ಸಂಗ್ರಹ ಚಿತ್ರ 
ರಾಜ್ಯ

ST ವರ್ಗ ಸೇರ್ಪಡೆಗೆ ಆಗ್ರಹ: ಡಿಸೆಂಬರ್ 15ರಂದು ಬೆಳಗಾವಿಯಲ್ಲಿ ಕುರುಬ ಸಮುದಾಯ ಬೃಹತ್ ಪ್ರತಿಭಟನೆ

ರಾಜ್ಯದ ಎಲ್ಲಾ 30 ಜಿಲ್ಲೆಗಳಿಂದ ಸುಮಾರು 20,000 ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಬೆಳಗಾವಿಯೊಂದರಲ್ಲೇ 5 ಲಕ್ಷಕ್ಕೂ ಹೆಚ್ಚು ಕುರುಬರು ಇದ್ದಾರೆ.

ಬೆಂಗಳೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ವರ್ಗಕ್ಕೆ ಸೇರಿಸುವಂತೆ ಆಗ್ರಹಿಸಿ ಡಿಸೆಂಬರ್ 15ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ಪ್ರದೇಶ ಕುರುಬ ಎಸ್‌ಟಿ ಹೋರಾಟ ಸಮಿತಿ ಸೇರಿದಂತೆ ಇದರೆ ಹಲವಾರು ಕುರುಬ ಸಮುದಾಯದ ಸಂಘಟನೆಗಳು ತಿಳಿಸಿವೆ.

ಸಮಿತಿ ಅಧ್ಯಕ್ಷ ಸಿದ್ದಣ್ಣ ತೇಜಿ ಅವರು ಮಾತನಾಡಿ, ರಾಜ್ಯದ ಎಲ್ಲಾ 30 ಜಿಲ್ಲೆಗಳಿಂದ ಸುಮಾರು 20,000 ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಬೆಳಗಾವಿಯೊಂದರಲ್ಲೇ 5 ಲಕ್ಷಕ್ಕೂ ಹೆಚ್ಚು ಕುರುಬರು ಇದ್ದಾರೆ. ರಾಜ್ಯದಾದ್ಯಂತ ಕುರುಬರನ್ನು ಪರಿಶಿಷ್ಟ ಪಂಗಡ ಎಂದು ವರ್ಗೀಕರಿಸಬೇಕೆಂಬುದು ನಮ್ಮ ಏಕೈಕ ಬೇಡಿಕೆಯಾಗಿದೆ" ಎಂದು ಹೇಳಿದರು.

ನಮ್ಮ ಸಮುದಾಯಕ್ಕೆ ಅನ್ಯಾಯವಾಗಿದೆ. ಕೊಡಗು ಮತ್ತು ಬೀದರ್ ಜಿಲ್ಲೆಗಳಲ್ಲಿ, ಕುರುಬರು ಎಸ್‌ಟಿ ಸ್ಥಾನಮಾನ ಮತ್ತು ಮೀಸಲಾತಿ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ, ಆದರೆ ಉಳಿದ ಭಾಗಗಳಲ್ಲಿ 2A, ಒಬಿಸಿ ವರ್ಗದಲ್ಲಿಯೇ ಉಳಿದಿದ್ದೇವೆ. ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಸಮುದಾಯವನ್ನು ಎಸ್‌ಟಿ ಎಂದು ಗುರುತಿಸಲಾಗಿದೆ. ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಎಸ್‌ಸಿ ಎಂದು ಗುರುತಿಸಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video