ಕೆ ಎನ್ ರಾಜಣ್ಣ 
ರಾಜ್ಯ

'ಗ್ಯಾರಂಟಿ ಮಾತ್ರ ನಂಬ್ಕೊಂಡಿದ್ರೆ ಆಗೋದಿಲ್ಲ, ಅಭಿವೃದ್ಧಿನೂ ಆಗ್ಬೇಕು ಅನ್ನೋದು ಕೈ ಶಾಸಕರ ಅಭಿಪ್ರಾಯ': ಕೆ.ಎನ್ ರಾಜಣ್ಣ

ಇಂದು ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಜೊತೆಜೊತೆಗೆ ಅಭಿವೃದ್ಧಿ ಕೆಲಸಗಳು ಕೂಡ ಆದರೆ ನಮಗೆ ಒಳ್ಳೆಯ ಹೆಸರು ಬರುತ್ತದೆ ಎಂಬ ಸಲಹೆ ನೀಡಲಾಗಿದೆ ಎಂದರು.

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ ಆಗಬೇಕು ಎಂಬುದನ್ನು ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆಯಲ್ಲಿ ಶಾಸಕರು ಅಭಿಪ್ರಾಯ ಹೊರಹಾಕಿದ್ದಾರೆ ಎಂದು ಹಿರಿಯ ಶಾಸಕ ಕೆ ಎನ್ ರಾಜಣ್ಣ ಹೇಳಿದ್ದಾರೆ.

ಇಂದು ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಜೊತೆಜೊತೆಗೆ ಅಭಿವೃದ್ಧಿ ಕೆಲಸಗಳು ಕೂಡ ಆದರೆ ನಮಗೆ ಒಳ್ಳೆಯ ಹೆಸರು ಬರುತ್ತದೆ ಎಂಬ ಸಲಹೆ ನೀಡಲಾಗಿದೆ ಎಂದರು.

ಎಐಸಿಸಿ ಅಧ್ಯಕ್ಷರ ಸೂಚನೆಯಂತೆ ಯಾವ ಮಂತ್ರಿಗಳೂ, ಶಾಸಕರು ಸಿಎಂ ಬದಲಾವಣೆ ಬಗ್ಗೆ ಚರ್ಚೆಯೂ ಮಾಡಬಾರದು, ಪ್ರಸ್ತಾಪ ಕೂಡ ಮಾಡಬಾರದು ಎಂದು ಬಂದಿದೆ. ಹಾಗಾಗಿ ನಾಯಕತ್ವ ಬದಲಾವಣೆ ವಿಚಾರವಾಗಿ ಯಾವ ಪ್ರಸ್ತಾಪನೂ ಇಲ್ಲ, ಚರ್ಚೆಯೂ ಶಾಸಕಾಂಗ ಸಭೆಯಲ್ಲಿ ಆಗಿಲ್ಲ, ಅದರ ಪುನರುಚ್ಛಾರದ ಅಗತ್ಯವೂ ಇಲ್ಲ ಎಂದರು.

ಬಿಜೆಪಿ ಲೇವಡಿ: ಇನ್ನೊಂದೆಡೆ ಸರ್ಕಾರದ ಗ್ಯಾರಂಟಿ ಯೋಜನೆಯನ್ನು ಕಾಂಗ್ರೆಸ್ ಶಾಸಕರೇ ವಿರೋಧಿಸುತ್ತಿದ್ದಾರೆ, ಅವರಿಗೇ ಈಗ ಅದರ ನ್ಯೂನತೆಗಳ ಬಗ್ಗೆ ಅರ್ಥವಾಗುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಲೇವಡಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮನ್ರೇಗಾ ಹೆಸರು ಬದಲಾವಣೆಗೆ ವಿರೋಧ: ನಾಳೆ ಕಾಂಗ್ರೆಸ್​ನಿಂದ ರಾಜಭವನ ಚಲೋ- DCM ಡಿಕೆ ಶಿವಕುಮಾರ್

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ಸಿದ್ದರಾಮಯ್ಯ ಆಕ್ರೋಶ ಬೆನ್ನಲ್ಲೇ​ ರಾಜೀವ್ ಗೌಡ ಬಂಧಿಸಿದ ಪೊಲೀಸರು!

ಭಾರತದಲ್ಲಿ ಹಿಂದೂಗಳಿಂದಾಗಿ ಮುಸ್ಲಿಮರು ಸುರಕ್ಷಿತವಾಗಿದ್ದಾರೆ: ಅಸ್ಸಾಂ ಚುನಾವಣೆಗೂ ಮುನ್ನ ಮೌಲಾನಾ ಬದ್ರುದ್ದೀನ್ ಹೇಳಿಕೆ!

'Op Sindoor: ಭಾರತೀಯ ವಾಯುಪಡೆಯ ಸಾಮರ್ಥ್ಯ ನೋಡಿಯೇ ಬೆಚ್ಚಿಬಿದ್ದ ಪಾಕಿಸ್ತಾನ ಕದನ ವಿರಾಮಕ್ಕೆ ಒತ್ತಾಯಿಸಿತ್ತು': ಸ್ವಿಸ್ ವರದಿ

CCL 2026: ಅವಮಾನ ಮಾಡಿದ ತಮಿಳುನಾಡಿನಲ್ಲೇ ಕನ್ನಡದ ಧ್ವಜ ಹಾರಿಸಿದ ಕಿಚ್ಚ ಸುದೀಪ್, Video!

SCROLL FOR NEXT