ಸಾಂಕೇತಿಕ ಚಿತ್ರ online desk
ರಾಜ್ಯ

ಬೆಂಗಳೂರು: ನೆರೆಹೊರೆಯವರ ಕಿರುಕುಳಕ್ಕೆ ಬೇಸತ್ತು ನಿರ್ಮಾಣ ಹಂತದ ಕಟ್ಟಡದಲ್ಲಿ ಟೆಕ್ಕಿ ಆತ್ಮಹತ್ಯೆ!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಿಬ್ಬಂದಿಯೊಂದಿಗೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದ ಇಬ್ಬರೂ, ಹಣ ನೀಡಲು ನಿರಾಕರಿಸಿದ ನಂತರ ಮುರಳಿಗೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಬೆಂಗಳೂರು: ಇಬ್ಬರು ನೆರೆಹೊರೆಯವರ ಕಿರುಕುಳ ಮತ್ತು ಹಣದ ಬೇಡಿಕೆಯಿಂದಾಗಿ ಬೇಸತ್ತು ಟೆಕ್ಕಿಯೊಬ್ಬರು ಇಲ್ಲಿನ ನಲ್ಲೂರುಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಈ ಸಂಬಂಧ ಬುಧವಾರ ದೂರು ನೀಡಿರುವ ತಾಯಿ ಲಕ್ಷ್ಮಿ ಗೋವಿಂದರಾಜು, 2018ರಲ್ಲಿ ಖರೀದಿಸಿದ ನಿವೇಶನದಲ್ಲಿ ಮನೆ ನಿರ್ಮಿಸುತ್ತಿದ್ದ ತಮ್ಮ ಮಗ ಮುರಳಿ ಅವರನ್ನು ಉಷಾ ನಂಬಿಯಾರ್ ಮತ್ತು ಶಶಿ ನಂಬಿಯಾರ್ ಎಂಬುವವರು ಪದೇ ಪದೆ ಸಂಪರ್ಕಿಸುತ್ತಿದ್ದರು ಎಂದು ಹೇಳಲಾಗಿದ್ದು, ಆಸ್ತಿ ವಿವಾದಕ್ಕಾಗಿ 20 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಿಬ್ಬಂದಿಯೊಂದಿಗೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದ ಇಬ್ಬರೂ, ಹಣ ನೀಡಲು ನಿರಾಕರಿಸಿದ ನಂತರ ಮುರಳಿಗೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಡಿಸೆಂಬರ್ 3 ರಂದು ಬೆಳಿಗ್ಗೆ ಮನೆಯಿಂದ ಹೊರಟುಹೋದ ಮುರಳಿ, ನಂತರ ಕಟ್ಟಡದ ಎರಡನೇ ಮಹಡಿಯಲ್ಲಿ ಸೀಲಿಂಗ್ ಕೊಕ್ಕೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಗೋವಿಂದರಾಜು ಹೇಳಿದ್ದಾರೆ.

ಕೆಲಸಕ್ಕೆಂದು ಬಂದಿದ್ದ ಬಡಗಿ ಗಣೇಶ್ ಶವವನ್ನು ಕಂಡು ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.

ಲಕ್ಷ್ಮಿ ಇಬ್ಬರು ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್