ರಾಜ್ಯ

ಮಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಸುಡಾನ್ ಪ್ರಜೆ, ತಮಿಳುನಾಡು ಮಹಿಳೆ ಸೇರಿದಂತೆ ಐವರಿಗೆ ಜೈಲು ಶಿಕ್ಷೆ

ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಸುಡಾನ್ ಪ್ರಜೆ ಮತ್ತು ತಮಿಳುನಾಡು ಮೂಲದ ಮಹಿಳೆ ಸೇರಿದಂತೆ ಐವರಿಗೆ ಮಂಗಳೂರಿನ ನ್ಯಾಯಾಲಯವು ಅಪರಾಧಿಗಳೆಂದು ಘೋಷಿಸಿದ್ದು ಶಿಕ್ಷೆ ನೀಡಿದೆ.

ಮಂಗಳೂರು: ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಸುಡಾನ್ ಪ್ರಜೆ ಮತ್ತು ತಮಿಳುನಾಡು ಮೂಲದ ಮಹಿಳೆ ಸೇರಿದಂತೆ ಐವರಿಗೆ ಮಂಗಳೂರಿನ ನ್ಯಾಯಾಲಯವು ಅಪರಾಧಿಗಳೆಂದು ಘೋಷಿಸಿದ್ದು ಶಿಕ್ಷೆ ನೀಡಿದೆ. ಬೆಂಗಳೂರಿನ ಗುಂಟೂರುಪಾಳ್ಯದಲ್ಲಿ ವಾಸಿಸುತ್ತಿರುವ ಸುಡಾನ್ ನಿವಾಸಿ ಲುವಾಲ್ ಡೇನಿಯಲ್ ಜಸ್ಟಿನ್ ಬೌಲೊ ಅಲಿಯಾಸ್ ಡ್ಯಾನಿ ಎಂಬುವವರಿಗೆ NDPS ಕಾಯ್ದೆಯ ಸೆಕ್ಷನ್ 21(ಸಿ) ಅಡಿಯಲ್ಲಿ 12 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 1.25 ಲಕ್ಷ ರೂ. ದಂಡ ಮತ್ತು NDPS ಕಾಯ್ದೆಯ ಸೆಕ್ಷನ್ 27(ಬಿ) ಅಡಿಯಲ್ಲಿ 6 ತಿಂಗಳ ಕಠಿಣ ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಲಾಗಿದೆ.

ಕಾಸರಗೋಡಿನ ಉಪ್ಪಳದ ಮತ್ತೊಬ್ಬ ಡ್ರಗ್ ಪೆಡ್ಲರ್ ಮೊಹಮ್ಮದ್ ರಮೀಜ್‌ಗೆ 14 ವರ್ಷ 6 ತಿಂಗಳ ಕಠಿಣ ಜೈಲು ಶಿಕ್ಷೆ ಮತ್ತು 1.55 ಲಕ್ಷ ರೂ. ದಂಡ ವಿಧಿಸಲಾಗಿದೆ. ಮೂರನೇ ಡ್ರಗ್ ಪೆಡ್ಲರ್ ಕಾಸರಗೋಡಿನ ಮೊಯಿದ್ದೀನ್ ರಶೀದ್ ಗೆ 12 ವರ್ಷ 6 ತಿಂಗಳು ಕಠಿಣ ಜೈಲು ಶಿಕ್ಷೆ ಮತ್ತು 1.35 ಲಕ್ಷ ರೂ. ದಂಡ ವಿಧಿಸಲಾಗಿದೆ. ಕಾಸರಗೋಡಿನ ಉಪ್ಪಳದ ಅಬ್ದುಲ್ ರವೂಫ್ ಅಲಿಯಾಸ್ ಟಫ್ ರವೂಫ್ ಗೆ 13 ವರ್ಷ 6 ತಿಂಗಳು ಕಠಿಣ ಜೈಲು ಶಿಕ್ಷೆ ಮತ್ತು 1.45 ಲಕ್ಷ ರೂ. ದಂಡ ವಿಧಿಸಲಾಗಿದೆ. ಬೆಂಗಳೂರಿನ ಮಡಿವಾಳದಲ್ಲಿ ವಾಸಿಸುತ್ತಿರುವ ಮತ್ತು ತಮಿಳುನಾಡಿನ ಊಟಿ ಮೂಲದ ಸಬಿತಾ ಅಲಿಯಾಸ್ ಚಿಂಚು ಎಂಬ ಮಹಿಳಾ ಡ್ರಗ್ ಪೆಡ್ಲರ್ 12 ವರ್ಷ 6 ತಿಂಗಳು ಕಠಿಣ ಜೈಲು ಶಿಕ್ಷೆ ಮತ್ತು 1.45 ಲಕ್ಷ ರೂ. ದಂಡ ವಿಧಿಸಲಾಗಿದೆ.

2022ರ ಜೂನ್ 14ರಂದು ಮಂಗಳೂರು ಸಿಸಿಬಿ ಪೊಲೀಸ್ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ತಮ್ಮ ತಂಡದೊಂದಿಗೆ ಪಡೀಲ್ ಜಂಕ್ಷನ್ ಬಳಿ ದಾಳಿ ನಡೆಸಿ ಬೆಂಗಳೂರಿನಿಂದ ವಿದ್ಯಾರ್ಥಿಗಳಿಗೆ MDMA ಮಾರಾಟ ಮಾಡಲು ಯೋಜಿಸಿದ್ದ ಡ್ರಗ್ ಪೆಡ್ಲರ್ ಬಂಧಿಸಿದ್ದರು. ಕಾರ್ಯಾಚರಣೆಯ ಸಮಯದಲ್ಲಿ, ಅವರ ಬಳಿಯಿಂದ 125 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ, ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಇಎನ್ ಇನ್ಸ್‌ಪೆಕ್ಟರ್ ಸತೀಶ್ ಎಂಪಿ ತನಿಖೆ ಪೂರ್ಣಗೊಳಿಸಿ ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು.

ಮಂಗಳೂರಿನ ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯದ ಪಬ್ಲಿಕ್ ಪ್ರಾಸಿಕ್ಯೂಟರ್ ಜುಡಿತ್ ಓಎಂ ಕ್ರಾಸ್ತಾ ಪ್ರಕರಣವನ್ನು ಮಂಡಿಸಿದರು. 24 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಯಿತು. ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ, ಡಿಸೆಂಬರ್ 1ರಂದು ಪ್ರಧಾನ ಜಿಲ್ಲಾ ನ್ಯಾಯಾಧೀಶ (ಪಿಡಿಜೆ) ಮಂಗಳೂರು ಬಸವರಾಜ್ ಅವರು ಈ ಪ್ರಕರಣದಲ್ಲಿ ಎಲ್ಲಾ ಆರೋಪಿಗಳನ್ನು ದೋಷಿಗಳು ಎಂದು ಘೋಷಿಸಿದ್ದು ಶಿಕ್ಷೆಯ ಪ್ರಮಾಣವನ್ನು ಶನಿವಾರ ಪ್ರಕಟಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಕೊನೆಗೂ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ; ಜುಲೈ 1 ರಿಂದ ಜಾರಿ

IPL 2026: 82 ರನ್‌ಗಳಿಂದ SRH ಮಣಿಸಿದ Gujarat Titans; RCB ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಗಿಲ್ ಪಡೆ!

ಬಂಗಾಳದಲ್ಲಿ ಶುದ್ಧೀಕರಣ ಶುರು ಮಾಡಿದ ಸಿಎಂ ಸುವೇಂದು: TMC ನೇಮಕ ಮಾಡಿದ್ದ ಗ್ರೂಪ್ ಎ ಶ್ರೇಣಿಯ 232 ಅಧಿಕಾರಿಗಳ ವಜಾ!

ಒಂದೇ ಒಂದು ದಾಳಿ ನಡೆದರೂ ಯುರೇನಿಯಂ ದಾಸ್ತಾನು ಶಸ್ತ್ರಾಸ್ತ್ರ ದರ್ಜೆಗೆ ಸಂವರ್ಧನೆ- ಅಮೆರಿಕಾಗೆ ಇರಾನ್ ಕಠಿಣ ಎಚ್ಚರಿಕೆ!

Gruha Lakshmi | ದಕ್ಷಿಣ ಕನ್ನಡದಲ್ಲಿ ಮೃತ ಫಲಾನುಭವಿಗಳ ಖಾತೆಗೆ 22 ಕೋಟಿ ರೂ ಗೃಹಲಕ್ಷ್ಮಿ ಹಣ ಜಮೆ!

SCROLL FOR NEXT