ಸಾಂಕೇತಿಕ ಚಿತ್ರ online desk
ರಾಜ್ಯ

ಬೆಂಗಳೂರು: ನೆರೆಹೊರೆಯವರ ಕಿರುಕುಳಕ್ಕೆ ಬೇಸತ್ತು ನಿರ್ಮಾಣ ಹಂತದ ಕಟ್ಟಡದಲ್ಲಿ ಟೆಕ್ಕಿ ಆತ್ಮಹತ್ಯೆ!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಿಬ್ಬಂದಿಯೊಂದಿಗೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದ ಇಬ್ಬರೂ, ಹಣ ನೀಡಲು ನಿರಾಕರಿಸಿದ ನಂತರ ಮುರಳಿಗೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಬೆಂಗಳೂರು: ಇಬ್ಬರು ನೆರೆಹೊರೆಯವರ ಕಿರುಕುಳ ಮತ್ತು ಹಣದ ಬೇಡಿಕೆಯಿಂದಾಗಿ ಬೇಸತ್ತು ಟೆಕ್ಕಿಯೊಬ್ಬರು ಇಲ್ಲಿನ ನಲ್ಲೂರುಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಈ ಸಂಬಂಧ ಬುಧವಾರ ದೂರು ನೀಡಿರುವ ತಾಯಿ ಲಕ್ಷ್ಮಿ ಗೋವಿಂದರಾಜು, 2018ರಲ್ಲಿ ಖರೀದಿಸಿದ ನಿವೇಶನದಲ್ಲಿ ಮನೆ ನಿರ್ಮಿಸುತ್ತಿದ್ದ ತಮ್ಮ ಮಗ ಮುರಳಿ ಅವರನ್ನು ಉಷಾ ನಂಬಿಯಾರ್ ಮತ್ತು ಶಶಿ ನಂಬಿಯಾರ್ ಎಂಬುವವರು ಪದೇ ಪದೆ ಸಂಪರ್ಕಿಸುತ್ತಿದ್ದರು ಎಂದು ಹೇಳಲಾಗಿದ್ದು, ಆಸ್ತಿ ವಿವಾದಕ್ಕಾಗಿ 20 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಿಬ್ಬಂದಿಯೊಂದಿಗೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದ ಇಬ್ಬರೂ, ಹಣ ನೀಡಲು ನಿರಾಕರಿಸಿದ ನಂತರ ಮುರಳಿಗೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಡಿಸೆಂಬರ್ 3 ರಂದು ಬೆಳಿಗ್ಗೆ ಮನೆಯಿಂದ ಹೊರಟುಹೋದ ಮುರಳಿ, ನಂತರ ಕಟ್ಟಡದ ಎರಡನೇ ಮಹಡಿಯಲ್ಲಿ ಸೀಲಿಂಗ್ ಕೊಕ್ಕೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಗೋವಿಂದರಾಜು ಹೇಳಿದ್ದಾರೆ.

ಕೆಲಸಕ್ಕೆಂದು ಬಂದಿದ್ದ ಬಡಗಿ ಗಣೇಶ್ ಶವವನ್ನು ಕಂಡು ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.

ಲಕ್ಷ್ಮಿ ಇಬ್ಬರು ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾ ಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ

ಮೊದಲ ಮಹಿಳಾ ಟೆಸ್ಟ್ ಪಂದ್ಯ: ಲಾರ್ಡ್ಸ್ ನಲ್ಲಿ ಅಪರೂಪದ ದಾಖಲೆ ಬರೆದ ಸ್ಮೃತಿ ಮಂಧಾನಾ! ಆಕರ್ಷಕ ಅರ್ಧಶತಕ

ಸುಪ್ರೀಂಕೋರ್ಟ್ ನಲ್ಲಿ ಹೈಡ್ರಾಮ: ಕೋರ್ಟ್ ಹಾಲ್ ನಲ್ಲಿ ಕಾಗದ ಪತ್ರ ಎಸೆದು, CJI ನಿಂದಿಸಿದ ದೂರುದಾರ!