ಡಿ.ಕೆ ಶಿವಕುಮಾರ್ 
ರಾಜ್ಯ

RCB ಫ್ಯಾನ್ಸ್ ಗೆ ಗುಡ್ ನ್ಯೂಸ್: IPL ಪಂದ್ಯಗಳನ್ನು ಚಿನ್ನಸ್ವಾಮಿಯಲ್ಲೂ ಆಡಿಸುವಂತೆ ಮಾಡುತ್ತೇವೆ!

ನಾನು ಕೆಎಸ್ ಸಿಎ ಸದಸ್ಯ. ನಾನು ಚಿಕ್ಕ ವಯಸ್ಸಿನಲ್ಲಿದ್ದಾಗಲೇ, ನಾಗರಾಜ್ ಅವರು ನನಗೆ ಸದಸ್ಯತ್ವ ನೀಡಿದರು. ಅವರ ಮಗ ನನ್ನ ಸಹಪಾಠಿ. ನನಗೆ ಬ್ರಿಜೇಶ್ ಪಟೇಲ್ ಅವರಿಂದ ಅನಿಲ್ ಕುಂಬ್ಳೆ, ಪ್ರಸನ್ನ ಸೇರಿದಂತೆ ಅನೇಕರು ಬಹಳ ಪರಿಚಯ. ನನಗೆ ಬೇಕಾದವರಿಗೆ ನಾನು ಮತ ಹಾಕಿದ್ದೇನೆ ಎಂದರು.

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಕೆಎಸ್ ಸಿಎ ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

ಆರ್ ಸಿಬಿ ಸಂಭ್ರಮಾಚರಣೆ ವೇಳೆ ನಡೆದ ದುರ್ಘಟನೆ ಬಳಿಕ ಐಪಿಎಲ್ ಸೇರಿದಂತೆ ಪ್ರಮುಖ ಪಂದ್ಯಗಳು ಈ ಕ್ರೀಡಾಂಗಣದಿಂದ ಸ್ಥಳಾಂತರವಾಗಿರುವ ಬಗ್ಗೆ ಕೇಳಿದಾಗ, "ಇದು ಕರ್ನಾಟಕ ರಾಜ್ಯ ಹಾಗೂ ಬೆಂಗಳೂರಿನ ಗೌರವದ ವಿಚಾರ.

ಮುಂದಿನ ಐಪಿಎಲ್ ಪಂದ್ಯಗಳನ್ನು ಇಲ್ಲೇ ನಡೆಸುವಂತೆ ಕ್ರಮ ಕೈಗೊಳ್ಳುತ್ತೇವೆ" ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಯಾವೆಲ್ಲಾ ಪಂದ್ಯಗಳಿವೆಯೋ ಅದಕ್ಕೆ ಅವಕಾಶ ನೀಡುತ್ತೇವೆ" ಎಂದು ತಿಳಿಸಿದರು.

ನಾನು ಕೆಎಸ್ ಸಿಎ ಸದಸ್ಯ. ನಾನು ಚಿಕ್ಕ ವಯಸ್ಸಿನಲ್ಲಿದ್ದಾಗಲೇ, ನಾಗರಾಜ್ ಅವರು ನನಗೆ ಸದಸ್ಯತ್ವ ನೀಡಿದರು. ಅವರ ಮಗ ನನ್ನ ಸಹಪಾಠಿ. ನನಗೆ ಬ್ರಿಜೇಶ್ ಪಟೇಲ್ ಅವರಿಂದ ಅನಿಲ್ ಕುಂಬ್ಳೆ, ಪ್ರಸನ್ನ ಸೇರಿದಂತೆ ಅನೇಕರು ಬಹಳ ಪರಿಚಯ. ನನಗೆ ಬೇಕಾದವರಿಗೆ ನಾನು ಮತ ಹಾಕಿದ್ದೇನೆ ಎಂದರು.

ನಾನು ಕ್ರಿಕೆಟ್ ಅಭಿಮಾನಿ. ಇತ್ತೀಚಿಗೆ ಆಗಿರುವ ಅನಾಹುತ ಮುಂದೆ ಮರುಕಳಿಸದಂತೆ ಎಚ್ಚರಿಕೆ ವಹಿಸಿ ಕ್ರೀಡಾಂಗಣದ ಗೌರವ ಉಳಿಯುವಂತೆ ಮಾಡುತ್ತೇವೆ. ಕಾನೂನು ಚೌಕಟ್ಟಿನಲ್ಲಿ ಜನದಟ್ಟಣೆ ನಿಭಾಯಿಸಿಕೊಂಡು ಕ್ರೀಡಾಂಗಣ ಬೆಳೆಸಲಾಗುವುದು. ಇದರ ಜೊತೆಗೆ ಪರ್ಯಾಯವಾಗಿ ದೊಡ್ಡ ಕ್ರೀಡಾಂಗಣವನ್ನು ನಿರ್ಮಾಣ ಮಾಡುತ್ತೇವೆ" ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IndiGo ಅವಾಂತರ ತಹಬದಿಗೆ: ಅಡಚಣೆ ಪ್ರಮಾಣ ಇಳಿಕೆ; 'ಹಂತಹಂತವಾಗಿ ಮರಳುತ್ತಿದ್ದೇವೆ' ಎಂದ CEO

LeT ಜೊತೆಗೆ ಒಪ್ಪಂದ; ಹಮಾಸ್ 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿ; ಭಾರತಕ್ಕೆ ಇಸ್ರೇಲ್ ಒತ್ತಾಯ!

ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ: 'ತಿಥಿ' ಹೀರೋಗೆ ಇಂದೆಂಥಾ ಸ್ಥಿತಿ?, ಅಭಿ ಈಗ ದಿನಗೂಲಿ ಕಾರ್ಮಿಕ!

ಮದುವೆ ರದ್ದು ಬೆನ್ನಲ್ಲೇ ಪರಸ್ಪರ 'ಅನ್‌ಫಾಲೋ' ಮಾಡಿಕೊಂಡ ಸ್ಮೃತಿ ಮಂಧಾನ, ಪಲಾಶ್ ಮುಚ್ಚಲ್!

Goa nightclub fire: ರೆಸ್ಟೋರೆಂಟ್‌ ಮಾಲೀಕ, ಕಾರ್ಯಕ್ರಮ ಆಯೋಜಕರ ವಿರುದ್ಧ FIR; ಸರಪಂಚ್ ಬಂಧನ!

SCROLL FOR NEXT