿದಂತೆ ಒಂದೇ ಪಂದ್ಯದಲ್ಲಿ 5 ದಾಖಲೆ ಮುರಿದ ಅಭಿಷೇಕ್ ಶರ್ಮಾ

ರಾಸಲೀಲೆ ಪ್ರಕರಣ: ಅಮಾನತುಗೊಂಡ ಡಿಜಿಪಿ ರಾಮಚಂದ್ರ ರಾವ್ ಸ್ಥಾನಕ್ಕೆ ಉಮೇಶ್ ಕುಮಾರ್ ನೇಮಕ

ಜಂಟಿ ಅಧಿವೇಶನ: ಸದನ ಕದನಕ್ಕೆ ಆಡಳಿತರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಸಿದ್ಧತೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯ ನಡೆಸಲು ನಾವು ರೆಡಿ, ಆದರೆ RCB ಹಿಂಜರಿಯುತ್ತಿದೆ: ವೆಂಕಟೇಶ್ ಪ್ರಸಾದ್

SCROLL FOR NEXT