ಬೆಳಗಾವಿ ಚಳಿಗಾಲ ಅಧಿವೇಶನ. 
ರಾಜ್ಯ

ಬೆಳಗಾವಿ ಅಧಿವೇಶನ: ವಿಧಾಸಭೆ ಕಲಾಪ ಆರಂಭ; ಸಾಲುಮರದ ತಿಮ್ಮಕ್ಕ ಸೇರಿ ಇತ್ತೀಚಿಗೆ ನಿಧನರಾದ ಗಣ್ಯರಿಗೆ ಸಂತಾಪ

ಇಂದು ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ʻವೃಕ್ಷಮಾತೆʼ ಸಾಲುಮರದ ತಿಮ್ಮಕ್ಕ, ಮಾಜಿ ಸಚಿವ ಎಚ್ ವೈ ಮೇಟಿ ಸೇರಿದಂತೆ ಇತ್ತೀಚಿಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ವಿಧಾನ ಮಂಡಲ ಉಭಯ ಸದನಗಳ ಚಳಿಗಾಲದ ಅಧಿವೇಶನ ಆರಂಭವಾಗಿದೆ.

ಇಂದು ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ʻವೃಕ್ಷಮಾತೆʼ ಸಾಲುಮರದ ತಿಮ್ಮಕ್ಕ, ಮಾಜಿ ಸಚಿವ ಎಚ್ ವೈ ಮೇಟಿ ಸೇರಿದಂತೆ ಇತ್ತೀಚಿಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.

ಉತ್ತರ, ಕಲ್ಯಾಣ ಕರ್ನಾಟಕದ ಸಮಸ್ಯೆಗಳ ಪರಿಹಾರಕ್ಕೆ ಬುಧವಾರ, ಗುರುವಾರ ಮೀಸಲು

ಅಧಿವೇಶನದಲ್ಲಿ ಬುಧವಾರ ಮತ್ತು ಗುರುವಾರ ಪೂರ್ತಿ ದಿನದ ಕಲಾಪವನ್ನು ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದ್ದಾರೆ.

ಇಂದು ಸುವರ್ಣಸೌಧದ ಎರಡನೇ ಮಹಡಿಯ ಕೊಠಡಿ ಸಂಖ್ಯೆ 238ರಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಹೊರಟ್ಟಿ, ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಬಗ್ಗೆ 145ನೇ ಅಧಿವೇಶನದಲ್ಲಿ 6 ಗಂಟೆ 35 ನಿಮಿಷ ಚರ್ಚೆಯಾಗಿದ್ದು, 19 ಜನ ಪರಿಷತ್ ಶಾಸಕರು ಮಾತನಾಡಿದ್ದಾರೆ ಎಂದರು.

151ನೇ ಅಧಿವೇಶನದಲ್ಲಿ 1 ಗಂಟೆ 40 ನಿಮಿಷ ಚರ್ಚೆಯಾಗಿದ್ದು, 6 ಜನ ಪರಿಷತ್ ಶಾಸಕರು ಮಾತನಾಡಿದ್ದಾರೆ. 154ನೇ ಅಧಿವೇಶನದಲ್ಲಿ 5 ಗಂಟೆ 12 ನಿಮಿಷ ಚರ್ಚೆಯಾಗಿದ್ದು, 11 ಜನ ಪರಿಷತ್ ಶಾಸಕರು ಮಾತನಾಡಿದ್ದಾರೆ. ಅದೇ ರೀತಿ ಈ ಬಾರಿಯ ಅಧಿವೇಶನದಲ್ಲಿ ಸಹ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ವಿಶೇಷ ಅವಕಾಶ‌ ಕಲ್ಪಿಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ಲಖಿಸರಾಯಿ ದೇವಾಲಯದ ಬಳಿ ಭೀಕರ ಕಾಲ್ತುಳಿತ: 7 ಭಕ್ತರ ಸಾವು, ಹಲವರಿಗೆ ಗಾಯ

ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ H1N1 ಫ್ಲೂ ಆತಂಕ: ಇಬ್ಬರಲ್ಲಿ ಸೋಂಕು ದೃಢ, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು, ಕಬಾಬ್ ಅಂಗಡಿಗಳ ತೆರವಿಗೆ ಆಗ್ರಹ!

Video: ಮೆಟ್ರೋ ರೈಲಿನಲ್ಲಿ ಮಹಿಳೆಯ ಫೋಟೋ ತೆಗೆದ ಆರೋಪ: CISF ಅಧಿಕಾರಿಗೆ ಪ್ರಯಾಣಿಕರ ತರಾಟೆ, ರಂಪಾಟ

'ನಾನು ನಲ್ಸಾರ್ ಆಹ್ವಾನವನ್ನೇ ಸ್ವೀಕರಿಸಿಲ್ಲ; ಅಲ್ಲಿಗೆ ಹೋಗುವ ಪ್ರಶ್ನೆಯೇ ಇಲ್ಲ': CJI ಸೂರ್ಯಕಾಂತ್ ಸ್ಪಷ್ಟನೆ

ಚಾಮರಾಜನಗರ ಶೂಟೌಟ್‌ ಕೇಸ್: ‘ಮೃತರು ರೈತರೇ ಹೊರತು ಬೇಟೆಗಾರರಲ್ಲ’; ಮೂವರು ತಮಿಳರ ಹತ್ಯೆಗೆ ಸಿಎಂ ವಿಜಯ್ ತೀವ್ರ ಖಂಡನೆ, ಉನ್ನತ ಮಟ್ಟದ ತನಿಖೆಗೆ ಆಗ್ರಹ..!