ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು 2,215 ಕೋಟಿ ರೂಪಾಯಿ ಮೊತ್ತದ ಅವಳಿ ಸುರಂಗ ರಸ್ತೆ ಮತ್ತು ಫ್ಲೈಓವರ್ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಹೆಬ್ಬಾಳ ಫ್ಲೈಓವರ್-ಮೇಖ್ರಿ ವೃತ್ತದ ನಡುವೆ ಸುರಂಗ ರಸ್ತೆ ಹಾಗೂ ಎತ್ತರದ ಕಾರಿಡಾರ್ ನಿರ್ಮಾಣಕ್ಕೆ ಡಿಸಿಎಂ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್, ಆದೇಶದ ಬಳಿಕ ಅವಳಿ ಸುರಂಗ ರಸ್ತೆ ಮತ್ತು ಎತ್ತರದ ಕಾರಿಡಾರ್ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದೆ.
ಈ ಯೋಜನೆಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಕಾರ್ಯಗತಗೊಳಿಸಲಿವೆ. ರಾಷ್ಟ್ರೀಯ ಹೆದ್ದಾರಿ (NH)ಯ ಭಾಗವಾಗಿರುವ ಈ ರಸ್ತೆಯನ್ನು ಇನ್ನು ಮುಂದೆ ಅಗಲೀಕರಣ ಮಾಡಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಹೆಬ್ಬಾಳ ಕೆರೆ ಸುತ್ತಲೂ ಭೂಮಿಯ ಲಭ್ಯತೆಯನ್ನು ಗಮನದಲ್ಲಿಟ್ಟುಕೊಂಡು ಗಾಂಧಿ ಕೃಷಿ ವಿಜ್ಞಾನ ಕೇಂದ್ರ (GKVK) ಕ್ಯಾಂಪಸ್ನಲ್ಲಿರುವ ಭೂಮಿಯನ್ನು ಸಹ ಈ ಯೋಜನೆಯು ಬಳಸಿಕೊಳ್ಳಲು ನಿರ್ಧರಿಸಲಾಗಿದೆ.
ಈ ಸಣ್ಣ ಸುರಂಗ ರಸ್ತೆ ಯೋಜನೆಯು ಬಳ್ಳಾರಿ ರಸ್ತೆಯ ಮಧ್ಯದಲ್ಲಿ ಮೇಖ್ರಿ ವೃತ್ತದಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆಯಾಗದಂತೆ ಅಂಡರ್ಪಾಸ್ ನಿರ್ಮಾಣ ಮತ್ತು ಹೆಬ್ಬಾಳ ಕೆರೆಯ ಎರಡೂ ಬದಿಗಳಲ್ಲಿ ರಸ್ತೆ ನಿರ್ಮಾಣದ ಜೊತೆಗೆ ಜಿಕೆವಿಕೆ ಆವರಣದಲ್ಲಿ ಸುರಂಗ ಮಾರ್ಗ ನಿರ್ಮಾಣವನ್ನು ಒಳಗೊಂಡಿರುತ್ತದೆ.