ಬೆಳಗಾವಿ ಸುವರ್ಣ ಸೌಧ 
ರಾಜ್ಯ

ಬೆಳಗಾವಿ ಅಧಿವೇಶನ ಆರಂಭದಲ್ಲೇ ಕದನ ಸದ್ದು: 20 ಸಾವಿರ ರೈತರೊಂದಿಗೆ ಸುವರ್ಣ ಸೌಧಕ್ಕೆ ಇಂದು ಮುತ್ತಿಗೆ ಹಾಕಲು ಬಿಜೆಪಿ ಸಜ್ಜು

ಉತ್ತರ ಕರ್ನಾಟಕದ ಅಭಿವೃದ್ಧಿ, ಬೆಳೆಹಾನಿ ಪರಿಹಾರಕ್ಕೆ ಆಗ್ರಹಿಸಿ 20 ಸಾವಿರ ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಸಿದ್ಧತೆ ನಡೆಸಿದೆ. ಇಂದು ದೊಡ್ಡ ಮಟ್ಟದ ಹೋರಾಟದ ನಿರೀಕ್ಷೆಯಿದೆ.

ಬೆಳಗಾವಿ: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಖಂಡಿಸಿ ಇಂದು ಮಂಗಳವಾರ ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಮೊದಲು 20,000 ಕ್ಕೂ ಹೆಚ್ಚು ರೈತರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ.

ನಿನ್ನೆ ಮಾಲಿನಿ ಸಿಟಿ ಮೈದಾನದಲ್ಲಿ ಪ್ರತಿಭಟನಾ ಸ್ಥಳವನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಪಕ್ಷದ ಶಾಸಕ ಅಭಯ್ ಪಾಟೀಲ್ ಮತ್ತು ಎಂಎಲ್‌ಸಿ ಸಿ.ಟಿ. ರವಿ ಅವರೊಂದಿಗೆ ವಿಜಯೇಂದ್ರ ಪರಿಶೀಲಿಸಿದರು.

ಉತ್ತರ ಕರ್ನಾಟಕದ ಅಭಿವೃದ್ಧಿ, ಬೆಳೆಹಾನಿ ಪರಿಹಾರಕ್ಕೆ ಆಗ್ರಹಿಸಿ 20 ಸಾವಿರ ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಸಿದ್ಧತೆ ನಡೆಸಿದೆ. ಇಂದು ದೊಡ್ಡ ಮಟ್ಟದ ಹೋರಾಟದ ನಿರೀಕ್ಷೆಯಿದೆ.

"ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರನ್ನು ನಿರ್ಲಕ್ಷಿಸಿದ್ದಕ್ಕಾಗಿ ನಮ್ಮ ಪ್ರತಿಭಟನೆ ಇದಾಗಿರುತ್ತದೆ. ಕಬ್ಬು, ಜೋಳ, ಭತ್ತ, ತೊಗರಿ ಬೆಳೆಗಾರರು ಮತ್ತು ಇತರ ರೈತರಿಗೆ ಅನ್ಯಾಯವಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಕಷ್ಟ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು, ಆದರೆ ರೈತರ ಸಮಸ್ಯೆಗಳನ್ನು ನಿವಾರಿಸಲು ಏನನ್ನೂ ಮಾಡಲಿಲ್ಲ.

ಕಾಂಗ್ರೆಸ್ ಸರ್ಕಾರ ರೈತರ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವನ್ನು ದೂಷಿಸುವುದು ಅಭ್ಯಾಸ ಮಾಡಿಕೊಂಡಿದೆ. ರಾಜ್ಯ ಸರ್ಕಾರದಿಂದ ರೈತರಿಗೆ ಪರಿಹಾರ ಸಿಕ್ಕಿಲ್ಲ. ಇಂದು ನಡೆಯಲಿರುವ ಪ್ರತಿಭಟನೆಯಲ್ಲಿ 20,000 ಕ್ಕೂ ಹೆಚ್ಚು ರೈತರು ಭಾಗವಹಿಸಲಿದ್ದಾರೆ" ಎಂದು ವಿಜಯೇಂದ್ರ ಹೇಳಿದರು.

ವಿಧಾನಸಭೆ ವಿರೋಧ ಪಕ್ಷ ನಾಯಕ ಆರ್ ಅಶೋಕ್ ಮಾಹಿತಿ ನೀಡಿ, ರಾಜ್ಯದಲ್ಲಿ 2400 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಜಾನೆ ಖಾಲಿ ಖಾಲಿಯಾಗಿದೆ. ಕಾಂಗ್ರೆಸ್‌​ನವರು ಜಾಲಿ ಜಾಲಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ, ಸುವರ್ಣಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ಲಖಿಸರಾಯಿ ದೇವಾಲಯದ ಬಳಿ ಭೀಕರ ಕಾಲ್ತುಳಿತ: 7 ಭಕ್ತರ ಸಾವು, ಹಲವರಿಗೆ ಗಾಯ

ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ H1N1 ಫ್ಲೂ ಆತಂಕ: ಇಬ್ಬರಲ್ಲಿ ಸೋಂಕು ದೃಢ, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು, ಕಬಾಬ್ ಅಂಗಡಿಗಳ ತೆರವಿಗೆ ಆಗ್ರಹ!

'ನಾನು ನಲ್ಸಾರ್ ಆಹ್ವಾನವನ್ನೇ ಸ್ವೀಕರಿಸಿಲ್ಲ; ಅಲ್ಲಿಗೆ ಹೋಗುವ ಪ್ರಶ್ನೆಯೇ ಇಲ್ಲ': CJI ಸೂರ್ಯಕಾಂತ್ ಸ್ಪಷ್ಟನೆ

ಚಾಮರಾಜನಗರ ಶೂಟೌಟ್‌ ಕೇಸ್: ‘ಮೃತರು ರೈತರೇ ಹೊರತು ಬೇಟೆಗಾರರಲ್ಲ’; ಮೂವರು ತಮಿಳರ ಹತ್ಯೆಗೆ ಸಿಎಂ ವಿಜಯ್ ತೀವ್ರ ಖಂಡನೆ, ಉನ್ನತ ಮಟ್ಟದ ತನಿಖೆಗೆ ಆಗ್ರಹ..!

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ