ಡಾ. ಜಯಶ್ರೀ, ಪುತ್ರ ಆಕಾಶ್ 
ರಾಜ್ಯ

ಶಿವಮೊಗ್ಗ: ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಜಯಶ್ರೀ, ಪುತ್ರ ಆಕಾಶ್ ಆತ್ಮಹತ್ಯೆಗೆ ಶರಣು; ಡೆತ್ ನೋಟ್ ಪತ್ತೆ!

ಡಾ. ಜಯಶ್ರೀ ಮತ್ತು ಅವರ ಮಗ ಇಬ್ಬರೂ ಪ್ರತ್ಯೇಕವಾಗಿ ತಮ್ಮ ತಮ್ಮ ಬೆಡ್​​ರೂಮ್​​​ಗಳಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಅಶ್ವತ್ಥ್ ಬಡಾವಣೆಯಲ್ಲಿ ನಡೆದಿದೆ.

ಶಿವಮೊಗ್ಗ: ಶಿವಮೊಗ್ಗದ ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಜಯಶ್ರೀ ಹೊಮ್ಮರಡಿ ಹಾಗೂ ಅವರ ಪುತ್ರ ಆಕಾಶ್ ಹೊಮ್ಮರಡಿ ಅವರು ಶುಕ್ರವಾರ ತಮ್ಮ ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಡಾ. ಜಯಶ್ರೀ ಮತ್ತು ಅವರ ಮಗ ಇಬ್ಬರೂ ಪ್ರತ್ಯೇಕವಾಗಿ ತಮ್ಮ ತಮ್ಮ ಬೆಡ್​​ರೂಮ್​​​ಗಳಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಅಶ್ವತ್ಥ್ ಬಡಾವಣೆಯಲ್ಲಿ ನಡೆದಿದೆ.

ಡಾ. ಜಯಶ್ರೀ(57) ಮತ್ತು ಮಗ ಆಕಾಶ್(32) ಇಬ್ಬರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ವಿನೋಬನಗರ ಠಾಣಾ ಪೊಲೀಸರು ಮನೆ ಪರಿಶೀಲನೆ ಮಾಡಿದ್ದು, ಈ ವೇಳೆ ಡೆತ್ ನೋಟ್ ಪತ್ತೆಯಾಗಿದೆ.

ಮೂಲತಃ ದಾವಣೆಗೆರೆ ಜಿಲ್ಲೆಯ ನ್ಯಾಮತಿಯ ಡಾ. ನಾಗರಾಜ ಹೊಮ್ಮರಡಿ ಕುಟುಂಬ ಶಿವಮೊಗ್ಗದ ಗಾಂಧಿನಗರದಲ್ಲಿ ಹೊಮ್ಮರಡಿ ಆಸ್ಪತ್ರೆಯ ಮೂಲಕ ಹಲವು ವರ್ಷಗಳಿಂದ ವೈದ್ಯಕೀಯ ಸೇವೆಯಲ್ಲಿ ತೊಡಗಿತ್ತು.

ಮಕ್ಕಳ ತಜ್ಞರಾಗಿದ್ದ ಡಾ.ನಾಗರಾಜ ಹೊಮ್ಮರಡಿ ಸಹ 10 ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಪುತ್ರ ಆಕಾಶ್ ಅವರ ಪತ್ನಿ ನವ್ಯಶ್ರೀ ಕೂಡ ಒಂದೂವರೆ ವರ್ಷದ ಹಿಂದೆ ಅದೇ ಮನೆಯಲ್ಲಿ ನೇಣಿಗೆ ಶರಣಾಗಿದ್ದರು.

ಇದರಿಂದ ಆಘಾತಕ್ಕೆ ಒಳಗಾಗಿದ್ದ ಡಾ. ನಾಗರಾಜ ಅವರ ಪತ್ನಿ ಜಯಶ್ರೀ ಅವರು ಡೆತ್​​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ಮಗ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆಘಾತದಿಂದ ಹೊರಬರಲು ಕಳೆದ ಮೇ ತಿಂಗಳಲ್ಲಿ ಆಕಾಶ್​ ಮತ್ತೊಂದು ಮದುವೆಯಾಗಿ ಆರು ತಿಂಗಳಾಗಿತ್ತು. ಹೀಗಿರುವಾಗ ತಾಯಿ ಮಗ ಆತ್ಮಹತ್ಯೆಗೆ ಶರಣಾಗಿದ್ದಾರೆ. ಎರಡನೇ ಪತ್ನಿ ಮನೆಯಲ್ಲಿರುವಾಗಲೇ ಆಕಾಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಹುಲ್ ಗಾಂಧಿ ಅಥವಾ ಖರ್ಗೆ ಅಲ್ಲ; ಪುಟಿನ್ ಜೊತೆಗಿನ ಭೋಜನಕೂಟಕ್ಕೆ ಕಾಂಗ್ರೆಸ್ ನ ಈ ನಾಯಕನಿಗೆ ಮಾತ್ರ ಆಹ್ವಾನ!

ಪಾಕಿಸ್ತಾದ 'ನ್ಯೂಕ್ಲಿಯರ್ ಬಟನ್' ಈಗ ಅಸಿಮ್ ಮುನೀರ್ ಕೈಯಲ್ಲಿ! ಭಾರತದ ವಿರುದ್ಧ ಸೇಡಿಗೆ ಮುಂದಾಗ್ತಾರಾ?

ಇಂಡಿಗೋ ವಿಮಾನ ಹಾರಾಟ 3 ದಿನಗಳಲ್ಲಿ ಸಹಜ ಸ್ಥಿತಿಗೆ: ಸರ್ಕಾರ; 10 ದಿನ ಎಂದ ವಿಮಾನಯಾನ ಸಂಸ್ಥೆ!

'ನ್ಯಾಷನಲ್ ಹೆರಾಲ್ಡ್' ಕೇಸ್ ತನಿಖೆ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ದೆಹಲಿ ಪೊಲೀಸರ ನೋಟಿಸ್!

ಪುಟಿನ್ ಜೊತೆ ಪ್ರಯಾಣಿಸಲು ಕರ್ನಾಟಕದಲ್ಲಿ ತಯಾರಾದ Fortuner ಕಾರನ್ನೇ ಆಯ್ಕೆ ಮಾಡಿದ್ದೇಕೆ ಮೋದಿ?: ಜಗತ್ತಿಗೆ ಸಂದೇಶ ಏನು?

SCROLL FOR NEXT