ನೌಕಾನೆಲೆ ಬಳಿ ಚಿರತೆ ಕಾಣಿಸಿಕೊಂಡಿರುವುದು. 
ರಾಜ್ಯ

ಕಾರವಾರ ನೌಕಾ ನೆಲೆಯಲ್ಲಿ ಚಿರತೆ ಪ್ರತ್ಯಕ್ಷ: ವೀಡಿಯೋ ವೈರಲ್; ಸ್ಥಳೀಯ ನಿವಾಸಿಗಳಲ್ಲಿ ಆತಂಕ

ನೌಕಾನೆಲೆ ವಸತಿ ಗೃಹದ ಬಳಿಕ ಚಿರತೆ ಕಾಣಿಸಿಕೊಂಡಿದ್ದು, ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಳಿಯ ಕದಂಬ ನೌಕಾನೆಲೆ ಬಳಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಇದು ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.

ನೌಕಾನೆಲೆ ವಸತಿ ಗೃಹದ ಬಳಿಕ ಚಿರತೆ ಕಾಣಿಸಿಕೊಂಡಿದ್ದು, ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳನ್ನು ಮನೆಯೊಳಗೆ ಇರುವಂತೆ ಎಚ್ಚರಿಕೆ ನೀಡಲಾಗಿದೆ.

ವಿಡಿಯೋದಲ್ಲಿ ಆರ್ಗಾದಲ್ಲಿರುವ ನೌಕಾಪಡೆ ಸಿಬ್ಬಂದಿ ವಸತಿ ನಿಲಯದ ಬಳಿ ಚಿರತೆ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ,

ಈ ಹಿಂದೆ ಕೂಡ ಇದೇ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಆದರೆ, ಯಾವುದೇ ಆಪಾಯಗಳು ಸಂಭವಿಸಿರಲಿಲ್ಲ. ಚಿರತೆಯ ಜೊತೆಗೆ ಕಾಡುಹಂದಿಗಳು ಮತ್ತು ಇತರ ಪ್ರಾಣಿಗಳು ಕೂಡ ಕಾಣಿಸಿಕೊಂಡಿತ್ತು.

ಈ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ, ಸ್ಥಳೀಯ ನಿವಾಸಿಗಳಿಗೆ ಮನೆಯೊಳಗೆ ಇರುವಂತೆ ಸಲಹೆ ನೀಡಿದೆ. ಸ್ಥಳದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯ ನಿವಾಸಿಗಳು ಎಚ್ಚರಿಕೆಯಿಂದಿರಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ; ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸೂಚನೆ

'ಗಿಲ್ಲಿ 'ಬಡವ' ಅಂತ ಅನ್ನೋದಾದ್ರೆ, BiggBoss ವ್ಯಕ್ತಿತ್ವದ ಆಟ ಹೇಗಾಯ್ತು? ಅಶ್ವಿನಿ ಗೌಡ ಬೇಸರ

25 ಲಕ್ಷ ರೂ. ಲಂಚ ಪ್ರಕರಣ: ಅಬಕಾರಿ ಸಚಿವ ತಿಮ್ಮಾಪುರ ವಿರುದ್ಧ ಲೋಕಾಯುಕ್ತಕ್ಕೆ ದೂರು

GBA ಚುನಾವಣೆ: EVM ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆಗೆ ಚುನಾವಣಾ ಆಯೋಗದ ನಿರ್ಧಾರ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಗೆ ಜೂನ್, 2026ರಲ್ಲಿ ಜಾಮೀನು, 2029ರಲ್ಲಿ ಪ್ರಕರಣದಿಂದಲೇ ಖುಲಾಸೆ: ಜ್ಯೋತಿಷಿ ಭವಿಷ್ಯ!

SCROLL FOR NEXT