ತೇಜಸ್ವಿ ಸೂರ್ಯ 
ರಾಜ್ಯ

ಸಂಸ್ಕರಿಸಿದ ಆಹಾರಗಳ ಸೇವನೆಯಿಂದಾಗುವ ಅಪಾಯಗಳ ಕುರಿತು ಲೋಕಸಭೆಯಲ್ಲಿ ತೇಜಸ್ವಿ ಸೂರ್ಯ ಮಾತು!

ಲೋಕಸಭೆಯ ಚಳಿಗಾಲ ಅಧಿವೇಶನದ ಇಂದಿನ ಶೂನ್ಯವೇಳೆಯಲ್ಲಿ, ಭಾರತದಲ್ಲಿ ಸಂಸ್ಕರಿಸಿದ ಆಹಾರಗಳ ಸೇವನೆಯಿಂದಾಗುವ ಆರೋಗ್ಯದ ಅಪಾಯಗಳ ಕುರಿತು ಸಂಸದ ತೇಜಸ್ವಿ ಸೂರ್ಯ ಮಾತನಾಡಿದ್ದಾರೆ.

ನವದೆಹಲಿ: ಕಪ್ ನೂಡಲ್ಸ್‌ಗಳು, ಸಿದ್ಧಪಡಿಸಿದ ಆಹಾರ ಪದಾರ್ಥಗಳು ಮತ್ತು ಸಕ್ಕರೆ ಬೆರೆಸಿದ ಪಾನೀಯಗಳಂತಹ ಅತ್ಯಂತ ಸಂಸ್ಕರಿಸಿದ ಆಹಾರಗಳು, ವಿಶೇಷವಾಗಿ ಯುವಜನರು ಮತ್ತು ಕಡಿಮೆ ಆದಾಯದ ಕುಟುಂಬಗಳಲ್ಲಿ ಸಾಂಪ್ರದಾಯಿಕ ಆಹಾರಗಳ ಸ್ಥಾನವನ್ನು ಹೆಚ್ಚಾಗಿ ಕಬಳಿಸುತ್ತಿವೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಲೋಕಸಭೆಯ ಚಳಿಗಾಲ ಅಧಿವೇಶನದ ಇಂದಿನ ಶೂನ್ಯವೇಳೆಯಲ್ಲಿ, ಭಾರತದಲ್ಲಿ ಸಂಸ್ಕರಿಸಿದ ಆಹಾರಗಳ ಸೇವನೆಯಿಂದಾಗುವ ಆರೋಗ್ಯದ ಅಪಾಯಗಳ ಕುರಿತು ಸಂಸದ ತೇಜಸ್ವಿ ಸೂರ್ಯ ಮಾತನಾಡಿದ್ದಾರೆ.

ಈ ಉತ್ಪನ್ನಗಳ ಹೆಚ್ಚಿನ ಸೇವನೆಯು ಸ್ಥೂಲಕಾಯತೆ (obesity), ಹೃದಯರಕ್ತನಾಳದ ಕಾಯಿಲೆಗಳು (cardiovascular diseases), ಟೈಪ್ 2 ಮಧುಮೇಹ ಮತ್ತು ಅಕಾಲಿಕ ಮರಣದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನಗಳು ತಿಳಿಸಿವೆ ಎಂದು ಲೋಕಸಭೆಯಲ್ಲಿ ವಿವರಿಸಿದ್ದಾರೆ.

ಭಾಷಣದಲ್ಲಿ, ಮೂರು ಅಂಶಗಳನ್ನು ಪ್ರಸ್ತಾಪಿಸಿದ್ದು,

  1. ಸಂಸ್ಕರಿತ ಆಹಾರಗಳಿಗೆ ಸ್ಪಷ್ಟವಾದ ವ್ಯಾಖ್ಯಾನವನ್ನು ಅಳವಡಿಸಿಕೊಳ್ಳುವುದು.

  2. ಹೆಚ್ಚು ಪರಿಣಾಮಕಾರಿಯಾದ ಮುಂಭಾಗದ ಪ್ಯಾಕ್ ಎಚ್ಚರಿಕೆ ಲೇಬಲ್ ಅನ್ನು ಅಂಟಿಸುವುದು.

  3. ಈ ಉತ್ಪನ್ನಗಳ ಮೇಲೆ ತೆರಿಗೆ ಮತ್ತು ಜಾಹೀರಾತಿನ ನಿಯಂತ್ರಣವನ್ನು ಪರಿಶೀಲಿಸುವಂತೆ ವಿನಂತಿಸಿದ್ದಾರೆ. ಈ ಕ್ರಮಗಳು ಪ್ರಧಾನಿ ನರೇಂದ್ರ ಮೋದಿ ಅವರ ಫಿಟ್ ಇಂಡಿಯಾ ಅಭಿಯಾನಕ್ಕೆ ಮತ್ತಷ್ಟು ಬೆಂಬಲ ಒದಗಿಸಲಿದ್ದು, ಆಹಾರ ಹಾಗೂ ಪೋಷಣೆಯ ಬಗ್ಗೆ ನಾಗರಿಕರು ತಿಳುವಳಿಕೆಯನ್ನು ಹೊಂದಲು ಅನುವು ಮಾಡಿಕೊಡಲಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ, ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ; ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

Indian Stock Market: ಕಚ್ಚಾ ತೈಲ ದರ ಏರಿಕೆ; ರೂಪಾಯಿ ಮೌಲ್ಯ, Sensex ಇಳಿಕೆ

SCROLL FOR NEXT