ಅಮೂಲ್ಯ ಮತ್ತು ಅಭಿಷೇಕ್  
ರಾಜ್ಯ

ಬೆಂಗಳೂರು: ಮನೆಯವರ ವಿರೋಧದ ನಡುವೆ ಪ್ರೇಮ ವಿವಾಹ; ಮೂರೇ ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆ!

ಅಮೂಲ್ಯ- ಅಭಿಷೇಕ್‌ ಪ್ರೇಮಕ್ಕೆ ಮನೆಯವರ ವಿರೋಧವಿತ್ತು. ಕೊನೆಗೆ ಹೇಗೋ ಇಬ್ಬರು ಕುಟುಂಬದವರನ್ನ ಒಪ್ಪಿಸಿ ಮೂರು ತಿಂಗಳ ಹಿಂದಷ್ಟೇ ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಬೆಂಗಳೂರು: ಮನೆಯವರ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಮೂರೇ ತಿಂಗಳಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅಂದ್ರಹಳ್ಳಿಯ ವಿದ್ಯಮಾನ್ಯ ನಗರದಲ್ಲಿ ನಡೆದಿದೆ.

ಅಮೂಲ್ಯ ನೇಣಿಗೆ ಶರಣಾದ ವಿವಾಹಿತೆ. ಅಮೂಲ್ಯ-ಅಭಿಷೇಕ್‌ ಪ್ರೇಮಕ್ಕೆ ಮನೆಯವರ ವಿರೋಧವಿತ್ತು. ಕೊನೆಗೆ ಹೇಗೋ ಇಬ್ಬರು ಕುಟುಂಬದವರನ್ನ ಒಪ್ಪಿಸಿ ಮೂರು ತಿಂಗಳ ಹಿಂದಷ್ಟೇ ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರೋದು ಅನುಮಾನ ಮೂಡಿಸಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಮೃತ ಅಮೂಲ್ಯ ಕುಟುಂಬಸ್ಥರು ಮಗಳ ಸಾವಿಗೆ ಪತಿ ಅಭಿಷೇಕ್‌ ಕಾರಣ ಅಂತ ಆರೋಪಿಸಿದ್ದಾರೆ. ಪತಿಗೆ ಪತ್ನಿಯ ಮೇಲೆ ಅನುಮಾನ ಇತ್ತು, ಯಾರ ಜೊತೆಗೂ ಮಾತಾಡೋಕೆ ಬಿಡುತ್ತಾ ಇರಲಿಲ್ಲ. ಆಡುಗೆ ಮಾಡೋಕೆ ಬರೋದಿಲ್ಲ ಎಂದು ಕಿರುಕುಳ ಕೊಡುತ್ತಿದ್ದರು. ಅವರೇ ಹೊಡೆದು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆ ಬ್ಯಾಡರಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪತಿ ಅಭಿಷೇಕ್‌ನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಸರ್ಕಾರದ ಆಳ್ವಿಕೆಯಲ್ಲಿ ತಗ್ಗಿದ ಅಪರಾಧ ಪ್ರಮಾಣ: ಗಡಿಗಳ ಮೂಲಕ ಅಕ್ರಮ ಬಾಂಗ್ಲಾದೇಶಿಗಳ ಪ್ರವೇಶ; ಗಡಿ ಕಾಪಾಡುವ ಜವಾಬ್ದಾರಿ ಯಾರದ್ದು?

ಗ್ರಾಮ ಪಂಚಾಯಿತಿ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ- ಪ್ರಿಯಾಂಕ್ ಖರ್ಗೆ

ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು 6 ವರ್ಷದ ಮಗಳನ್ನು ಕಾಲುವೆಗೆ ತಳ್ಳಿ ಕೊಂದ ಅಪ್ಪ!

ಅನುದಾನ ಲಭ್ಯತೆ ಅನುಸಾರ ಯಗಚಿ ಎಡದಂಡೆ ನಾಲೆಗಳ ಭೂಸ್ವಾಧೀನ: ಡಿ.ಕೆ. ಶಿವಕುಮಾರ್

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಕಾಳ್ಗಿಚ್ಚು: ಎಕರೆಗಟ್ಟಲೆ ಹುಲ್ಲುಗಾವಲು ಭಸ್ಮ; ಬೆಂಕಿ ನಂದಿಸಲು ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸ

SCROLL FOR NEXT