ಮಂಗಳೂರಿನಲ್ಲಿ ಪೊಲೀಸರಿಂದ ಗೌರವ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ  
ರಾಜ್ಯ

ಬಣ ಬಡಿದಾಟ: ಮಂಗಳೂರಿನಲ್ಲಿ ಸಿದ್ದರಾಮಯ್ಯ-ಡಿ.ಕೆ ಶಿವಕುಮಾರ್ ಬೆಂಬಲಿಗರಿಂದ ಜೈಕಾರ ಘೋಷಣೆ; Video

ಇಂದು ಮಂಗಳೂರು ವಿಮಾನ ನಿಲ್ದಾಣಕ್ಕ ಆಗಮಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರನ್ನು ಡಿ..ಕೆ, ಡಿ...ಕೆ... ಡಿ.ಕೆ ಮುಂದಿನ ಸಿಎಂ ಎಂದು ಜೈಕಾರ ಕೂಗುತ್ತಾ ಅವರ ಅಭಿಮಾನಿಗಳು ಸ್ವಾಗತಿಸಿದರು.

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಸಮಾಧಾನ, ಬಣ ರಾಜಕೀಯ ಇನ್ನೂ ಶಮನಗೊಂಡಿಲ್ಲ. ಇಂದು ಬುಧವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಡಿ ಕೆ ಶಿವಕುಮಾರ್ ಪರ ಘೋಷಣೆಗಳೊಂದಿಗೆ ಸ್ವಾಗತಿಸಲಾಯಿತು.

ಮಂಗಳೂರು ವಿಶ್ವವಿದ್ಯಾಲಯ ಆಯೋಜಿಸಿದ್ದ ಐತಿಹಾಸಿಕ ನಾರಾಯಣ ಗುರು-ಮಹಾತ್ಮ ಗಾಂಧಿ ಸಂವಾದದ ಶತಮಾನೋತ್ಸವ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಲು ವೇಣುಗೋಪಾಲ್ ಮಂಗಳೂರಿಗೆ ಆಗಮಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಪುಟ ಸಚಿವರು ಮತ್ತು ಹಿರಿಯ ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು.

ವೇಣುಗೋಪಾಲ್ ಟರ್ಮಿನಲ್‌ನಿಂದ ನಿರ್ಗಮಿಸುತ್ತಿದ್ದಂತೆ ಪಕ್ಷದ ಕಾರ್ಯಕರ್ತರ ಗುಂಪೊಂದು ಶಿವಕುಮಾರ್‌ಗೆ ಬೆಂಬಲ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿತು.

ಸಿದ್ದರಾಮಯ್ಯ ಇಲ್ಲಿಗೆ ಬಂದ ನಂತರ, ಅವರ ಬೆಂಬಲಿಗರು 'ಸಿದ್ದು, ಸಿದ್ದು, ಪೂರ್ಣಾವಧಿ ಸಿದ್ದು' (ಪೂರ್ಣಾವಧಿ ಸಿಎಂ ಸಿದ್ದರಾಮಯ್ಯ) ಎಂಬ ಘೋಷಣೆಗಳೊಂದಿಗೆ ಪ್ರತಿ ಘೋಷಣೆ ಕೂಗಿದರು.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್ ಪರ ಗುಂಪಿನ ನಾಯಕ ಮಿಥುನ್ ರೈ, ಪಕ್ಷದೊಳಗೆ ನಾಯಕರ ಮಧ್ಯೆ ಯಾವುದೇ ಪೈಪೋಟಿ ಇಲ್ಲ. ಆದರೆ ಅನೇಕ ಕಾರ್ಯಕರ್ತರು "ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವುದನ್ನು ನೋಡಲು ಸಂತೋಷಪಡುತ್ತಾರೆ" ಎಂದು ಒಪ್ಪಿಕೊಂಡರು.

ಈ ಘೋಷಣೆ ಕೂಗುವಿಕೆಯು ತಳಮಟ್ಟದ ಕಾರ್ಯಕರ್ತರಲ್ಲಿ ಉಪಮುಖ್ಯಮಂತ್ರಿಗಳಿಗೆ "ಸಹಜ ಪ್ರೀತಿ"ಯ ಅಭಿವ್ಯಕ್ತಿಯಾಗಿದೆ ಎಂದು ಅವರು ಬಣ್ಣಿಸಿದರು.

2023 ರಲ್ಲಿ ನಡೆದ ವಿಧಾನಸಭಾ ಚುನಾವಣೆಯ ಗೆಲುವಿನ ನಂತರ ಕರ್ನಾಟಕದ ಕಾಂಗ್ರೆಸ್ ನಾಯಕತ್ವ ಪರಿವರ್ತನೆಯ ಕುರಿತು ಪದೇ ಪದೇ ಪ್ರಶ್ನೆಗಳನ್ನು ಎದುರಿಸುತ್ತಿದೆ.

ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಇಬ್ಬರೂ ಸರ್ಕಾರ ಒಗ್ಗಟ್ಟಾಗಿದೆ ಎಂದು ಸಾರ್ವಜನಿಕವಾಗಿ ಸಮರ್ಥಿಸಿಕೊಂಡಿದ್ದರೂ, ಶಿವಕುಮಾರ್ ಅವರಿಗೆ ಸಿಎಂ ಹುದ್ದೆ ನೀಡಬೇಕೆಂದು ಬಹಿರಂಗವಾಗಿ ಬೆಂಬಲ ನೀಡುವ ಶಾಸಕರು ಸೇರಿದಂತೆ ಅವರ ಬೆಂಬಲಿಗರ ಇತ್ತೀಚಿನ ಹೇಳಿಕೆಗಳು ಸಿಎಂ ಹುದ್ದೆ ಬದಲಾವಣೆ ಚರ್ಚೆಯನ್ನು ಜೀವಂತವಾಗಿಸಿದೆ.

ಕಳೆದ ವಾರ, ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಮಾತುಕತೆಗಳನ್ನು ಆಧಾರರಹಿತ ಊಹಾಪೋಹ ಎಂದು ಸಿದ್ದರಾಮಯ್ಯ ತಳ್ಳಿಹಾಕಿದ್ದರು. ಪಕ್ಷವನ್ನು ಬಲಪಡಿಸುವುದು ಮತ್ತು ಆಡಳಿತವನ್ನು ನಿರ್ವಹಿಸುವುದರ ಮೇಲೆ ತಮ್ಮ ಗಮನವಿದೆ ಎಂದು ಡಿ ಕೆ ಶಿವಕುಮಾರ್ ಕೂಡ ಮಾಧ್ಯಮ ಪ್ರತಿನಿಧಿಗಳ ಮುಂದೆ ಹೇಳಿದ್ದರು.

ಸರ್ಕಾರ ಸ್ಥಿರವಾಗಿದೆ ಮತ್ತು ಸುಗಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳುವ ಮೂಲಕ ಹೈಕಮಾಂಡ್ ಈ ವಿಷಯವನ್ನು ತಣ್ಣಗಾಗಿಸಲು ಪ್ರಯತ್ನಿಸುತ್ತಿದೆ.

ಆದಾಗ್ಯೂ, ಮಂಗಳೂರಿನ ಘಟನೆಯನ್ನು ಪಕ್ಷದ ಕಾರ್ಯಕರ್ತರ ಒಂದು ವಿಭಾಗದಲ್ಲಿ, ವಿಶೇಷವಾಗಿ ರಾಜ್ಯದಲ್ಲಿ ಡಿ ಕೆ ಶಿವಕುಮಾರ್ ಅವರ ಸಾಂಸ್ಥಿಕ ಪ್ರಭಾವದೊಂದಿಗೆ ಗುರುತಿಸಿಕೊಂಡಿರುವವರಲ್ಲಿ ಕುದಿಯುತ್ತಿರುವ ಭಾವನೆಯ ಮತ್ತೊಂದು ಸೂಚನೆಯಾಗಿ ನೋಡಲಾಗುತ್ತಿದೆ.

ಅಹಿಂದ ನಾಯಕರು ಸಾಥ್

ಇಂದು ಮಂಗಳೂರಿಗೆ ತೆರಳಿದ ಸಿಎಂ ಸಿದ್ದರಾಮಯ್ಯನವರಿಗೆ ಅಹಿಂದ ನಾಯಕರು ಸಾಥ್ ನೀಡಿದ್ದಾರೆ. ಮಂಗಳೂರಿನ ಉಳ್ಳಾಲದಲ್ಲಿ ಗಾಂಧಿ- ಗುರು ಸಂವಾದದ 100 ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಬಿ ಕೆ ಹರಿಪ್ರಸಾದ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಅಹಿಂದ ಸಚಿವರು ಸಾಥ್ ನೀಡುತ್ತಿದ್ದು, ಆದರೆ ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ.

ಕೆಸಿ ವೇಣುಗೋಪಾಲ್ ಜೊತೆಗೆ ಚರ್ಚೆ

ಮಂಗಳೂರಿನಲ್ಲಿ ನಡೆಯುತ್ತಿರುವ ಗಾಂಧಿ ಗುರು ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಆಗಮಿಸಿದ್ದಾರೆ. ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಬಳಿಕ ವೇಣುಗೋಪಾಲ್ ಅವರ ಜೊತೆಗೆ ಸಿದ್ದರಾಮಯ್ಯ ಚರ್ಚೆ ಮಾಡುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲ್ಯಾಣ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣ: ರಾಜ್ಯ ಸರ್ಕಾರ ಪ್ರಸ್ತಾಪ

ಮನೆಗಳಿಗೆ ಎಲ್‌ಪಿಜಿ, ವಾಹನಗಳಿಗೆ ಸಿಎನ್‌ಜಿ ಪೂರೈಕೆ 100 ಪರ್ಸೆಂಟ್ ಗ್ಯಾರಂಟಿ: ಕೇಂದ್ರ ಭರವಸೆ

T20 World Cup ಗೆದ್ದ ಟೀಂ ಇಂಡಿಯಾಕ್ಕೆ 131 ಕೋಟಿ ರೂ. ಬಂಪರ್ ಬಹುಮಾನ! ದುಡ್ಡು ಹೇಗೆ ಹಂಚಿಕೆಯಾಗುತ್ತೆ ಗೊತ್ತಾ?

ICC ವಿರುದ್ಧ ಇಂಗ್ಲೆಂಡ್ ನ ಮಾಜಿ ನಾಯಕ ಮೈಕಲ್ ವಾನ್ ಆಕ್ರೋಶ! ಸ್ಫೋಟಕ ಪೋಸ್ಟ್, ಯಾಕೆ ಗೊತ್ತಾ?

ಬಿಕ್ಕಟ್ಟಿನ ಬೆನ್ನಲ್ಲೇ IndiGo CEO ಪೀಟರ್ ಎಲ್ಬರ್ಸ್ ರಾಜೀನಾಮೆ

SCROLL FOR NEXT