ಬಿಎನ್ ಅರುಣ್ ಕುಮಾರ್, ಎಚ್‌ಕೆ ಶ್ರೀನಿವಾಸಮೂರ್ತಿ Photo | Special arrangement
ರಾಜ್ಯ

YouTube ವಿಡಿಯೋ ನೋಡಿ ಕಳ್ಳತನ: ಪರಿಚಯಸ್ಥ ಉದ್ಯಮಿ ಮನೆಯಲ್ಲಿ 1.14 ಕೋಟಿ ರೂ ದರೋಡೆ..!

ಹುಲಿಮಂಗಲದ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುವ ಉದ್ಯಮಿ ಸುನೀಲ್ ಕುಮಾರ್ ಆರ್ (35) ಅವರ ಮನೆಗೆ ನವೆಂಬರ್ 8 ರಂದು ನುಗ್ಗಿದ್ದ ಆರೋಪಿಗಳು, ಮನೆಯಲ್ಲಿದ್ದ ನಗದು ಮತ್ತು ಚಿನ್ನಾಭರಣ ದೋಚಿ ಪರಾರಿಯಾಗಿದ್ದರು.

ಬೆಂಗಳೂರು: ಯೂಟ್ಯೂಬ್‍ನಲ್ಲಿ ವಿಡಿಯೋ ನೋಡಿ ಪರಿಚಯಸ್ಥ ಉದ್ಯಮಿಯೊಬ್ಬರ ಮನೆಯಲ್ಲಿ 1 ಕೋಟಿ ರೂ.ಗೂ ಅಧಿಕ ಹಣ ಹಾಗೂ ಚಿನ್ನಾಭರಣ ದೋಚಿದ್ದ ಇಬ್ಬರು ಆರೋಪಿಗಳನ್ನು ಹೆಬ್ಬಗೋಡಿ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ಚಿಕ್ಕಪೇಟೆಯಲ್ಲಿ ಬಟ್ಟೆ ಅಂಗಡಿ ಹೊಂದಿರುವ ಬೆಂಗಳೂರು ದಕ್ಷಿಣ ಜಿಲ್ಲೆಯ ವಿಘ್ನೇಶ್ವರ ನಗರದ ನಿವಾಸಿ ಎಚ್‌ಕೆ ಶ್ರೀನಿವಾಸಮೂರ್ತಿ (39) ಮತ್ತು ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿರುವ ಮಾಗಡಿ ಮುಖ್ಯ ರಸ್ತೆಯ ನಿವಾಸಿ ಬಿಎನ್ ಅರುಣ್ ಕುಮಾರ್ (39) ಬಂಧಿತರು.

ಹುಲಿಮಂಗಲದ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುವ ಉದ್ಯಮಿ ಸುನೀಲ್ ಕುಮಾರ್ ಆರ್ (35) ಅವರ ಮನೆಗೆ ನವೆಂಬರ್ 8 ರಂದು ನುಗ್ಗಿದ್ದ ಆರೋಪಿಗಳು, ಮನೆಯಲ್ಲಿದ್ದ ನಗದು ಮತ್ತು ಚಿನ್ನಾಭರಣ ದೋಚಿ ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಶ್ರೀನಿವಾಸಮೂರ್ತಿ, ಸುನೀಲ್ ಅವರ ದೂರದ ಸಂಬಂಧಿಯಾಗಿದ್ದು, ಅವರ ವ್ಯವಹಾರ ವ್ಯವಹಾರಗಳ ಬಗ್ಗೆ ಚೆನ್ನಾಗಿ ತಿಳಿದುಕೊಂಡಿದ್ದ.

ಈ ನಡುವೆ ತನ್ನ ವ್ಯವಹಾರದಲ್ಲಿ ನಷ್ಟ ಅನುಭವಿಸಿದ್ದ ಶ್ರೀನಿವಾಸ ಮೂರ್ತಿ, ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದ. ಹೀಗಾಗಿ ಅರುಣ್ ಕುಮಾರ್ ಜೊತೆಗೂಡಿ ಕಳ್ಳತನಕ್ಕೆ ಸಂಚು ರೂಪಿಸಿದ್ದ.

ಕಳೆದ ಕೆಲವು ತಿಂಗಳುಗಳಿಂದ ಇಬ್ಬರೂ ಸುನಿಲ್ ಕುಮಾರ್ ಅವರ ಮನೆಯ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದರು. ಎರಡು ವಿಫಲ ಪ್ರಯತ್ನಗಳನ್ನೂ ಮಾಡಿದ್ದರು. ನವೆಂಬರ್ 8 ರಂದು ಹೆಲ್ಮೆಟ್ ಮತ್ತು ಮಾಸ್ಕ್ ಧರಿಸಿ ಬಂದಿರುವ ಆರೋಪಿಗಳು ಸುನೀಲ್ ಅವರ ಮನೆಯ ಬಾಗಿಲು ಮುರಿದು, ಒಳ ನುಗ್ಗಿ ನಗದು ಹಾಗೂ ಚಿನ್ನವನ್ನು ದೋಚಿದ್ದರು.

ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, 1.14 ಕೋಟಿ ರೂ. ನಗದು, 16 ಗ್ರಾಂ. ಚಿನ್ನಾಭರಣ ಹಾಗೂ ಒಂದು ಕಾರನ್ನು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ತುರ್ತು ಕಾರಣ'ಗಳಿಂದಾಗಿ ಎಲ್ಲಾ ಅಧ್ವಾನವಾಯಿತು: ವಿಮಾನಗಳ ರದ್ದತಿ ಕುರಿತು IndiGo ಸ್ಪಷ್ಟನೆ

ಪಶ್ಚಿಮ ಬಂಗಾಳ: 'ಬಾಬರಿ ಮಸೀದಿ' ನಿರ್ಮಾಣದ ಪ್ಲಾನ್, TMC ಶಾಸಕ ಹುಮಾಯೂನ್ ಕಬೀರ್ ಅಮಾನತು, ಹೊಸ ಪಕ್ಷ ರಚನೆಯ ಘೋಷಣೆ!

ಕೆಂಪೇಗೌಡ ಏರ್ ಪೋರ್ಟ್ ಲ್ಲಿ 62 ವಿಮಾನ ಸೇರಿ 200ಕ್ಕೂ ಹೆಚ್ಚು ಇಂಡಿಗೋ ವಿಮಾನ ಹಾರಾಟ ರದ್ದು; ಕಾರಣವೇನು?: ತನಿಖೆ ಆರಂಭಿಸಿದ DGCA

ಸಂಚಾರಿ ಸಾಥಿ ಆ್ಯಪ್: ಮೋದಿ ಸರ್ಕಾರ 'ಯೂ ಟರ್ನ್', ಮಧ್ಯಮ ವರ್ಗದ ಜನರಿಗೆ ಸಿಕ್ಕ ಅಪರೂಪದ ಜಯ! ಹೇಗೆ?

ಎಲ್ಗರ್ ಪರಿಷತ್ ಪ್ರಕರಣ: 5 ವರ್ಷಗಳ ನಂತರ DU ಮಾಜಿ ಪ್ರಾಧ್ಯಾಪಕ ಹನಿ ಬಾಬುಗೆ ಜಾಮೀನು

SCROLL FOR NEXT