ಆರ್.ಅಶೋಕ, ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ 
ರಾಜ್ಯ

ಸಿಎಂ ಸಿದ್ದರಾಮಯ್ಯರೇ, ಅಹಿಂದ ಹೆಣ್ಣು ಮಕ್ಕಳ ಮೇಲೆ ಕಾಳಜಿ ಇದ್ದರೆ 'ಸರ್ಕಾರಿ ಹಾಸ್ಟೆಲ್ ಟೂರ್' ಮಾಡಿ- ಬಿಜೆಪಿ ಒತ್ತಾಯ

ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಮೆಚ್ಚಿಸಲು ಡಿ.ಕೆ.ಶಿವಕುಮಾರ್ ಅವರ ಮನೆ 'ಹೋಮ್ ಟೂರ್' ಮಾಡುವ ಬದಲು ಅವ್ಯವಸ್ಥೆಯ ಆಗರವಾಗಿರುವ "ಸರ್ಕಾರ ಹಾಸ್ಟೆಲ್ ಟೂರ್" ಮಾಡಿ ಎಂದು ಆರ್. ಅಶೋಕ್ ಒತ್ತಾಯಿಸಿದ್ದಾರೆ.

ಬೆಂಗಳೂರು: ರಾಜ್ಯದ ವಿವಿಧೆಡೆ ಸರ್ಕಾರಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಒಬಿಸಿ ಹಾಸ್ಟೆಲ್ ಗಳಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯರು ಗರ್ಭಿಣಿ ಆಗುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಈ ಕುರಿತ ವರದಿಯೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಪ್ರತಿಪಕ್ಷ ನಾಯಕ ಆರ್, ಅಶೋಕ, ಸಿಎಂ ಸಿದ್ದರಾಮಯ್ಯರೇ, ಅಹಿಂದ ಹೆಣ್ಣು ಮಕ್ಕಳ ಮೇಲೆ ಕಾಳಜಿ ಇದ್ದರೆ 'ಸರ್ಕಾರಿ ಹಾಸ್ಟೆಲ್ ಟೂರ್' ಮಾಡಿ ಎಂದು ಒತ್ತಾಯಿಸಿದ್ದಾರೆ.

ಬಡ ಕುಟುಂಬದ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಆಸರೆಯಾಗಿರುವ ಸರ್ಕಾರಿ ಎಸ್ಸಿ-ಎಸ್ಟಿ, ಒಬಿಸಿ ಹಾಸ್ಟೆಲ್ ಗಳಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯರು ಗರ್ಭಿಣಿ ಆಗುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವುದು ಅತ್ಯಂತ ಅಂತಕಕಾರಿ ಬೆಳವಣಿಗೆಯಾಗಿದ್ದು, ಇದನ್ನ ರಾಜ್ಯ ಸರ್ಕಾರ ಗಂಬೀರವಾಗಿ ಪರಿಗಣಿಸಿ ಈ ಪಿಡುಗನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯ ಅವರಿಗೆ ನಿಜವಾಗಿಯೂ ದಲಿತರು, ಹಿಂದುಳಿದ ವರ್ಗಗಳು, ಬಡವರ ಮನೆಯ ಹೆಣ್ಣುಮಕ್ಕಳ ಮೇಲೆ ಕಾಳಜಿ ಇದ್ದರೆ, ಹೈಕಮಾಂಡ್ ಮೆಚ್ಚಿಸಲು ಡಿ.ಕೆ.ಶಿವಕುಮಾರ್ ಅವರ ಮನೆ 'ಹೋಮ್ ಟೂರ್' ಮಾಡುವ ಬದಲು ಅವ್ಯವಸ್ಥೆಯ ಆಗರವಾಗಿರುವ "ಸರ್ಕಾರ ಹಾಸ್ಟೆಲ್ ಟೂರ್" ಮಾಡಿ, ಶ್ರೀಮಂತರ ಮನೆಯಲ್ಲಿ ರುಚಿಯಾದ ನಾಟಿಕೋಳಿ ಅಡುಗೆ ಮಾಡಿಸಿಕೊಂಡು ತಿನ್ನುವ ಬದಲು ಸರ್ಕಾರಿ ಹಾಸ್ಟೆಲ್ ಗಳಲ್ಲಿ ಬಡ ಮಕ್ಕಳಿಗೆ ಉಣಬಡಿಸುವ "ರುಚಿ-ಶುಚಿ"ಯಾದ ಊಟವನ್ನು ಒಮ್ಮೆ ತಿಂದು ನೋಡಿ ಸ್ವಾಮಿ ಎಂದು ಪೋಸ್ಟ್ ಮಾಡಿದ್ದಾರೆ.

ಅಹಿಂದ ಹೆಸರಿನಲ್ಲಿ ದಲಿತರು, ಹಿಂದುಳಿದವರ ವೋಟು ಗಿಟ್ಟಿಸಿಕೊಂಡು ಅಧಿಕಾರ ಅನುಭವಿಸಿದ್ದು ಬಿಟ್ಟರೆ ನೀವು ಅವರಿಗೆ ಕೊಟ್ಟ ಕೊಡುಗೆಯಾದರೂ ಏನು ಸ್ವಾಮಿ? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ತುರ್ತು ಕಾರಣ'ಗಳಿಂದಾಗಿ ಎಲ್ಲಾ ಅಧ್ವಾನವಾಯಿತು: ವಿಮಾನಗಳ ರದ್ದತಿ ಕುರಿತು IndiGo ಸ್ಪಷ್ಟನೆ

ಕೆಂಪೇಗೌಡ ಏರ್ ಪೋರ್ಟ್ ಲ್ಲಿ 62 ವಿಮಾನ ಸೇರಿ 200ಕ್ಕೂ ಹೆಚ್ಚು ಇಂಡಿಗೋ ವಿಮಾನ ಹಾರಾಟ ರದ್ದು; ಕಾರಣವೇನು?: ತನಿಖೆ ಆರಂಭಿಸಿದ DGCA

ಸಂಚಾರಿ ಸಾಥಿ ಆ್ಯಪ್: ಮೋದಿ ಸರ್ಕಾರ 'ಯೂ ಟರ್ನ್', ಮಧ್ಯಮ ವರ್ಗದ ಜನರಿಗೆ ಸಿಕ್ಕ ಅಪರೂಪದ ಜಯ! ಹೇಗೆ?

ಆಪರೇಷನ್ ಟ್ರೈಡೆಂಟ್: ಭಾರತ ಏಕೆ ಡಿಸೆಂಬರ್ 4ರಂದು ನೌಕಾಪಡೆಯ ದಿನವನ್ನು ಆಚರಿಸುತ್ತದೆ?

ನನ್ನ ಜ್ಯೋತಿಷಿ ಗುರುಗಳಿಗೆ 4 ನೇ ಹಂತದ ಕ್ಯಾನ್ಸರ್ ಇದೆ: ನಿದ್ರೆ ಇಲ್ಲದ ರಾತ್ರಿ ಕಳೆದಿದ್ದೇನೆ, ಕೌತುಕ ಹುಟ್ಟಿಸಿದ ರಾಜ್ ನಿಡಿಮೋರು ಮಾಜಿ ಪತ್ನಿ!

SCROLL FOR NEXT