ಸಿದ್ದರಾಮಯ್ಯ ಭೇಟಿ ಮಾಡಿದ ರೇಣುಕಾಸ್ವಾಮಿ ತಂದೆ, ತಾಯಿ(ಸಂಗ್ರಹ ಚಿತ್ರ) 
ರಾಜ್ಯ

ನಟ ದರ್ಶನ್ ಪ್ರಕರಣ: ರೇಣುಕಾಸ್ವಾಮಿ ತಂದೆ, ತಾಯಿಗೂ ಸಮನ್ಸ್ ಜಾರಿ ಮಾಡಿದ ಕೋರ್ಟ್!

ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸ್ಥಳೀಯ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯ ನಂತರ ನ್ಯಾಯಾಧೀಶರು ಮೃತ ದುರ್ದೈವಿ ರೇಣುಕಾಸ್ವಾಮಿಯವರ ತಂದೆ ಹಾಗೂ ತಾಯಿಗೂ ಸಮನ್ಸ್ ಜಾರಿಗೊಳಿಸಿದ್ದಾರೆ.

ಬೆಂಗಳೂರು: ನಟ ದರ್ಶನ್ ಎರಡನೇ ಆರೋಪಿಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷಿಗಳ ವಿಚಾರಣೆಗೆ ದಿನಾಂಕ ನಿಗದಿ ಆಗಿದ್ದು, ಡಿಸೆಂಬರ್ 17ರಿಂದ ಸಾಕ್ಷ್ಯ ವಿಚಾರಣೆ ಆರಂಭವಾಗಲಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸ್ಥಳೀಯ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯ ನಂತರ ನ್ಯಾಯಾಧೀಶರು ಮೃತ ದುರ್ದೈವಿ ರೇಣುಕಾಸ್ವಾಮಿಯವರ ತಂದೆ ಹಾಗೂ ತಾಯಿಗೂ ಸಮನ್ಸ್ ಜಾರಿಗೊಳಿಸಿದ್ದಾರೆ.

ಡಿಸೆಂಬರ್ 17ರಿಂದ ಪ್ರಕರಣದ ಸಾಕ್ಷಿಗಳ ವಿಚಾರಣೆ ಆರಂಭವಾಗುತ್ತಿದ್ದು, ಸಹಾಯಕ ಎಸ್​ಪಿಪಿ ಸಚಿನ್ ಅವರು ಸಾಕ್ಷಿಗಳ ಪಟ್ಟಿಯನ್ನು ಕೋರ್ಟ್​​ಗೆ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ರೇಣುಕಾಸ್ವಾಮಿಯವರ ತಂದೆ, ತಾಯಿ ಹಾಗೂ ರೇಣುಕಾಸ್ವಾಮಿಯ ಮೃತದೇಹವನ್ನು ಮೊದಲು ನೋಡಿದ್ದ ಬೆಂಗಳೂರಿನ ವಾಚ್ ಮ್ಯಾನ್ ಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಪಟ್ಟಿಯಲ್ಲಿರುವ ಮೂವರಿಗೆ ಸಾಕ್ಷಿಗಳಿಗೆ ಸಮನ್ಸ್ ಜಾರಿಗೊಳಿಸಲಾಗಿದೆ. ಇನ್ನೂ ಯಾರಿಗೆ ಸಮನ್ಸ್ ಜಾರಿಗೊಳಿಸಬೇಕು ಎಂಬುದನ್ನು ಡಿ. 4ರಂದು ತೀರ್ಮಾನಿಸಲಾಗುತ್ತದೆ ಎಂದು ಹೇಳಿದ ನ್ಯಾಯಮೂರ್ತಿಗಳು ಪ್ರಕರಣದ ಮುಂದಿನ ವಿಚಾರಣೆಯನ್ನು ಡಿ. 17ಕ್ಕೆ ಮುಂದೂಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ – ಇರಾನ್‌ ಮಾತುಕತೆ ದಿಢೀರ್‌ ರದ್ದು; ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಗೆ ಪ್ಯಾಲೆಸ್ಟೈನ್ ಆಗ್ರಹ

ಬೆಂಗಳೂರಿನಲ್ಲಿ ವಿಚಿತ್ರ ಪ್ರಕರಣ: ₹50 ಲಕ್ಷ ಕೊಡಿ, ಇಲ್ಲಾಂದ್ರೆ HIV ಇರುವುದಾಗಿ ವದಂತಿ ಹಬ್ಬಿಸುತ್ತೇನೆ ಎಂದು ಬೆದರಿಕೆ; ಪತ್ನಿ ವಿರುದ್ಧವೇ ಉದ್ಯಮಿ ದೂರು!

ಮರು ಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೂಲಕ ನಕಲಿ NEET ಪ್ರಶ್ನೆ ಪತ್ರಿಕೆಗಳ ಮಾರಾಟ: ರಾಜಸ್ಥಾನ ಪೊಲೀಸರಿಂದ 19 ವರ್ಷದ ಯುವಕನ ಬಂಧನ

ನಟ ಅಲ್ಲು ಅರ್ಜುನ್‌ಗೆ ಹೈದರಾಬಾದ್ ಕೋರ್ಟ್ ಸಮನ್ಸ್; ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ

ಜಿಯೋ ಐಪಿಒ: 27 ಕೋಟಿ ಷೇರುಗಳಿಗೆ ಅನುಮೋದನೆ; ಪ್ರತಿ ಷೇರಿನ ಬೆಲೆ ಬಗ್ಗೆ ಇಲ್ಲಿದೆ ಮಾಹಿತಿ...