ನ್ಯಾಯಾಲಯ (ಸಂಗ್ರಹ ಚಿತ್ರ) online desk
ರಾಜ್ಯ

ರೈತನಿಗೆ ಪರಿಹಾರ ಪಾವತಿಯಲ್ಲಿ ವಿಳಂಬ; ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿ ಕೋರ್ಟ್‌ ಆದೇಶ

ಭೂಸ್ವಾಧೀನಕ್ಕೆ ಪರಿಹಾರವಾಗಿ 22 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿತ್ತು. ಆದರೆ, 9 ಲಕ್ಷ ರೂ.ಗಳನ್ನು ಮಾತ್ರವೇ ನೀಡಿದ್ದ ಸರ್ಕಾರ, ಉಳಿದ ಹಣವನ್ನು ಬಾಕಿ ಉಳಿಸಿಕೊಂಡಿತ್ತು ಎನ್ನಲಾಗಿದೆ.

ಶಿವಮೊಗ್ಗ: ರೈತನಿಂದ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರ ಮಂಜೂರು ಮಾಡುವಲ್ಲಿ ವಿಳಂಬ ನೀತಿ ಅನುಸರಿಸಿದ ಶಿವಮೊಗ್ಗ ಜಿಲ್ಲಾಧಿಕಾರಿ ಕಾರನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ನ್ಯಾಯಾಲಯ ಆದೇಶಿಸಿದೆ.

1992ರಲ್ಲಿ ಶಿವಮೊಗ್ಗದ ಹರಮಘಟ್ಟದ ರೈತ ನಂದಾಯಪ್ಪ ಅವರ 1 ಎಕರೆ ಭೂಮಿಯನ್ನು ವಸತಿ ಯೋಜನೆಗಾಗಿ ಸರ್ಕಾರ ಸ್ವಾಧೀನಪಡಿಸಿಕೊಂಡಿತ್ತು.

ಭೂಸ್ವಾಧೀನಕ್ಕೆ ಪರಿಹಾರವಾಗಿ 22 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿತ್ತು. ಆದರೆ, 9 ಲಕ್ಷ ರೂ.ಗಳನ್ನು ಮಾತ್ರವೇ ನೀಡಿದ್ದ ಸರ್ಕಾರ, ಉಳಿದ ಹಣವನ್ನು ಬಾಕಿ ಉಳಿಸಿಕೊಂಡಿತ್ತು ಎನ್ನಲಾಗಿದೆ.

ಬಾಕಿ ಪರಿಹಾರಕ್ಕಾಗಿ ರೈತ ನಂದಾಯೊಪ್ಪ ಅವರು ಜಿಲ್ಲಾಧಿಕಾರಿ ಕಚೇರಿಗೂ ಮನೆಗೂ ಅಲೆದಾಡಿ ಬಸವಳಿಸಿದ್ದರು. ಅಂತಿಮವಾಗಿ, ನ್ಯಾಯಾಲಯದ ಮೆಟ್ಟಿಲೇರಿದ್ದರು.

ಕಚೇರಿಗೂ ಮನೆಗೂ ಅಲೆದಾಡಲು ಮತ್ತು ನ್ಯಾಯಾಲಯದ ವ್ಯಾಜ್ಯಗಳಿಗಾಗಿ ಮತ್ತೊಂದು ಎಕರೆ ಜಮೀನನ್ನೂ ಕಳೆದುಕೊಂಡಿದ್ದೇನೆ. ತಮಗೆ ಸೂಕ್ತ ಪರಿಹಾರ ಕೊಡಿಸಬೇಕೆಂದು ಮನವಿ ಮಾಡಿದ್ದರು.

ಈ ಅರ್ಜಿಯನ್ನು ವಿಚಾರಣೆ ನಡೆಸಿರುವ 2ನೇ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು, ರೈತನಿಗೆ 95,88,283 ರೂ. ಪರಿಹಾರ ಪಾವತಿಸುವಂತೆ ಸೂಚಿಸಿತ್ತು. ಆದರೂ, ಜಿಲ್ಲಾಧಿಕಾರಿಗಳು ರೈತನಿಗೆ ಪರಿಹಾರ ಪಾವತಿ ಮಾಡಿರಲಿಲ್ಲ.

ಜಿಲ್ಲಾಧಿಕಾರಿಯ ಈ ನಡೆಗೆ ಅಸಮಾಧಾನಗೊಂಡಿರುವ ನ್ಯಾಯಾಲಯವು, ಜಿಲ್ಲಾಧಿಕಾರಿ ಬಳಸುತ್ತಿರುವ KA14 G1234 ಕಾರು ಜಪ್ತಿ ಮಾಡುವಂತೆ ಆದೇಶಿಸಿದೆ.

ಈ ನಡುವೆ ಶುಕ್ರವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಅಡಿಕೆ ಬೆಳೆಗೆ ಕೊಳೆ ರೋಗ, ಎಲೆ ಚುಕ್ಕಿ ರೋಗಗಳ ನಿರ್ವಹಣೆ ಸಂಬಂಧ ಉನ್ನತ ಮಟ್ಟದ ಸಭೆ ನಡೆಯುತ್ತಿತ್ತು.

ಅದೇ ಸಂದರ್ಭದಲ್ಲಿ ನ್ಯಾಯಾಲಯದ ಅಧಿಕಾರಿಗಳುಕಾರು ಜಪ್ತಿಗಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ್ದರು. ಈ ವೇಳೆ ಜಿಲ್ಲಾಧಿಕಾರಿಗಳು ಪರಿಹಾರ ವಿತರಣೆಗೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IndiGo crisis|ವಿಮಾನ ಸೇವೆ ವ್ಯತ್ಯಯ ತನಿಖೆಗೆ DGCAಯಿಂದ ಉನ್ನತ ಮಟ್ಟದ ಸಮಿತಿ ರಚನೆ, ಪ್ರಯಾಣಿಕರಲ್ಲಿ ಕ್ಷಮೆ ಕೇಳಿದ ಇಂಡಿಗೋ

ಪುಟಿನ್ ಭೋಜನಕೂಟ ಭಾಗಿಯಾಗಿದ್ದಕ್ಕೆ ಶಶಿ ತರೂರ್ ವಿರುದ್ಧ ಕಾಂಗ್ರೆಸ್ ಕೆಂಗಣ್ಣು; ಪಕ್ಷ ತೊರೆಯುತ್ತಾರಾ ಮಾಜಿ ರಾಜತಂತ್ರಜ್ಞ?

ಮದುವೆ ಶಾಪಿಂಗ್‌: 50 ಸಾವಿರ ಹಣದ ಕಂತೆ ಬೀಳಿಸಿಕೊಂಡು ಹೋದ ಮಹಿಳೆ, ಸಿನೀಮೀಯ ರೀತಿ ಎತ್ತಿಕೊಂಡು ಬೈಕರ್ ಪರಾರಿ, Video Viral

5ನೇ ದಿನವೂ ಮುಂದುವರಿದ IndiGo ಅವಾಂತರ: ಬೆಂಗಳೂರು ಏರ್ ಪೋರ್ಟ್ ಲ್ಲಿ ಪ್ರಯಾಣಿಕರ ಗೋಳಾಟ, ಪರದಾಟ, ಫ್ಲೈಟ್ ಟಿಕೆಟ್ ದರ ದುಪ್ಪಟ್ಟು-Video

ಆರೋಗ್ಯಕ್ಕೆ ಅತಿ ಮುಖ್ಯ ಒಮೆಗಾ-3 ಕೊಬ್ಬಿನಾಮ್ಲ (ಕುಶಲವೇ ಕ್ಷೇಮವೇ)

SCROLL FOR NEXT