ಸಚಿವ ರಾಮಲಿಂಗಾರೆಡ್ಡಿ 
ರಾಜ್ಯ

ಮೃತ ‘KSRTC ಸಿಬ್ಬಂದಿ’ಗಳ ಕುಟುಂಬಕ್ಕೆ ‘ತಲಾ 1 ಕೋಟಿ ಪರಿಹಾರ’ ವಿತರಿಸಿದ ಸಚಿವ ರಾಮಲಿಂಗಾ ರೆಡ್ಡಿ

ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ 31 ಸಿಬ್ಬಂದಿಗಳ ಅವಲಂಬಿತರಿಗೆ ತಲಾ ರೂ.10 ಲಕ್ಷದಂತೆ, ರೂ. 3.10 ಕೋಟಿ ಪರಿಹಾರ ಹಾಗೂ ಇಬ್ಬರು ಅವಲಂಬಿತರಿಗೆ ರೂ.14 ಲಕ್ಷದಂತೆ ರೂ.28 ಲಕ್ಷ ನೀಡಲಾಯಿತು.

ಬೆಂಗಳೂರು: ಸಾರಿಗೆ ಸುರಕ್ಷಾ ಅಪಘಾತ ವಿಮಾ ಯೋಜನೆ'ಯ ಅಡಿಯಲ್ಲಿ ಕರ್ತವ್ಯದ ವೇಳೆ ಮೃತಪಟ್ಟ ಮೂವರು ಕೆಎಸ್ಆರ್'ಟಿಸಿ ಸಿಬ್ಬಂದಿಯ ಕುಟುಂಬಕ್ಕೆ ತಲಾ ರೂ.1 ಕೋಟಿ ಪರಿಹಾರ ನೀಡಿರುವುದಾಗಿ ಸಾರಿಕೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ 31 ಸಿಬ್ಬಂದಿಗಳ ಅವಲಂಬಿತರಿಗೆ ತಲಾ ರೂ.10 ಲಕ್ಷದಂತೆ, ರೂ. 3.10 ಕೋಟಿ ಪರಿಹಾರ ಹಾಗೂ ಇಬ್ಬರು ಅವಲಂಬಿತರಿಗೆ ರೂ.14 ಲಕ್ಷದಂತೆ ರೂ.28 ಲಕ್ಷ ನೀಡಲಾಯಿತು. ಒಟ್ಟು 183 ಉದ್ಯೋಗಿಗಳಿಗೆ 18.38 ಕೋಟಿ ರೂ.ಗಳ ಸಹಾಯವನ್ನು ನೀಡಲಾಯಿತು ಎಂದು ಮಾಹಿತಿ ನೀಡಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಈ ಮೊತ್ತವನ್ನು ವಿತರಣೆ ಮಾಡಿದರು.

ಇದೇ ವೇಳೆ ಸಚಿವರು ರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಹೊಸ ವಾಣಿಜ್ಯ ನಿರ್ವಹಣಾ-ಇ ವಾಣಿಜ್ಯ ಸಾಫ್ಟ್‌ವೇರ್'ಗೆ ಚಾಲನೆ ನೀಡಿದರು.

ಈ ಸಾಫ್ಟ್‌ವೇರ್ ಹಸ್ತಚಾಲಿತ ವ್ಯವಸ್ಥೆಯನ್ನು ಬದಲಾಯಿಸಲಿದೆ. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿ 1,847 ವಾಣಿಜ್ಯ ಸಂಸ್ಥೆಗಳನ್ನು ಹಳೆಯ ವ್ಯವಸ್ಥೆಯಲ್ಲಿ ನಿರ್ವಹಿಸಲಾಗುತ್ತಿತ್ತು, ಅಲ್ಲಿ ಮಾಸಿಕ ಪರವಾನಗಿ ಶುಲ್ಕಗಳು, ಜಿಎಸ್‌ಟಿ, ದಂಡಗಳು ಮತ್ತು ಇನ್‌ವಾಯ್ಸ್‌ಗಳನ್ನು ಹಸ್ತಚಾಲಿತವಾಗಿ ನಿರ್ವಹಿಸಲಾಗುತ್ತಿತ್ತು, ಇದರಿಂದ ಆಗಾಗ್ಗೆ ವಿಳಂಬ ಮತ್ತು ದೋಷಗಳಿಗೆ ಕಾರಣವಾಗಿತ್ತು.

ಇದೀಗ ಅಭಿವೃದ್ಧಿಪಡಿಸಲಾದ ಸಾಫ್ಟ್ ವೇರ್, ಇ-ವಾಣೀಜ್ಯ, ಸ್ಟಾಲ್‌ಗಳು, ರಿಫ್ರೆಶ್‌ಮೆಂಟ್ ಕೊಠಡಿಗಳು ಮತ್ತು ವಾಣಿಜ್ಯ ಘಟಕಗಳನ್ನು ನಿರ್ವಹಿಸುವಲ್ಲಿ ದಕ್ಷತೆ ಮತ್ತು ಏಕರೂಪತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೆಂಪೇಗೌಡ ಏರ್ ಪೋರ್ಟ್ ಲ್ಲಿ 62 ವಿಮಾನ ಸೇರಿ 200ಕ್ಕೂ ಹೆಚ್ಚು ಇಂಡಿಗೋ ವಿಮಾನ ಹಾರಾಟ ರದ್ದು; ಕಾರಣವೇನು?: ತನಿಖೆ ಆರಂಭಿಸಿದ DGCA

ಸಂಚಾರಿ ಸಾಥಿ ಆ್ಯಪ್: ಮೋದಿ ಸರ್ಕಾರ 'ಯೂ ಟರ್ನ್', ಮಧ್ಯಮ ವರ್ಗದ ಜನರಿಗೆ ಸಿಕ್ಕ ಅಪರೂಪದ ಜಯ! ಹೇಗೆ?

ಆಪರೇಷನ್ ಟ್ರೈಡೆಂಟ್: ಭಾರತ ಏಕೆ ಡಿಸೆಂಬರ್ 4ರಂದು ನೌಕಾಪಡೆಯ ದಿನವನ್ನು ಆಚರಿಸುತ್ತದೆ?

ನನ್ನ ಜ್ಯೋತಿಷಿ ಗುರುಗಳಿಗೆ 4 ನೇ ಹಂತದ ಕ್ಯಾನ್ಸರ್ ಇದೆ: ನಿದ್ರೆ ಇಲ್ಲದ ರಾತ್ರಿ ಕಳೆದಿದ್ದೇನೆ, ಕೌತುಕ ಹುಟ್ಟಿಸಿದ ರಾಜ್ ನಿಡಿಮೋರು ಮಾಜಿ ಪತ್ನಿ!

ಇಂದು ಸಂಜೆ ರಷ್ಯಾ ಅಧ್ಯಕ್ಷ Vladimir Putin ಭಾರತಕ್ಕೆ ಆಗಮನ: ರಾತ್ರಿ ಪ್ರಧಾನಿ ಮೋದಿಯಿಂದ ಖಾಸಗಿ ಔತಣಕೂಟ

SCROLL FOR NEXT