ಸಂಗ್ರಹ ಚಿತ್ರ  
ರಾಜ್ಯ

ಬೆಳಗಾವಿ ಚಳಿಗಾಲ ಅಧಿವೇಶನ: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ತಂತ್ರ, ತಿರುಗೇಟು ನೀಡಲು ಸಿಎಂ ಪ್ರತಿತಂತ್ರ

ಇಂದು ಮಧ್ಯಾಹ್ನ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಂಪುಟ ಸಭೆ ಪೂರ್ಣಗೊಂಡ ಬಳಿಕ ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ಸಚಿವರೊಂದಿಗೆ ಸಭೆ ನಡೆಯಲಿದ್ದಾರೆ.

ಬೆಂಗಳೂರು: ಡಿಸೆಂಬರ್ 8ರಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶ ಆರಂಭವಾಗುತ್ತಿದ್ದು, ಈ ನಡುವೆ ವಿಪಕ್ಷಗಳನ್ನು ಸಮರ್ಥವಾಗಿ ಎದುರಿಸಲು, ಕಾರ್ಯತಂತ್ರ ರೂಪಿಸಲು ಗುರುವಾರ ಸಂಜೆ ಸಚಿವರೊಂದಿಗೆ ಸಭೆ ನಡೆಸುತ್ತಿದ್ದಾರೆ.

ಇಂದು ಮಧ್ಯಾಹ್ನ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಂಪುಟ ಸಭೆ ಪೂರ್ಣಗೊಂಡ ಬಳಿಕ ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ಸಚಿವರೊಂದಿಗೆ ಸಭೆ ನಡೆಯಲಿದ್ದಾರೆ.

ವಿಧಾನಮಂಡಲ ಅಧಿವೇಶನದಲ್ಲಿ ಅಧಿಕಾರ ಹಂಚಿಕೆ ಕಿತ್ತಾಟ, ಮತ್ತಿತರ ವಿಷಯಗಳ ಪ್ರಸ್ತಾಪಿಸಿ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡನೆಗೆ ಸಿದ್ಧತೆ ನಡೆಸುತ್ತಿವೆ.

ಈ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಎತ್ತಬಹುದಾದ ವಿಚಾರಗಳಿಗೆ ಸರ್ಕಾರದಿಂದ ಯಾವ ರೀತಿಯ ತಿರುಹಗೇಟು ನೀಡಬೇಕೆಂಬ ಬಗ್ಗೆ ಸಚಿವರ ಸಭೆಯಲ್ಲಿ ಮುಖ್ಯಮಂತ್ರಿಗಳು ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಇದಲ್ಲದೆ, ವಿವಿಧ ಇಲಾಖೆಗಳಿಂದ ಮಂಡನೆಯಾಗಲಿರುವ ವಿಧೇಯಕಗಳ ಬಗ್ಗೆ, ಪ್ರತಿಪಕ್ಷಗಳು ಇಲಾಖಾವಾರು ಕೇಳುವ ಪ್ರಶ್ನೆಗಳಿಗೆ ಹೇಗೆ ಸಿದ್ಧತೆ ನಡೆಯಬೇಕು ಎಂಬ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂದು ಸಂಜೆ ರಷ್ಯಾ ಅಧ್ಯಕ್ಷ Vladimir Putin ಭಾರತಕ್ಕೆ ಆಗಮನ: ರಾತ್ರಿ ಪ್ರಧಾನಿ ಮೋದಿಯಿಂದ ಖಾಸಗಿ ಔತಣಕೂಟ

IPL ಸೇರಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ಮೋಹಿತ್ ಶರ್ಮಾ ನಿವೃತ್ತಿ ಘೋಷಣೆ

ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಾಗ; ಸಿಎಂ ಸಿದ್ದರಾಮಯ್ಯ

IndiGo: ಬರೊಬ್ಬರಿ 200 ವಿಮಾನಗಳ ಹಾರಾಟ ರದ್ದು, 'ಮುಚ್ಕೊಂಡ್ ಮನೆಗೆ ಹೋಗಿ..' 'crew shortage'ಗೆ ಪ್ರಯಾಣಿಕರ ಆಕ್ರೋಶ!

ದರ್ಶನ್ ಲಾಕಪ್ ಡೆತ್: 'ಸಿಐಡಿ ಅಲ್ಲ.. ನ್ಯಾಯಾಂಗ ತನಿಖೆಗೆ ಒಪ್ಪಿಸಿ': PUCL ಪ್ರತಿಭಟನೆ, ಪೊಲೀಸರಿಂದ ಹಣದ ಆಮಿಷ ಎಂದ ಪತ್ನಿ

SCROLL FOR NEXT