ಡಿ.ಕೆ. ಶಿವಕುಮಾರ್ 
ರಾಜ್ಯ

ನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ: ಡಿ.ಕೆ ಶಿವಕುಮಾರ್

ಯಾರು ಯಾವ ಪ್ಯಾಂಟ್ ಹಾಕುತ್ತಾರೆ, ಯಾವ ವಾಚ್ ಹಾಕುತ್ತಾರೆ, ಅವರವರ ಆಸೆಗಳು. ಕೆಲವರು ಒಂದು ಸಾವಿರದ ಶೂ ಧರಿಸಿದರೆ ಮತ್ತೆ ಕೆಲವರು 1 ಲಕ್ಷದ ಶೂ ಧರಿಸುತ್ತಾರೆ. ನಾನು 1 ಸಾವಿರ ರೂಪಾಯಿ ವಾಚನ್ನೂ ಕಟ್ಟುವೆ, 10 ಲಕ್ಷ ರೂಪಾಯಿ ವಾಚನ್ನೂ ಕಟ್ಟುವೆ.

ಹಾಸನ: ನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಹಾಸನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ನಾನು ನನ್ನ ದುಡ್ಡಲ್ಲಿ ಎಷ್ಟು ವಾಚ್ ಬೇಕಾದರೂ ಖರೀದಿ ಮಾಡುತ್ತೇನೆ. ಖರೀದಿ ಮಾಡುವ ಶಕ್ತಿ ನನಗಿದೆ. ಯಾರು ಯಾವ ಪ್ಯಾಂಟ್ ಹಾಕುತ್ತಾರೆ, ಯಾವ ವಾಚ್ ಹಾಕುತ್ತಾರೆ, ಯಾವ ಕನ್ನಡಕ ಹಾಕುತ್ತಾರೆ ಎಂದು ನಾನು ಪ್ರಶ್ನೆ ಮಾಡುವುದಿಲ್ಲ ಎಂದರು.

ಇದು ವೈಯಕ್ತಿಕ ವಿಚಾರ, ಅವರವರ ಆಸೆಗಳು. ಕೆಲವರು ಒಂದು ಸಾವಿರದ ಶೂ ಧರಿಸಿದರೆ ಮತ್ತೆ ಕೆಲವರು 1 ಲಕ್ಷದ ಶೂ ಧರಿಸುತ್ತಾರೆ. ನಾನು 1 ಸಾವಿರ ರೂಪಾಯಿ ವಾಚನ್ನೂ ಕಟ್ಟುವೆ, 10 ಲಕ್ಷ ರೂಪಾಯಿ ವಾಚನ್ನೂ ಕಟ್ಟುವೆ. ಅದು ನನಗೆ ಬಿಟ್ಟ ವಿಚಾರ. ನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ. ಪಾಪ, ವಿರೋಧ ಪಕ್ಷದ ನಾಯಕರಿಗೆ ಅನುಭವದ ಕೊರತೆ ಇದೆ.

ಅವರಿಗೆ ಚುನಾವಣೆ ನಿಂತ ಅನುಭವವೂ ಇಲ್ಲ. ಹೀಗಾಗಿ ಗೊತ್ತಿಲ್ಲದೆ ಮಾತನಾಡಿದ್ದಾರೆ. ಅವರು ವಿರೋಧ ಪಕ್ಷದ ನಾಯಕ ಸ್ಥಾನದಲ್ಲಿರುವುದರಿಂದ ಪ್ರತಿಕ್ರಿಯೆ ನೀಡಿದ್ದೇನೆ. ಬೇರೆಯವರಾಗಿದ್ದರೆ ಪ್ರತಿಕ್ರಿಯೆ ನೀಡುತ್ತಿರಲಿಲ್ಲ. ನನ್ನ ವ್ಯವಹಾರ, ನನ್ನ ಬದುಕು ಏನು ಎಂದು ಬಿಜೆಪಿಯ ಶೇಕಡಾ 90 ರಷ್ಟು ನಾಯಕರಿಗೆ ಗೊತ್ತಿದೆ ಎಂದು ತಿಳಿಸಿದರು.

ಭಾಷಣದ ವೇಳೆ ಮುಂದಿನ ದಿನಗಳಲ್ಲಿ ಹೊಸ ಪರ್ವ ಆರಂಭವಾಗಲಿದೆ, ಹೊಸ ಗುರಿ ಮುಟ್ಟೋಣ ಎಂದು ಹೇಳಿದಿರಿ, ಯಾವಾಗ ಗುರಿ ಮುಟ್ಟುತ್ತೀರಿ ಎಂದು ಕೇಳಿದಾಗ, “ನಾವು ಜನರ ಪರವಾಗಿ ಕೆಲಸ ಮಾಡಿದಾಗ ಮಾತ್ರವಲ್ಲವೇ ಗುರಿ ಮುಟ್ಟುವುದು. ನಮ್ಮ ಸಾಧನೆಗಳು ಜನರನ್ನು ತಲುಪುತ್ತಿದೆ. ಗ್ಯಾರಂಟಿ ಯೋಜನೆಯಿಂದ ಜನರಿಗೆ 1.11 ಲಕ್ಷ ಕೋಟಿಯಷ್ಟು ಹಣ ಜನರಿಗೆ ತಲುಪುತ್ತಿದ್ದಂತೆ ಗ್ಯಾರಂಟಿ ಸಮಾವೇಶ ಮಾಡಬೇಕು ಎಂದು ನಾನು ಹಾಗೂ ಕೃಷ್ಣ ಭೈರೇಗೌಡ ಅವರು ಚರ್ಚೆ ಮಾಡುತ್ತಿದ್ದೆವು. ಹೀಗೆ ನಮ್ಮ ಹೊಸ ಆಲೋಚನೆಗಳಿವೆ. ಅವುಗಳನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ” ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup: ಭಾರತಕ್ಕೆ ಬರದಿದ್ದರೇ ಟೂರ್ನಿಯಿಂದ ಹೊರಕ್ಕೆ; ಬಾಂಗ್ಲಾಗೆ ಐಸಿಸಿಯಿಂದ 24 ಗಂಟೆ ಅಂತಿಮ ಗಡುವು!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯ ನಡೆಸಲು ನಾವು ರೆಡಿ, ಆದರೆ RCB ಹಿಂಜರಿಯುತ್ತಿದೆ: ವೆಂಕಟೇಶ್ ಪ್ರಸಾದ್

ರಾಸಲೀಲೆ ಪ್ರಕರಣ: ಅಮಾನತುಗೊಂಡ ಡಿಜಿಪಿ ರಾಮಚಂದ್ರ ರಾವ್ ಸ್ಥಾನಕ್ಕೆ ಉಮೇಶ್ ಕುಮಾರ್ ನೇಮಕ

ಜಂಟಿ ಅಧಿವೇಶನ: ಸದನ ಕದನಕ್ಕೆ ಆಡಳಿತರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಸಿದ್ಧತೆ

ಶಬರಿಮಲೆ ಚಿನ್ನ ಕಳವು ಪ್ರಕರಣ: EDಯಿಂದ 1.3 ಕೋಟಿ ರೂ. ಆಸ್ತಿ ಮುಟ್ಟುಗೋಲು, ಚಿನ್ನದ ಗಟ್ಟಿ ವಶಕ್ಕೆ!

SCROLL FOR NEXT