ಬೆಂಗಳೂರಿನಲ್ಲಿ ಚಳಿ ತೀವ್ರ 
ರಾಜ್ಯ

Bengaluru Weather | ತಾಪಮಾನ ಮತ್ತಷ್ಟು ಇಳಿಕೆ: ಬೆಂಗಳೂರಿನಲ್ಲಿ ಚಳಿ ಪ್ರಮಾಣ ಹೆಚ್ಚಳ; ವಾಯು ಗುಣಮಟ್ಟದಲ್ಲೂ ಬದಲಾವಣೆ

ಬೆಂಗಳೂರಿನ ತಾಪಮಾನ ಕಡಿಮೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ತಾಪಮಾನ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಿವಾಸಿಗಳು ಈಗಾಗಲೇ ಚಳಿಯ ತೀವ್ರತೆಗೆ ಹೈರಾಣಾಗಿದ್ದು, ಇದೀಗ ಹವಾಮಾನ ಇಲಾಖೆ ನಗರದಲ್ಲಿ ಚಳಿ ತೀವ್ರಗೊಳ್ಳುವ ಮಾಹಿತಿ ನೀಡಿದೆ.

ಹೌದು.. ಬೆಂಗಳೂರಿನ ತಾಪಮಾನ ಕಡಿಮೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ತಾಪಮಾನ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಕಳೆದೊಂದು ವಾರದಿಂದ ನಗರದಲ್ಲಿ ಮೋಡಕವಿದ ವಾತಾವರಣವಿದ್ದು ಇದು ತಾಪಮಾನ ಮತ್ತಷ್ಟು ಕುಸಿಯಲು ಕಾರಣ ಎನ್ನಲಾಗಿದೆ.

ಬೆಂಗಳೂರಿನಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 15 ಡಿಗ್ರಿ ಸೆಲ್ಸಿಯಸ್ ಮತ್ತು 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ. ಬೆಂಗಳೂರಿನಲ್ಲಿ ಸಂಜೆ 5:53 ಕ್ಕೆ ಸೂರ್ಯಾಸ್ತವಾಗುವ ನಿರೀಕ್ಷೆಯಿದೆ. ಆರ್ದ್ರತೆಯು ಸುಮಾರು 49 ಪ್ರತಿಶತದಷ್ಟು ಇರುತ್ತದೆ ಎಂದು ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದೆ ಇತರೆಡೆ ಒಣಹವೆ

ಇನ್ನು ಹವಾಮಾನ ಇಲಾಖೆ ಮೂಲವನ್ನು ಉಲ್ಲೇಖಿಸಿ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) X ನಲ್ಲಿನ ಹವಾಮಾನ ವರದಿಯನ್ನು ಹಂಚಿಕೊಂಡಿದ್ದು, "ರಾಜ್ಯದಾದ್ಯಂತ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ, ಬೆಳಿಗ್ಗೆ ಶೀತ ಮತ್ತು ಮಂಜಿನ ಪರಿಸ್ಥಿತಿಗಳು ಸಾಧ್ಯ" ಎಂದು ಹೇಳಿದೆ.

ಬೆಂಗಳೂರು ಗಾಳಿ ಗುಣಮಟ್ಟ

ನಗರದಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕ (AQI) ಸುಮಾರು 190 ತಲುಪುವ ನಿರೀಕ್ಷೆಯಿದೆ, ಇದು ಮಧ್ಯಮ ವ್ಯಾಪ್ತಿಯಲ್ಲಿ ಬರುತ್ತದೆ. 90 ರಿಂದ 200 ರ ನಡುವಿನ AQI ಅನ್ನು ಮಧ್ಯಮ ಎಂದು ವರ್ಗೀಕರಿಸಲಾಗಿದೆ.

ಮುಂದಿನ ಮೂರು ದಿನ ತಾಪಮಾನ ಕುಸಿತ

ಹವಾಮಾನ ಇಲಾಖೆ ಮಾಹಿತಿ ನೀಡಿರುವಂತೆ ಮುಂದಿನ ಮೂರು ದಿನಗಳ ತಾಪಮಾನದಲ್ಲಿ ಮತ್ತಷ್ಟು ಕುಸಿತವಾಗುವ ಸಾಧ್ಯತೆ ಇದೆ. ಡಿಸೆಂಬರ್ 9 ರಂದು ಕನಿಷ್ಠ ಮತ್ತು ಗರಿಷ್ಠ ತಾಪಮಾನಗಳು ಕ್ರಮವಾಗಿ 15 ಡಿಗ್ರಿ ಸೆಲ್ಸಿಯಸ್ ಮತ್ತು 26 ಡಿಗ್ರಿ ಸೆಲ್ಸಿಯಸ್. ಆರ್ದ್ರತೆಯು ಸುಮಾರು 50 ಪ್ರತಿಶತದಷ್ಟಿರುತ್ತದೆ.

ಅಂತೆಯೇ ಡಿಸೆಂಬರ್ 10, ಬುಧವಾರ, ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 14 ಡಿಗ್ರಿ ಸೆಲ್ಸಿಯಸ್ ಮತ್ತು 27 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ. ಅಂದು ಮೋಡ ಕವಿದ ವಾತಾವರಣ ಅನುಭವಿಸುವ ನಿರೀಕ್ಷೆಯಿದೆ ಮತ್ತು ದಿನವಿಡೀ ಅದು ಒಂದೇ ಆಗಿರುತ್ತದೆ ಎಂದು ಹೇಳಿದೆ.

ಅಂತೆಯೇ ಡಿಸೆಂಬರ್ 11ರಂದು ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆಯಿರುವುದರಿಂದ ನಿವಾಸಿಗಳು ತಂಪಾದ ವಾತಾವರಣವನ್ನು ಅನುಭವಿಸುತ್ತಾರೆ. ಕನಿಷ್ಠ ಮತ್ತು ಗರಿಷ್ಠ ತಾಪಮಾನವು ಕ್ರಮವಾಗಿ 13 ಡಿಗ್ರಿ ಸೆಲ್ಸಿಯಸ್ ಮತ್ತು 26 ಡಿಗ್ರಿ ಸೆಲ್ಸಿಯಸ್ ಆಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

WPL 2026: ನೇರವಾಗಿ ಫೈನಲ್ ಪ್ರವೇಶಿಸಿದ ಸ್ಮೃತಿ ಮಂದಾನ ನಾಯಕತ್ವದ RCB ಪಡೆ!

17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಸಿಎಂ ಸಿದ್ದರಾಮಯ್ಯ ಉದ್ಘಾಟನೆ

ಟ್ರಂಪ್ ದಾಳಿ ಬೆದರಿಕೆ ಬೆನ್ನಲ್ಲೇ ಇರಾನ್‌ಗೆ ಶಾಕ್: ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್‌ ಉಗ್ರ ಸಂಘಟನೆ ಎಂದು ಪಟ್ಟಿ ಮಾಡಿದ EU!

ಒಟ್ಟಾರೆ 320 ಕೋಟಿ ಆಸ್ತಿ ಮುಟ್ಟುಗೋಲು: ಕರ್ನಾಟಕ Congress ಶಾಸಕ, ಸಹಚರರು ಅಕ್ರಮ ಬೆಟ್ಟಿಂಗ್ ಜಾಲದ 'ಮಾಸ್ಟರ್ ಮೈಂಡ್'; ED

Indian Armyಗೆ 2 ದೀರ್ಘ-ಶ್ರೇಣಿಯ 'Suryastra' ರಾಕೆಟ್ ಲಾಂಚರ್‌ ಸೇರ್ಪಡೆ, ಶೀಘ್ರ live-fire ಪ್ರಯೋಗ!

SCROLL FOR NEXT