ಮಳೆ  
ರಾಜ್ಯ

Karnataka Rain- ದಿತ್ವಾ ಚಂಡಮಾರುತ ಪ್ರಭಾವ: ಕರಾವಳಿ, ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ

ನಿನ್ನೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರ್ನಾಟಕದ ಹಲವು ಕಡೆ ಮಳೆಯಾಗಿದೆ. ತಮಿಳುನಾಡು-ಪುದುಚೇರಿ ಕರಾವಳಿಯ ಕಡೆ ವಾಯುಭಾರ ಕುಸಿತದಿಂದ ಕರ್ನಾಟಕದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಯೆಲ್ಲೋ ಅಲರ್ಟ್ ನೀಡಿದೆ.

ಬೆಂಗಳೂರು: ದಿತ್ವಾ ಚಂಡಮಾರುತ ಪ್ರಭಾವದಿಂದ ವಾಯುಭಾರ ಕುಸಿತ ಉಂಟಾಗಿ ಬೆಂಗಳೂರು ಮತ್ತು ಕರ್ನಾಟಕದ ಹಲವಾರು ಕರಾವಳಿ ಜಿಲ್ಲೆಗಳಲ್ಲಿ ನಿನ್ನೆಯಿಂದ ವ್ಯಾಪಕ ಮಳೆಯಾಗುತ್ತಿದೆ. ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ನಿನ್ನೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರ್ನಾಟಕದ ಹಲವು ಕಡೆ ಮಳೆಯಾಗಿದೆ. ತಮಿಳುನಾಡು-ಪುದುಚೇರಿ ಕರಾವಳಿಯ ಕಡೆ ವಾಯುಭಾರ ಕುಸಿತದಿಂದ ಕರ್ನಾಟಕದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಯೆಲ್ಲೋ ಅಲರ್ಟ್ ನೀಡಿದೆ.

ಮುಂದಿನ ಮೂರು ದಿನ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಉತ್ತರ ಕನ್ನಡ, ಬಳ್ಳಾರಿ, ದಾವಣಗೆರ, ಶಿವಮೊಗ್ಗ, ಉಡುಪ, ಚಿಕ್ಕಮಗಳೂರ, ದಕ್ಷಿಣ ಕನ್ನ, ಕೊಡಗು, ಮೈಸೂರ, ಚಾಮರಾಜನಗ, ರಾಮನಗರ, ಬೆಂಗಳೂರು ಗ್ರಾಮೀಣ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್​​ ಮಾಡಲಾಗಿದೆ.

ಬಂಗಾಳಕೊಲ್ಲಿಯ ನೈಋತ್ಯ ಮತ್ತು ಉತ್ತರ ತಮಿಳುನಾಡು, ಪುದುಚೇರಿ ಕರಾವಳಿಗಳಲ್ಲಿ ಉಂಟಾಗಿರುವ ದಿತ್ವಾ ಚಂಡಮಾರುತದಿಂದ ವಾಯುಭಾರ ಕುಸಿತದಿಂದ ನಿಧಾನವಾಗಿ ದಕ್ಷಿಣ-ನೈಋತ್ಯ ದಿಕ್ಕಿಗೆ ಚಲಿಸುತ್ತಿದೆ. ಇದರಿಂದ ಬಳ್ಳಾರಿ, ವಿಜಯನಗರ, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಸಾಧಾರಣ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೆಂಪೇಗೌಡ ಏರ್ ಪೋರ್ಟ್ ಲ್ಲಿ 62 ವಿಮಾನ ಸೇರಿ 200ಕ್ಕೂ ಹೆಚ್ಚು ಇಂಡಿಗೋ ವಿಮಾನ ಹಾರಾಟ ರದ್ದು; ಕಾರಣವೇನು?: ತನಿಖೆ ಆರಂಭಿಸಿದ DGCA

ಸಂಚಾರಿ ಸಾಥಿ ಆ್ಯಪ್: ಮೋದಿ ಸರ್ಕಾರ 'ಯೂ ಟರ್ನ್', ಮಧ್ಯಮ ವರ್ಗದ ಜನರಿಗೆ ಸಿಕ್ಕ ಅಪರೂಪದ ಜಯ! ಹೇಗೆ?

ಆಪರೇಷನ್ ಟ್ರೈಡೆಂಟ್: ಭಾರತ ಏಕೆ ಡಿಸೆಂಬರ್ 4ರಂದು ನೌಕಾಪಡೆಯ ದಿನವನ್ನು ಆಚರಿಸುತ್ತದೆ?

ನನ್ನ ಜ್ಯೋತಿಷಿ ಗುರುಗಳಿಗೆ 4 ನೇ ಹಂತದ ಕ್ಯಾನ್ಸರ್ ಇದೆ: ನಿದ್ರೆ ಇಲ್ಲದ ರಾತ್ರಿ ಕಳೆದಿದ್ದೇನೆ, ಕೌತುಕ ಹುಟ್ಟಿಸಿದ ರಾಜ್ ನಿಡಿಮೋರು ಮಾಜಿ ಪತ್ನಿ!

ಇಂದು ಸಂಜೆ ರಷ್ಯಾ ಅಧ್ಯಕ್ಷ Vladimir Putin ಭಾರತಕ್ಕೆ ಆಗಮನ: ರಾತ್ರಿ ಪ್ರಧಾನಿ ಮೋದಿಯಿಂದ ಖಾಸಗಿ ಔತಣಕೂಟ

SCROLL FOR NEXT