ಪಂಚಮಸಾಲಿ ಸಮಾವೇಶ (ಸಂಗ್ರಹ ಚಿತ್ರ) PTI
ರಾಜ್ಯ

ಬೆಳಗಾವಿ: ಡಿಸೆಂಬರ್ 10ರಂದು ಪಂಚಮಸಾಲಿಗಳ ಮೌನ ಪ್ರತಿಭಟನೆ

ಡಿ.10ರಂದು ಲಿಂಗಾಯತರ ಮೇಲಿನ ದೌರ್ಜನ್ಯ ದಿನವನ್ನಾಗಿ ಆಚರಿಸಲಾಗುವುದು. ಪ್ರತಿಭಟನೆಯ ಸಂಕೇತವಾಗಿ ನಾವು ಗಾಂಧಿ ಭವನದಿಂದ ಕಪ್ಪು ಪಟ್ಟಿಗಳನ್ನು ಧರಿಸಿ ಮೌನ ಪ್ರತಿಭಟನೆ ನಡೆಸುತ್ತೇವೆ.

ಬೆಳಗಾವಿ: ಕಳೆದ ವರ್ಷ ಡಿಸೆಂಬರ್‌ನಲ್ಲಿ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ವೇಳೆ 2ಎ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಪಂಚಮಸಾಲಿಗಳ ಮೇಲೆ ಪೊಲೀಸರ ಲಾಠಿಚಾರ್ಜ್ ಖಂಡಿಸಿ, ಡಿಸೆಂಬರ್ 10 ರಂದು ಬೆಳಗಾವಿಯಲ್ಲಿ ಮೌನ ಪ್ರತಿಭಟನೆ ನಡೆಸಲಾಗುವುದು ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರು ಗುರುವಾರ ಹೇಳಿದ್ದಾರೆ.

ಚಿಕ್ಕೋಡಿಯ ವಕೀಲ ಮಹಾದೇವ ಇತಿ ಅವರ ನಿವಾಸದಲ್ಲಿ ಗುರುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಂಚಮಸಾಲಿಗಳ ಮೇಲಿನ 'ಕ್ರೂರ ಹಲ್ಲೆ'ಯನ್ನು ಸಮುದಾಯ ಮರೆತಿಲ್ಲ ಎಂದು ಹೇಳಿದರು.

ಡಿ.10ರಂದು ಲಿಂಗಾಯತರ ಮೇಲಿನ ದೌರ್ಜನ್ಯ ದಿನವನ್ನಾಗಿ ಆಚರಿಸಲಾಗುವುದು. ಪ್ರತಿಭಟನೆಯ ಸಂಕೇತವಾಗಿ ನಾವು ಗಾಂಧಿ ಭವನದಿಂದ ಕಪ್ಪು ಪಟ್ಟಿಗಳನ್ನು ಧರಿಸಿ ಮೌನ ಪ್ರತಿಭಟನೆ ನಡೆಸುತ್ತೇವೆ. ಹಿಂದಿನ ಯಾವುದೇ ಸರ್ಕಾರಗಳು ಲಿಂಗಾಯತ ಸಮುದಾಯವನ್ನು ಈ ರೀತಿಯ ದೌರ್ಜನ್ಯಕ್ಕೆ ಒಳಪಡಿಸಿಲ್ಲ, ಆದರೆ, ಈಗಿನ ಕಾಂಗ್ರೆಸ್ ಸರ್ಕಾರ ಸಮುದಾಯದ ಮೇಲೆ ದೌರ್ಜನ್ಯ ಎಸಗಿದೆ.

ಡಿಸೆಂಬರ್ 10 ರ ಪ್ರತಿಭಟನೆಯಲ್ಲಿ ಭಾಗವಹಿಸಲು ಸಮಾಜದ ಎಲ್ಲ ಸದಸ್ಯರಿಗೂ ನಾವು ಮನವಿ ಮಾಡುತ್ತೇವೆ. 2A ಮೀಸಲಾತಿಗಾಗಿ ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪುಲ್ವಾಮಾ ದಾಳಿಗೆ 7 ವರ್ಷ: 40 ಯೋಧರ ಬಲಿದಾನ; ಆ 'ಕರಾಳ ದಿನ' ನಡೆದದ್ದೇನು? ಭಾರತ ಪ್ರತಿಕ್ರಿಯಿಸಿದ್ದು ಹೇಗೆ?

ಸಕಾರಾತ್ಮಕ ಟೀಕೆಗೆ ಮುಕ್ತ ಆದರೆ, ಸುಳ್ಳು ಸುದ್ದಿಗಳ ಅಪಪ್ರಚಾರ ಸಹಿಸಲ್ಲ: ಸಿಎಂ ಸಿದ್ದರಾಮಯ್ಯ

5 ಮಂದಿಗೆ ಅಂಗಾಂಗ ದಾನ ಮಾಡಿದ 10 ತಿಂಗಳ ಪುಟಾಣಿ: ಎಲ್ಲರ ಕಣ್ಣಂಚಲ್ಲಿ ನೀರು ತರಿಸಿ ಹೋದ ಕಂದಮ್ಮ!

ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಬಂಧನ: ಭೈರತಿ ಬಸವರಾಜ್ ಗೆ ಜಯದೇವ ಆಸ್ಪತ್ರೆಯಲ್ಲಿ ಹೃದ್ರೋಗ ಪರೀಕ್ಷೆ

113 ಸ್ಥಾನ ಗೆದ್ರೆ ಕುಮಾರಸ್ವಾಮಿ ಸಿಎಂ, ಇಲ್ಲದಿದ್ದರೇ ನಮ್ಮವರಿಗೆ ಮುಖ್ಯಮಂತ್ರಿ ಸ್ಥಾನ: ಬಿಜೆಪಿ

SCROLL FOR NEXT