ಪಂಚಮಸಾಲಿ ಸಮಾವೇಶ (ಸಂಗ್ರಹ ಚಿತ್ರ) PTI
ರಾಜ್ಯ

ಬೆಳಗಾವಿ: ಡಿ.10ರಂದು ಪಂಚಮಸಾಲಿಗಳ ಮೌನ ಪ್ರತಿಭಟನೆ

ಡಿ.10ರಂದು ಲಿಂಗಾಯತರ ಮೇಲಿನ ದೌರ್ಜನ್ಯ ದಿನವನ್ನಾಗಿ ಆಚರಿಸಲಾಗುವುದು. ಪ್ರತಿಭಟನೆಯ ಸಂಕೇತವಾಗಿ ನಾವು ಗಾಂಧಿ ಭವನದಿಂದ ಕಪ್ಪು ಪಟ್ಟಿಗಳನ್ನು ಧರಿಸಿ ಮೌನ ಪ್ರತಿಭಟನೆ ನಡೆಸುತ್ತೇವೆ.

ಬೆಳಗಾವಿ: ಕಳೆದ ವರ್ಷ ಡಿಸೆಂಬರ್‌ನಲ್ಲಿ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ವೇಳೆ 2ಎ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಪಂಚಮಸಾಲಿಗಳ ಮೇಲೆ ಪೊಲೀಸರ ಲಾಠಿಚಾರ್ಜ್ ಖಂಡಿಸಿ, ಡಿಸೆಂಬರ್ 10 ರಂದು ಬೆಳಗಾವಿಯಲ್ಲಿ ಮೌನ ಪ್ರತಿಭಟನೆ ನಡೆಸಲಾಗುವುದು ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರು ಗುರುವಾರ ಹೇಳಿದ್ದಾರೆ.

ಚಿಕ್ಕೋಡಿಯ ವಕೀಲ ಮಹಾದೇವ ಇತಿ ಅವರ ನಿವಾಸದಲ್ಲಿ ಗುರುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಂಚಮಸಾಲಿಗಳ ಮೇಲಿನ 'ಕ್ರೂರ ಹಲ್ಲೆ'ಯನ್ನು ಸಮುದಾಯ ಮರೆತಿಲ್ಲ ಎಂದು ಹೇಳಿದರು.

ಡಿ.10ರಂದು ಲಿಂಗಾಯತರ ಮೇಲಿನ ದೌರ್ಜನ್ಯ ದಿನವನ್ನಾಗಿ ಆಚರಿಸಲಾಗುವುದು. ಪ್ರತಿಭಟನೆಯ ಸಂಕೇತವಾಗಿ ನಾವು ಗಾಂಧಿ ಭವನದಿಂದ ಕಪ್ಪು ಪಟ್ಟಿಗಳನ್ನು ಧರಿಸಿ ಮೌನ ಪ್ರತಿಭಟನೆ ನಡೆಸುತ್ತೇವೆ. ಹಿಂದಿನ ಯಾವುದೇ ಸರ್ಕಾರಗಳು ಲಿಂಗಾಯತ ಸಮುದಾಯವನ್ನು ಈ ರೀತಿಯ ದೌರ್ಜನ್ಯಕ್ಕೆ ಒಳಪಡಿಸಿಲ್ಲ, ಆದರೆ, ಈಗಿನ ಕಾಂಗ್ರೆಸ್ ಸರ್ಕಾರ ಸಮುದಾಯದ ಮೇಲೆ ದೌರ್ಜನ್ಯ ಎಸಗಿದೆ.

ಡಿಸೆಂಬರ್ 10 ರ ಪ್ರತಿಭಟನೆಯಲ್ಲಿ ಭಾಗವಹಿಸಲು ಸಮಾಜದ ಎಲ್ಲ ಸದಸ್ಯರಿಗೂ ನಾವು ಮನವಿ ಮಾಡುತ್ತೇವೆ. 2A ಮೀಸಲಾತಿಗಾಗಿ ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IndiGo flights: ಮತ್ತೆ 500 ವಿಮಾನಗಳ ಹಾರಾಟ ರದ್ದುಪಡಿಸಿದ ಇಂಡಿಗೋ ಏರ್‌ಲೈನ್ಸ್‌, ವಿಮಾನಯಾನ ಸಂಸ್ಥೆಗೆ ಪ್ರಯಾಣಿಕರ ಹಿಡಿಶಾಪ

H-1B visa ನಿಯಮದಲ್ಲಿ ಅಮೆರಿಕಾ ಮಹತ್ವದ ಬದಲಾವಣೆ: ಇನ್ನು ಮುಂದೆ ಅರ್ಜಿದಾರರ "social media" ಖಾತೆ ಪಬ್ಲಿಕ್ ಇದ್ದರಷ್ಟೇ ವೀಸಾ..!

ವಿಶ್ವದ ಶ್ರೀಮಂತ ವ್ಯಕ್ತಿಯ ಬ್ರಿಟೀಷ್ ಕಾಲದ ಅರಮನೆ: Putin ಗೆ ಆತಿಥ್ಯ ವಹಿಸಿರುವ Hyderabad House ವಿಶೇಷತೆಗಳೇನು? ನಿರ್ಮಾಣ ಆಗಿದ್ದು ಹೇಗೆ?

ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ತಮ್ಮ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ: BJP ಕುರಿತು ಸಿಎಂ ವ್ಯಂಗ್ಯ

ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆ: ರಾಜ್ಯ ಸರ್ಕಾರ ಘೋಷಣೆ

SCROLL FOR NEXT