ಸಂಗ್ರಹ ಚಿತ್ರ 
ರಾಜ್ಯ

Indigo airlines​​ ಬಿಕ್ಕಟ್ಟು: ಖಾಸಗಿ ಬಸ್ ಸಂಸ್ಥೆಗಳಿಂದ ಪರಿಸ್ಥಿತಿ ಲಾಭ ಪಡೆಯಲು ಯತ್ನ; ಬೆಂಗಳೂರು-ಮುಂಬೈ ಬಸ್ ಟಿಕೆಟ್ ದರ 9,000 ರೂ!

ಬೆಂಗಳೂರಿನಿಂದ ಮುಂಬೈ ಮಾರ್ಗದಲ್ಲಿ ಸಾಮಾನ್ಯವಾಗಿ ಎಸಿ ಸ್ಲೀಪರ್ ಬಸ್‌ಗಳ ಟಿಕೆಟ್ ದರ 1200 ರೂ.ನಿಂದ 1400 ರೂ. ವರೆಗೆ ಇತ್ತು.

ಬೆಂಗಳೂರು: ಇಂಡಿಗೋ ವಿಮಾನ ಹಾರಾಟ ರದ್ದಾಗಿರುವ ಪರಿಣಾಮವಾಗಿ ಖಾಸಗಿ ಬಸ್ ಟಿಕೆದ್ ದರ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಪರಿಸ್ಥಿತಿ ಲಾಭ ಪಡೆಯಲು ಖಾಸಗಿ ಸಂಸ್ಥೆಗಳು ಯತ್ನ ನಡೆಸುತ್ತಿದ್ದು. ಬೆಂಗಳೂರು-ಮುಂಬೈ ಪ್ರಯಾಣಕ್ಕಾಗಿ ಜನರಿಂದ ದುಪ್ಪಟ್ಟು-ಮೂರುಪಟ್ಟು ಹೆಚ್ಚಿನ ಹಣವನ್ನು ವಸೂಲಿ ಮಾಡುತ್ತಿದೆ.

ಬೆಂಗಳೂರಿನಿಂದ ಮುಂಬೈ ಮಾರ್ಗದಲ್ಲಿ ಸಾಮಾನ್ಯವಾಗಿ ಎಸಿ ಸ್ಲೀಪರ್ ಬಸ್‌ಗಳ ಟಿಕೆಟ್ ದರ 1200 ರೂ.ನಿಂದ 1400 ರೂ. ವರೆಗೆ ಇತ್ತು. ಆದರೆ, ಇಂಡಿಗೋ ವಿಮಾನ ಬಿಕ್ಕಟ್ಟು ಎದುರಾದ ಬಳಿಕ ಅದೇ ಮಾರ್ಗದ ಬಸ್‌ಗಳಲ್ಲಿ ಈಗ ಆರಂಭದ ದರವೇ 3200 ರೂ, 3800 ರೂ, 4999 ರೂ, 6500 ರೂ. ಆಗಿದೆ. ಕೆಲ ಬಸ್‌ಗಳಲ್ಲಿ ಗರಿಷ್ಠ ದರ ರೂ.9,000 ತಲುಪಿದೆ.

ಕರ್ನಾಟಕ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ ಅವರು ಮಾತನಾಡಿ, ವಿಮಾನ ರದ್ದತಿಯ ನಂತರ ಬಸ್ ದರಗಳು ತೀವ್ರವಾಗಿ ಏರಿಕೆಯಾಗಿವೆ, ನಿರ್ವಾಹಕರು ಸಾಮಾನ್ಯ ದರಕ್ಕಿಂತ ನಾಲ್ಕರಿಂದ ಎಂಟು ಪಟ್ಟು ಹೆಚ್ಚು ಶುಲ್ಕ ವಿಧಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಇದೇ ವೇಳೆ ಖಾಸಗಿ ಸಂಸ್ಥೆಗಳ ವರ್ತನಯನ್ನು ಖಂಡಿಸಿದ್ದಾರೆ.

ಶುಕ್ರವಾರ, ಕೆಲವು ಹೊರ ರಾಜ್ಯ ನಿರ್ವಾಹಕರು ಬೆಂಗಳೂರಿನಿಂದ ಮುಂಬೈಗೆ ಟಿಕೆಟ್‌ಗೆ 13,000 ರೂ. ವರೆಗೆ ಶುಲ್ಕ ವಿಧಿಸಿದ್ದು, ಇದರ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.

ಶೋಭಿತ್ ಸೌರಭ್ ಎಂಬುವವರು ಮಾತನಾಡಿ, ನಾನು 5,000 ರೂ.ಗೆ ಇಂಡಿಗೋ ವಿಮಾನವನ್ನು ಬುಕ್ ಮಾಡಿದ್ದೆ. ಆದರೆ, ಟಿಕೆಟ್ ನ್ನು ರದ್ದುಗೊಳಿಸಲಾಯಿತು, ವಿಮಾನಯಾನ ಸಂಸ್ಥೆ ಕ್ಷಮೆಯಾಚಿಸಿ ಮರುಪಾವತಿಸುವ ಭರವಸೆ ನೀಡಿದೆ. ಇದೀಗ ಪುಣೆಯಿಂದ ಬೆಂಗಳೂರಿಗೆ ಪ್ರಯಾಣಿಸಲು 8,000 ರೂ.ಗೆ ಬಸ್ ಟಿಕೆಟ್ ಬುಕ್ ಮಾಡಿದ್ದೇನೆ, ಅದು ನನ್ನ ವಿಮಾನ ದರಕ್ಕಿಂತ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ಸೀತಾಪುರದಲ್ಲಿ ವಿಚಿತ್ರ ಪ್ರಕರಣ: ಹಗಲು ಪ್ರೇಮಿ, ರಾತ್ರಿ ಗಂಡ ಬೇಕಂತೆ! ಇಬ್ಬರ ಜತೆ ಸಂಸಾರ ನಡೆಸಲು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ! Video

‘ಏನೇನ್ ಮಾಡ್ತಾರೋ ಗೊತ್ತಿಲ್ಲ’: Donald Trump ‘ಅನಿರೀಕ್ಷಿತ ವರ್ತನೆ’ ಬಗ್ಗೆ ಎಚ್ಚರಿಕೆ: ಮೋದಿ ಭೇಟಿ ಬಳಿಕ ಜಂಟಿ ಸುದ್ದಿಗೋಷ್ಠಿಗೆ ಭಾರತ ಹಿಂದೇಟು!

ಪ್ರತಿಪಕ್ಷಗಳ ಪ್ರತಿಭಟನೆ, ಗದ್ದಲದ ನಡುವೆ ಯಾವುದೇ ಚರ್ಚೆಯಿಲ್ಲದೇ ವಿಧಾನ ಪರಿಷತ್ತಿನಲ್ಲಿ ಎರಡು ವಿಧೇಯಕಗಳು ಪಾಸ್

Biggboss Kannada ಅಗ್ನಿಪರೀಕ್ಷೆ: ಗೆಟ್ ಔಟ್, ಇದೆಲ್ಲಾ ಬೇಡ ಬ್ರೋ; ವಿನಯ್ ಗೌಡಗೆ ಸ್ಪರ್ಧಿ ತಿರುಗೇಟು, Video ವೈರಲ್!