ಸಂಗ್ರಹ ಚಿತ್ರ 
ರಾಜ್ಯ

ST ವರ್ಗ ಸೇರ್ಪಡೆಗೆ ಆಗ್ರಹ: ಡಿಸೆಂಬರ್ 15ರಂದು ಬೆಳಗಾವಿಯಲ್ಲಿ ಕುರುಬ ಸಮುದಾಯ ಬೃಹತ್ ಪ್ರತಿಭಟನೆ

ರಾಜ್ಯದ ಎಲ್ಲಾ 30 ಜಿಲ್ಲೆಗಳಿಂದ ಸುಮಾರು 20,000 ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಬೆಳಗಾವಿಯೊಂದರಲ್ಲೇ 5 ಲಕ್ಷಕ್ಕೂ ಹೆಚ್ಚು ಕುರುಬರು ಇದ್ದಾರೆ.

ಬೆಂಗಳೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ವರ್ಗಕ್ಕೆ ಸೇರಿಸುವಂತೆ ಆಗ್ರಹಿಸಿ ಡಿಸೆಂಬರ್ 15ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ಪ್ರದೇಶ ಕುರುಬ ಎಸ್‌ಟಿ ಹೋರಾಟ ಸಮಿತಿ ಸೇರಿದಂತೆ ಇದರೆ ಹಲವಾರು ಕುರುಬ ಸಮುದಾಯದ ಸಂಘಟನೆಗಳು ತಿಳಿಸಿವೆ.

ಸಮಿತಿ ಅಧ್ಯಕ್ಷ ಸಿದ್ದಣ್ಣ ತೇಜಿ ಅವರು ಮಾತನಾಡಿ, ರಾಜ್ಯದ ಎಲ್ಲಾ 30 ಜಿಲ್ಲೆಗಳಿಂದ ಸುಮಾರು 20,000 ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಬೆಳಗಾವಿಯೊಂದರಲ್ಲೇ 5 ಲಕ್ಷಕ್ಕೂ ಹೆಚ್ಚು ಕುರುಬರು ಇದ್ದಾರೆ. ರಾಜ್ಯದಾದ್ಯಂತ ಕುರುಬರನ್ನು ಪರಿಶಿಷ್ಟ ಪಂಗಡ ಎಂದು ವರ್ಗೀಕರಿಸಬೇಕೆಂಬುದು ನಮ್ಮ ಏಕೈಕ ಬೇಡಿಕೆಯಾಗಿದೆ" ಎಂದು ಹೇಳಿದರು.

ನಮ್ಮ ಸಮುದಾಯಕ್ಕೆ ಅನ್ಯಾಯವಾಗಿದೆ. ಕೊಡಗು ಮತ್ತು ಬೀದರ್ ಜಿಲ್ಲೆಗಳಲ್ಲಿ, ಕುರುಬರು ಎಸ್‌ಟಿ ಸ್ಥಾನಮಾನ ಮತ್ತು ಮೀಸಲಾತಿ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ, ಆದರೆ ಉಳಿದ ಭಾಗಗಳಲ್ಲಿ 2A, ಒಬಿಸಿ ವರ್ಗದಲ್ಲಿಯೇ ಉಳಿದಿದ್ದೇವೆ. ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಸಮುದಾಯವನ್ನು ಎಸ್‌ಟಿ ಎಂದು ಗುರುತಿಸಲಾಗಿದೆ. ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಎಸ್‌ಸಿ ಎಂದು ಗುರುತಿಸಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಾಡಿಗೆದಾರರಿಗೆ ಸಿಹಿ ಸುದ್ದಿ: ಕರ್ನಾಟಕ 'ಬಾಡಿಗೆ ತಿದ್ದುಪಡಿ ವಿಧೇಯಕ' 2025 ವಿಧಾನಸಭೆಯಲ್ಲಿ ಮಂಡನೆ!

ವಿಧಾನಸಭೆಯಲ್ಲಿ 'ಸಿಎಂ ಕುರ್ಚಿ ಕದನ' ಸದ್ದು: ಆರ್. ಅಶೋಕ್ ಮಾತಿಗೆ ಕೆರಳಿದ ಬೈರತಿ; ತೀವ್ರ ಮಾತಿನ ಚಕಮಕಿ!

EVMs ಅಲ್ಲವೇ ಅಲ್ಲ, ಪ್ರಧಾನಿ ಮೋದಿ ಇದನ್ನೇ 'ಹ್ಯಾಕ್' ಮಾಡಿದ್ದಾರೆ! ಲೋಕಸಭೆಯಲ್ಲಿ ಕಂಗನಾ

ಸರ್ಕಾರದ ವಿರುದ್ಧ ಹೋರಾಡಿ ಗೆದ್ದ ಅಲೋಕ್ ಕುಮಾರ್​​ಗೆ DGP ಆಗಿ ಮುಂಬಡ್ತಿ: ADGP ಬಿ.ದಯಾನಂದ್ ವರ್ಗಾವಣೆ

25 ವರ್ಷ ವಯಸ್ಸಿನ ಅವಿವಾಹಿತ ಮಹಿಳೆಯರು..: ಅನಿರುದ್ಧಾಚಾರ್ಯ ವಿರುದ್ಧ ಕೇಸ್ ದಾಖಲು! 'ಪೂಕಿ ಬಾಬಾ' ಹೇಳಿದ್ದೇನು ಗೊತ್ತಾ?

SCROLL FOR NEXT