ರಸೆಲ್ ಮಾರುಕಟ್ಟೆ 
ರಾಜ್ಯ

Russell Market: 140 ಕೋಟಿ ರೂ ವೆಚ್ಚದಲ್ಲಿ ಹೊಸ ರೂಪ..!

ಮುಂಭಾಗದಲ್ಲಿ ಹಣ್ಣು ಮತ್ತು ತರಕಾರಿ ಅಂಗಡಿಗಳು ಮತ್ತು ಗಡಿಯಾರ ಗೋಪುರವನ್ನು ಹೊಂದಿರುವ ಅಸ್ತಿತ್ವದಲ್ಲಿರುವ ಪಾರಂಪರಿಕ ರಚನೆಗೆ ಯಾವುದೇ ತೊಂದರೆಯಾಗುವುದಿಲ್ಲ.

ಬೆಂಗಳೂರು: 140 ಕೋಟಿ ರೂ. ವೆಚ್ಚದಲ್ಲಿ ಶಿವಾಜಿನಗರದ ರಸೆಲ್ ಮಾರುಕಟ್ಟೆಯನ್ನು ಅಭಿವೃದ್ಧಿ ಪಡಿಸಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಮುಂದಾಗಿದೆ.

ಡೀಟೇಲ್ಡ್ ಪ್ರಾಜೆಕ್ಟ್ ರಿಪೋರ್ಟ್ (DPR) ಪ್ರಕಾರ, ಮಾರ್ಕೆಟ್‌ನ ಹಿಂಭಾಗದಲ್ಲಿ ಇರುವ ಮಟನ್ ಮತ್ತು ಮೀನು ವಿಭಾಗವನ್ನು ನೆಲಕ್ಕುಳಿಸಿ, ಸ್ಥಳವನ್ನು ಸಂಪೂರ್ಣವಾಗಿ ಮರು ನಿರ್ಮಾಣ ಮಾಡುವ ಯೋಜನೆಯನ್ನು ಹೊಂದಲಾಗಿದೆ ಎಂದು ತಿಳಿದುಬಂದಿದೆ.

ಮಾರುಕಟ್ಟೆ ಸಂಕೀರ್ಣವನ್ನು ಶಿವಾಜಿನಗರ ಬಸ್ ನಿಲ್ದಾಣ ಮತ್ತು ಮೆಟ್ರೋ ನಿಲ್ದಾಣದೊಂದಿಗೆ ಎತ್ತರದ ಮಾರ್ಗದೊಂದಿಗೆ ಸಂಪರ್ಕಿಸಲಾಗುತ್ತದೆ.

ಮುಂಭಾಗದಲ್ಲಿ ಹಣ್ಣು ಮತ್ತು ತರಕಾರಿ ಅಂಗಡಿಗಳು ಮತ್ತು ಗಡಿಯಾರ ಗೋಪುರವನ್ನು ಹೊಂದಿರುವ ಅಸ್ತಿತ್ವದಲ್ಲಿರುವ ಪಾರಂಪರಿಕ ರಚನೆಗೆ ಯಾವುದೇ ತೊಂದರೆಯಾಗುವುದಿಲ್ಲ. ನಿರ್ಮಾಣ ಕಾರ್ಯ ಪೂರ್ಣಗೊಂಡ ನಂತರ, ಮಾರುಕಟ್ಟೆಯಲ್ಲಿ 470 ಕ್ಕೂ ಹೆಚ್ಚು ಅಂಗಡಿಗಳಿರಲಿವೆ. ನೆಲಮಾಳಿಗೆಯಲ್ಲಿ ಪಾರ್ಕಿಂಗ್ವ್ಯವಸ್ಥೆ ಇರಲಿದ್ದು, ಸಂಚಾರ ಸಮಸ್ಯೆ ಬಗೆಹರಿಯಲಿದೆ ಎಂದು ಎಂಜಿನಿಯರ್ ಮಾಹಿತಿ ನೀಡಿದ್ದಾರೆ.

ಮಾರುಕಟ್ಟೆಯ ಮುಂಭಾಗದಲ್ಲಿ ವಿದ್ಯುತ್, ಒಳಚರಂಡಿ ಮತ್ತು ಶೌಚಾಲಯ ಸೌಲಭ್ಯಗಳಿಲ್ಲ. ನವೀಕರಣ ಕಾಮಗಾರಿಯಲ್ಲಿ ಈ ಯೋಜನೆಯೂ ಇದೆ ಎಂದು ತಿಳಿಸಿದ್ದಾರೆ.

ಯೋಜನೆಯು ಒಮ್ಮೆ ಪ್ರಾರಂಭವಾದರೆ ಪೂರ್ಣಗೊಳ್ಳಲು 18 ರಿಂದ 24 ತಿಂಗಳುಗಳು ಸಮಯ ತೆಗೆದುಕೊಳ್ಳುತ್ತದೆ. ಅಭಿವೃದ್ಧಿ ಕಾರ್ಯವನ್ನು ಹಂತ ಹಂತವಾಗಿ ಮಾಡಲಾಗುವುದರಿಂದ, ಮಾರ್ಕೆಟ್‌ನ ಮುಂಭಾಗದ ಭಾಗವನ್ನು ತಾತ್ಕಾಲಿಕವಾಗಿ ಮಾರಾಟಗಾರರ ವಾಹನ ನಿಲುಗಡೆ ತಾಣವಾಗಿ ಉಪಯೋಗವಾಗಬಹುದು. ನಿರ್ಮಾಣ ಕಾರ್ಯಕ್ಕಾಗಿ ಬೆಂಗಳೂರು ಕೇಂದ್ರ ನಗರ ಪಾಲಿಕೆ ಶೀಘ್ರದಲ್ಲೇ ಟೆಂಡರ್ ಕರೆಯಲಿದೆ ಎಂದು ಪಾಲಿಕೆ ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್