ರಾಜ್ಯ

ಮಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಸುಡಾನ್ ಪ್ರಜೆ, ತಮಿಳುನಾಡು ಮಹಿಳೆ ಸೇರಿದಂತೆ ಐವರಿಗೆ ಜೈಲು ಶಿಕ್ಷೆ

ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಸುಡಾನ್ ಪ್ರಜೆ ಮತ್ತು ತಮಿಳುನಾಡು ಮೂಲದ ಮಹಿಳೆ ಸೇರಿದಂತೆ ಐವರಿಗೆ ಮಂಗಳೂರಿನ ನ್ಯಾಯಾಲಯವು ಅಪರಾಧಿಗಳೆಂದು ಘೋಷಿಸಿದ್ದು ಶಿಕ್ಷೆ ನೀಡಿದೆ.

ಮಂಗಳೂರು: ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಸುಡಾನ್ ಪ್ರಜೆ ಮತ್ತು ತಮಿಳುನಾಡು ಮೂಲದ ಮಹಿಳೆ ಸೇರಿದಂತೆ ಐವರಿಗೆ ಮಂಗಳೂರಿನ ನ್ಯಾಯಾಲಯವು ಅಪರಾಧಿಗಳೆಂದು ಘೋಷಿಸಿದ್ದು ಶಿಕ್ಷೆ ನೀಡಿದೆ. ಬೆಂಗಳೂರಿನ ಗುಂಟೂರುಪಾಳ್ಯದಲ್ಲಿ ವಾಸಿಸುತ್ತಿರುವ ಸುಡಾನ್ ನಿವಾಸಿ ಲುವಾಲ್ ಡೇನಿಯಲ್ ಜಸ್ಟಿನ್ ಬೌಲೊ ಅಲಿಯಾಸ್ ಡ್ಯಾನಿ ಎಂಬುವವರಿಗೆ NDPS ಕಾಯ್ದೆಯ ಸೆಕ್ಷನ್ 21(ಸಿ) ಅಡಿಯಲ್ಲಿ 12 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 1.25 ಲಕ್ಷ ರೂ. ದಂಡ ಮತ್ತು NDPS ಕಾಯ್ದೆಯ ಸೆಕ್ಷನ್ 27(ಬಿ) ಅಡಿಯಲ್ಲಿ 6 ತಿಂಗಳ ಕಠಿಣ ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಲಾಗಿದೆ.

ಕಾಸರಗೋಡಿನ ಉಪ್ಪಳದ ಮತ್ತೊಬ್ಬ ಡ್ರಗ್ ಪೆಡ್ಲರ್ ಮೊಹಮ್ಮದ್ ರಮೀಜ್‌ಗೆ 14 ವರ್ಷ 6 ತಿಂಗಳ ಕಠಿಣ ಜೈಲು ಶಿಕ್ಷೆ ಮತ್ತು 1.55 ಲಕ್ಷ ರೂ. ದಂಡ ವಿಧಿಸಲಾಗಿದೆ. ಮೂರನೇ ಡ್ರಗ್ ಪೆಡ್ಲರ್ ಕಾಸರಗೋಡಿನ ಮೊಯಿದ್ದೀನ್ ರಶೀದ್ ಗೆ 12 ವರ್ಷ 6 ತಿಂಗಳು ಕಠಿಣ ಜೈಲು ಶಿಕ್ಷೆ ಮತ್ತು 1.35 ಲಕ್ಷ ರೂ. ದಂಡ ವಿಧಿಸಲಾಗಿದೆ. ಕಾಸರಗೋಡಿನ ಉಪ್ಪಳದ ಅಬ್ದುಲ್ ರವೂಫ್ ಅಲಿಯಾಸ್ ಟಫ್ ರವೂಫ್ ಗೆ 13 ವರ್ಷ 6 ತಿಂಗಳು ಕಠಿಣ ಜೈಲು ಶಿಕ್ಷೆ ಮತ್ತು 1.45 ಲಕ್ಷ ರೂ. ದಂಡ ವಿಧಿಸಲಾಗಿದೆ. ಬೆಂಗಳೂರಿನ ಮಡಿವಾಳದಲ್ಲಿ ವಾಸಿಸುತ್ತಿರುವ ಮತ್ತು ತಮಿಳುನಾಡಿನ ಊಟಿ ಮೂಲದ ಸಬಿತಾ ಅಲಿಯಾಸ್ ಚಿಂಚು ಎಂಬ ಮಹಿಳಾ ಡ್ರಗ್ ಪೆಡ್ಲರ್ 12 ವರ್ಷ 6 ತಿಂಗಳು ಕಠಿಣ ಜೈಲು ಶಿಕ್ಷೆ ಮತ್ತು 1.45 ಲಕ್ಷ ರೂ. ದಂಡ ವಿಧಿಸಲಾಗಿದೆ.

2022ರ ಜೂನ್ 14ರಂದು ಮಂಗಳೂರು ಸಿಸಿಬಿ ಪೊಲೀಸ್ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ತಮ್ಮ ತಂಡದೊಂದಿಗೆ ಪಡೀಲ್ ಜಂಕ್ಷನ್ ಬಳಿ ದಾಳಿ ನಡೆಸಿ ಬೆಂಗಳೂರಿನಿಂದ ವಿದ್ಯಾರ್ಥಿಗಳಿಗೆ MDMA ಮಾರಾಟ ಮಾಡಲು ಯೋಜಿಸಿದ್ದ ಡ್ರಗ್ ಪೆಡ್ಲರ್ ಬಂಧಿಸಿದ್ದರು. ಕಾರ್ಯಾಚರಣೆಯ ಸಮಯದಲ್ಲಿ, ಅವರ ಬಳಿಯಿಂದ 125 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ, ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಇಎನ್ ಇನ್ಸ್‌ಪೆಕ್ಟರ್ ಸತೀಶ್ ಎಂಪಿ ತನಿಖೆ ಪೂರ್ಣಗೊಳಿಸಿ ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು.

ಮಂಗಳೂರಿನ ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯದ ಪಬ್ಲಿಕ್ ಪ್ರಾಸಿಕ್ಯೂಟರ್ ಜುಡಿತ್ ಓಎಂ ಕ್ರಾಸ್ತಾ ಪ್ರಕರಣವನ್ನು ಮಂಡಿಸಿದರು. 24 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಯಿತು. ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ, ಡಿಸೆಂಬರ್ 1ರಂದು ಪ್ರಧಾನ ಜಿಲ್ಲಾ ನ್ಯಾಯಾಧೀಶ (ಪಿಡಿಜೆ) ಮಂಗಳೂರು ಬಸವರಾಜ್ ಅವರು ಈ ಪ್ರಕರಣದಲ್ಲಿ ಎಲ್ಲಾ ಆರೋಪಿಗಳನ್ನು ದೋಷಿಗಳು ಎಂದು ಘೋಷಿಸಿದ್ದು ಶಿಕ್ಷೆಯ ಪ್ರಮಾಣವನ್ನು ಶನಿವಾರ ಪ್ರಕಟಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Padma Awards 2026: ಕರ್ನಾಟಕದ 8 ಮಂದಿ ಸೇರಿದಂತೆ ದೇಶಾದ್ಯಂತ 131 ಸಾಧಕರಿಗೆ ಪದ್ಮ ಪ್ರಶಸ್ತಿ ಘೋಷಣೆ!

60 ಎಸೆತಗಳಲ್ಲಿ 155 ರನ್; ನ್ಯೂಜಿಲ್ಯಾಂಡ್ ವಿರುದ್ಧ ದಾಖಲೆಯ ಗೆಲುವು; T20 ಸರಣಿ ಭಾರತ ಕೈವಶ!

ಯುವರಾಜ್ ಸಿಂಗ್ 'ವಿಶ್ವ ದಾಖಲೆ' ಮುರಿಯುವಲ್ಲಿ ಜಸ್ಟ್ ಮಿಸ್! ಅಭಿಷೇಕ್ ಶರ್ಮಾ ಹೇಳಿದ್ದೇನು?

ಚೋರ್ಲಾ ಘಾಟ್ ನಲ್ಲಿ 400 ಕೋಟಿ ರೂ. ದರೋಡೆ: ಬೆಳಗಾವಿ ಎಸ್ ಪಿ ಹೇಳಿದ್ದೇನು?

ಮೈಸೂರು: ಕೌಟುಂಬಿಕ ಕಲಹ; ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ

SCROLL FOR NEXT