ಸಂಗ್ರಹ ಚಿತ್ರ 
ರಾಜ್ಯ

ದರ್ಶನ್ ಪ್ರಕರಣ: ಡಿಸೆಂಬರ್ 17ರಿಂದ ಸಾಕ್ಷ್ಯ ವಿಚಾರಣೆಗೆ ಕೋರ್ಟ್ ನಿರ್ಧಾರ; ರೇಣುಕಾಸ್ವಾಮಿ ತಂದೆ, ತಾಯಿಗೂ ಸಮನ್ಸ್

ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷಿಗಳ ವಿಚಾರಣೆಗೆ ದಿನಾಂಕ ನಿಗದಿ ಆಗಿದ್ದು ಡಿಸೆಂಬರ್ 17ರಿಂದ ಸಾಕ್ಷ್ಯ ವಿಚಾರಣೆ ಶುರು ಮಾಡಲು ಕೋರ್ಟ್ ನಿರ್ಧರಿಸಿದೆ.

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷಿಗಳ ವಿಚಾರಣೆಗೆ ದಿನಾಂಕ ನಿಗದಿ ಆಗಿದ್ದು ಡಿಸೆಂಬರ್ 17ರಿಂದ ಸಾಕ್ಷ್ಯ ವಿಚಾರಣೆ ಶುರು ಮಾಡಲು ಕೋರ್ಟ್ ನಿರ್ಧರಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಪರ ವಕೀಲ ಬಾಲನ್​ ಗೆ ಕೋರ್ಟ್​ನಿಂದ ಮಾಹಿತಿ ನೀಡಲಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್ ಸೇರಿ 7 ಆರೋಪಿಗಳು ಹಾಜರಾಗಿದ್ದರು. ಸಾಕ್ಷಿಗಳ ಪಟ್ಟಿಯನ್ನು ಸಹಾಯಕ ಎಸ್​ಪಿಪಿ ಸಚಿನ್ ಅವರು ಕೋರ್ಟ್​​ಗೆ ಸಲ್ಲಿಸಿದರು. ಪ್ರತ್ಯಕ್ಷ ಸಾಕ್ಷಿಗಳು, FSL ಸಾಕ್ಷಿಗಳು, ತಾಂತ್ರಿಕ ಸಾಕ್ಷಿಗಳ ಪ್ರತ್ಯೇಕ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಡಿಸೆಂಬರ್ 17ರಂದು ವಿಚಾರಣೆ ಶುರು ಆಗಲಿದ್ದು ರೇಣುಕಾಸ್ವಾಮಿ ತಂದೆ, ತಾಯಿಗೂ ಸಮನ್ಸ್ ನೀಡಲಾಗಿದೆ. ಈ ಪ್ರಕರಣದಲ್ಲಿ 260ಕ್ಕೂ ಅಧಿಕ ಸಾಕ್ಷಿಗಳು ಇವೆ. ಎಲ್ಲ ಸಾಕ್ಷಿಗಳ ವಿಚಾರಣೆ ಬಳಿಕ ಕೋರ್ಟ್ ಅಂತಿಮ ತೀರ್ಪು ನೀಡಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಮುಂತಾದ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಮನ ಹೆಸರಿನಲ್ಲಿ ಲೂಟಿ: ಸುಮಾರು 5,000 ಕೋಟಿ ರೂ ಹಣ ದುರ್ಬಳಕೆ, ಬಿಜೆಪಿ ವಿರುದ್ಧ ಖರ್ಗೆ ಕಿಡಿ!

ಶೀಘ್ರದಲ್ಲೇ ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿ ರಚನೆ: ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆ- ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕೆಲವೆಡೆ ಮೂರು ದಿನ ಭಾರಿ ಮಳೆ ಸಾಧ್ಯತೆ: ಸೋಮವಾರ 13 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್' ಘೋಷಣೆ

Women's T20 World Cup: ಮರಿಝಾನ್ ಕಾಪ್ ಸ್ಫೋಟಕ ಬ್ಯಾಟಿಂಗ್; ಭಾರತದ ವಿರುದ್ಧ ದಕ್ಷಿಣ ಆಫ್ರಿಕಾ 6 ವಿಕೆಟ್ ಭರ್ಜರಿ ಗೆಲುವು

ವಿಶ್ವ ಕ್ರಿಕೆಟಿನಲ್ಲಿ ಯಾರಿಗೂ ಸಾಧ್ಯವಾಗದ ಹೊಸ ದಾಖಲೆ ಬರೆದ ಭಾರತದ ಹರ್ಮನ್ ಪ್ರೀತ್ ಕೌರ್!