ತೇಜಸ್ವಿ ಸೂರ್ಯ 
ರಾಜ್ಯ

ಸಂಸ್ಕರಿಸಿದ ಆಹಾರಗಳ ಸೇವನೆಯಿಂದಾಗುವ ಅಪಾಯಗಳ ಕುರಿತು ಲೋಕಸಭೆಯಲ್ಲಿ ತೇಜಸ್ವಿ ಸೂರ್ಯ ಮಾತು!

ಲೋಕಸಭೆಯ ಚಳಿಗಾಲ ಅಧಿವೇಶನದ ಇಂದಿನ ಶೂನ್ಯವೇಳೆಯಲ್ಲಿ, ಭಾರತದಲ್ಲಿ ಸಂಸ್ಕರಿಸಿದ ಆಹಾರಗಳ ಸೇವನೆಯಿಂದಾಗುವ ಆರೋಗ್ಯದ ಅಪಾಯಗಳ ಕುರಿತು ಸಂಸದ ತೇಜಸ್ವಿ ಸೂರ್ಯ ಮಾತನಾಡಿದ್ದಾರೆ.

ನವದೆಹಲಿ: ಕಪ್ ನೂಡಲ್ಸ್‌ಗಳು, ಸಿದ್ಧಪಡಿಸಿದ ಆಹಾರ ಪದಾರ್ಥಗಳು ಮತ್ತು ಸಕ್ಕರೆ ಬೆರೆಸಿದ ಪಾನೀಯಗಳಂತಹ ಅತ್ಯಂತ ಸಂಸ್ಕರಿಸಿದ ಆಹಾರಗಳು, ವಿಶೇಷವಾಗಿ ಯುವಜನರು ಮತ್ತು ಕಡಿಮೆ ಆದಾಯದ ಕುಟುಂಬಗಳಲ್ಲಿ ಸಾಂಪ್ರದಾಯಿಕ ಆಹಾರಗಳ ಸ್ಥಾನವನ್ನು ಹೆಚ್ಚಾಗಿ ಕಬಳಿಸುತ್ತಿವೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಲೋಕಸಭೆಯ ಚಳಿಗಾಲ ಅಧಿವೇಶನದ ಇಂದಿನ ಶೂನ್ಯವೇಳೆಯಲ್ಲಿ, ಭಾರತದಲ್ಲಿ ಸಂಸ್ಕರಿಸಿದ ಆಹಾರಗಳ ಸೇವನೆಯಿಂದಾಗುವ ಆರೋಗ್ಯದ ಅಪಾಯಗಳ ಕುರಿತು ಸಂಸದ ತೇಜಸ್ವಿ ಸೂರ್ಯ ಮಾತನಾಡಿದ್ದಾರೆ.

ಈ ಉತ್ಪನ್ನಗಳ ಹೆಚ್ಚಿನ ಸೇವನೆಯು ಸ್ಥೂಲಕಾಯತೆ (obesity), ಹೃದಯರಕ್ತನಾಳದ ಕಾಯಿಲೆಗಳು (cardiovascular diseases), ಟೈಪ್ 2 ಮಧುಮೇಹ ಮತ್ತು ಅಕಾಲಿಕ ಮರಣದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನಗಳು ತಿಳಿಸಿವೆ ಎಂದು ಲೋಕಸಭೆಯಲ್ಲಿ ವಿವರಿಸಿದ್ದಾರೆ.

ಭಾಷಣದಲ್ಲಿ, ಮೂರು ಅಂಶಗಳನ್ನು ಪ್ರಸ್ತಾಪಿಸಿದ್ದು,

  1. ಸಂಸ್ಕರಿತ ಆಹಾರಗಳಿಗೆ ಸ್ಪಷ್ಟವಾದ ವ್ಯಾಖ್ಯಾನವನ್ನು ಅಳವಡಿಸಿಕೊಳ್ಳುವುದು.

  2. ಹೆಚ್ಚು ಪರಿಣಾಮಕಾರಿಯಾದ ಮುಂಭಾಗದ ಪ್ಯಾಕ್ ಎಚ್ಚರಿಕೆ ಲೇಬಲ್ ಅನ್ನು ಅಂಟಿಸುವುದು.

  3. ಈ ಉತ್ಪನ್ನಗಳ ಮೇಲೆ ತೆರಿಗೆ ಮತ್ತು ಜಾಹೀರಾತಿನ ನಿಯಂತ್ರಣವನ್ನು ಪರಿಶೀಲಿಸುವಂತೆ ವಿನಂತಿಸಿದ್ದಾರೆ. ಈ ಕ್ರಮಗಳು ಪ್ರಧಾನಿ ನರೇಂದ್ರ ಮೋದಿ ಅವರ ಫಿಟ್ ಇಂಡಿಯಾ ಅಭಿಯಾನಕ್ಕೆ ಮತ್ತಷ್ಟು ಬೆಂಬಲ ಒದಗಿಸಲಿದ್ದು, ಆಹಾರ ಹಾಗೂ ಪೋಷಣೆಯ ಬಗ್ಗೆ ನಾಗರಿಕರು ತಿಳುವಳಿಕೆಯನ್ನು ಹೊಂದಲು ಅನುವು ಮಾಡಿಕೊಡಲಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್