ಸಿದ್ದರಾಮಯ್ಯ 
ರಾಜ್ಯ

ಡಿಕೆಶಿ ಹೋಗಲಿ ಬಿಡಿ, ಆಹ್ವಾನವಿಲ್ಲದೆ ನಾನು ದೆಹಲಿಗೆ ತೆರಳಲ್ಲ: ಸಿಎಂ ಸಿದ್ದರಾಮಯ್ಯ; Video

ಅತ್ತ ಉಪಮುಖ್ಯಮಂತ್ರಿ ದೆಹಲಿಗೆ ತೆರಳಿದರೆ, ಸಿದ್ದರಾಮಯ್ಯ ಅವರು ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳು ಮಹಾತ್ಮ ಗಾಂಧಿಯವರೊಂದಿಗೆ ಭೇಟಿಯಾದ ಶತಮಾನೋತ್ಸವದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದರು.

ಮಂಗಳೂರು: ಔಪಚಾರಿಕವಾಗಿ ಆಹ್ವಾನ ನೀಡದ ಹೊರತು ನವದೆಹಲಿಗೆ ಪ್ರಯಾಣಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಮದುವೆಯಲ್ಲಿ ಭಾಗವಹಿಸಲು ಮತ್ತು ಪಕ್ಷದ ಕಾರ್ಯಕ್ರಮವನ್ನು ಯೋಜಿಸಲು ನವದೆಹಲಿಗೆ ಭೇಟಿ ನೀಡಿದ ನಂತರ ಅವರ ಹೇಳಿಕೆಗಳು ಬಂದಿವೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಹರಡಿರುವ ಊಹಾಪೋಹಗಳಿಗೆ ತೆರೆ ಎಳೆಯಲು, ಬೆಂಗಳೂರಿನಲ್ಲಿರುವ ತಮ್ಮ ನಿವಾಸಗಳಲ್ಲಿ ಪರಸ್ಪರ ಉಪಹಾರ ಕೂಟ ಆಯೋಜಿಸುವ ಮೂಲಕ ಇಬ್ಬರೂ ನಾಯಕರು ಇತ್ತೀಚೆಗೆ ಒಗ್ಗಟ್ಟು ಪ್ರದರ್ಶಿಸಿದರು.

ಅತ್ತ ಉಪಮುಖ್ಯಮಂತ್ರಿ ದೆಹಲಿಗೆ ತೆರಳಿದರೆ, ಸಿದ್ದರಾಮಯ್ಯ ಅವರು ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳು ಮಹಾತ್ಮ ಗಾಂಧಿಯವರೊಂದಿಗೆ ಭೇಟಿಯಾದ ಶತಮಾನೋತ್ಸವದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿಗೆ ತಲುಪಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದರು ಮತ್ತು ನಂತರ ಸಿಎಂ ಅವರೊಂದಿಗೆ ಭೋಜನ ಸಭೆ ನಡೆಸಿದರು.

ಕಾವೇರಿ ಅತಿಥಿ ಗೃಹಕ್ಕೆ ತೆರಳುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿಯೊಂದಿಗೆ ರಾಜಕೀಯದ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ತಿಳಿಸಿದರು.

ಶಿವಕುಮಾರ್ ದೆಹಲಿಗೆ ಹೋಗುತ್ತಿದ್ದಾರೆ ಎಂದು ವರದಿಗಾರರು ಗಮನಸೆಳೆದಾಗ, 'ಅವರನ್ನು ಹೋಗಲು ಬಿಡಿ. ಯಾರಾದರೂ ಅವರಿಗೆ ಬೇಡ ಎಂದು ಹೇಳಿದ್ದಾರೆಯೇ? ಎಂದರು. ನೀವು ಹೋಗುವಿರೇ ಎಂದು ಕೇಳಿದಾಗ, 'ನನಗೆ ಆಹ್ವಾನ ಬಂದಾಗ ಮಾತ್ರ ನಾನು ಹೋಗುತ್ತೇನೆ. ನನಗೆ ಆಹ್ವಾನ ಬಂದಿಲ್ಲ, ಆದ್ದರಿಂದ ನಾನು ಹೋಗುತ್ತಿಲ್ಲ' ಎಂದರು.

ದೆಹಲಿಯಲ್ಲಿ ಸಭೆ ನಡೆಸಲು ಪಕ್ಷದ ಹೈಕಮಾಂಡ್‌ನಿಂದ ಯಾವುದೇ ನಿರ್ದೇಶನವಿದ್ದರೆ, ಅದನ್ನು ವೇಣುಗೋಪಾಲ್ ಮೂಲಕ ತಿಳಿಸಲಾಗುವುದು ಎಂದು ಅವರು ಹೇಳಿದರು.

ದೆಹಲಿಗೆ ಹೊರಡುವ ಮೊದಲು ಮಾತನಾಡಿದ ಶಿವಕುಮಾರ್, ಮದುವೆಯೊಂದರಲ್ಲಿ ಭಾಗವಹಿಸಲು ದೆಹಲಿಗೆ ಪ್ರಯಾಣಿಸುತ್ತಿರುವುದಾಗಿ ಹೇಳಿದರು. ಡಿಸೆಂಬರ್ 14 ರಂದು ದೆಹಲಿಯಲ್ಲಿ 'ವೋಟ್ ಚೋರಿ' ಕಾರ್ಯಕ್ರಮ ನಡೆಯುತ್ತಿದೆ. ಆದ್ದರಿಂದ ನಾವು ಪ್ರತಿ ಜಿಲ್ಲೆಯಿಂದ ಕನಿಷ್ಠ 300 ಕಾರ್ಯಕರ್ತರನ್ನು ದೆಹಲಿಗೆ ಕರೆದೊಯ್ಯುತ್ತಿದ್ದೇವೆ. ನಾವು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಅವರನ್ನು ದೆಹಲಿಗೆ ಕರೆದೊಯ್ಯಲು ವ್ಯವಸ್ಥೆ ಮಾಡುವಂತೆ ಜಿಲ್ಲಾ ಘಟಕಗಳಿಗೆ ಹೇಳಿದ್ದೇನೆ ಎಂದು ತಿಳಿಸಿದರು.

ವೇಣುಗೋಪಾಲ್ ಅವರನ್ನು ಸಿದ್ದರಾಮಯ್ಯ ಭೇಟಿಯಾದ ಬಗ್ಗೆ ಮಾತನಾಡಿದ ಶಿವಕುಮಾರ್, 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇಣುಗೋಪಾಲ್, ರಾಹುಲ್ ಗಾಂಧಿ ಅಥವಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದರು.

ವೇಣುಗೋಪಾಲ್ ಆಗಮನದ ನಂತರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅವರ ಬೆಂಬಲಿಗರು ಘೋಷಣೆ ಕೂಗಿದ್ದರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 'ಇದರಲ್ಲಿ ಏನು ತಪ್ಪಿದೆ?. ಕಳೆದ ಹತ್ತು ವರ್ಷಗಳಿಂದ ಜನರು ಡಿಕೆ ಡಿಕೆ 'ಎಂದು ಘೋಷಣೆಗಳನ್ನು ಕೂಗುತ್ತಿದ್ದಾರೆ. ಇದರಲ್ಲಿ ಹೊಸದೇನೂ ಇಲ್ಲ. ಕೆಲವರು ಮೋದಿ ಮೋದಿ ಎಂದು ಕೂಗುತ್ತಾರೆ ಮತ್ತು ಇನ್ನು ಕೆಲವರು ಡಿಕೆ ಡಿಕೆ ಎಂದು ಹೇಳುತ್ತಾರೆ. ರಾಹುಲ್ ರಾಹುಲ್' ಎಂದು ಮತ್ತು ಇನ್ನು ಕೆಲವರು ಸಿದ್ದು ಸಿದ್ದು' ಎಂದು ಕೂಗುವ ಜನರಿದ್ದಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ. ಅವರು ತಮ್ಮ ಪ್ರೀತಿ ಮತ್ತು ವಾತ್ಸಲ್ಯದಿಂದ ಘೋಷಣೆಗಳನ್ನು ಎತ್ತುತ್ತಾರೆ. ನಾವು ಅದನ್ನು ಕ್ರೀಡಾ ಮನೋಭಾವದಿಂದ ತೆಗೆದುಕೊಳ್ಳಬೇಕು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತಿಲ್ಲ: ದೆಹಲಿಯಲ್ಲಿ ಡಿ.ಕೆ ಶಿವಕುಮಾರ್

2nd ODI: ಭಾರತಕ್ಕೆ ಆಘಾತ ನೀಡಿದ ದಕ್ಷಿಣ ಆಫ್ರಿಕಾ, ಬೃಹತ್ ರನ್ ಚೇಸ್ ಮಾಡಿ ದಾಖಲೆ! ಸರಣಿ ಸಮಬಲ

Video: 'ಭಾರತ ಛಿದ್ರ ಛಿದ್ರ ಆದ್ರೇನೆ ಬಾಂಗ್ಲಾದೇಶದಲ್ಲಿ ಶಾಂತಿ'; ಮಾಜಿ ಸೇನಾ ಮುಖ್ಯಸ್ಥನ ಪ್ರಚೋದನಾ ಹೇಳಿಕೆ

ರೀಲ್ಸ್ ಮಾಡಲು ಗಂಟೆಗೆ 140 ಕಿ.ಮೀ ವೇಗದಲ್ಲಿ KTM ಬೈಕ್ ಚಾಲನೆ; ತಲೆ ತುಂಡಾಗಿ 'ಪಿಕೆಆರ್ ಬ್ಲಾಗರ್' ಸಾವು, Video!

ಸಂಚಾರ್ ಸಾಥಿ ಆ್ಯಪ್ ನಿಂದ Snooping ಅಸಾಧ್ಯ; ಪ್ರೀ-ಇನ್ಸ್ಟಾಲ್ ಕಡ್ಡಾಯ ಆದೇಶ ವಾಪಸ್: ಸಚಿವ ಸಿಂಧಿಯಾ; Video

SCROLL FOR NEXT