ಹೈಕೋರ್ಟ್‌ 
ರಾಜ್ಯ

ಹೈಕೋರ್ಟ್‌ನಲ್ಲಿ ಮುಟ್ಟಿನ ರಜೆ ಸಮರ್ಥಿಸಿಕೊಂಡ ಸರ್ಕಾರ; ವಿಚಾರಣೆ ಜನವರಿ 20 ಕ್ಕೆ ಮುಂದೂಡಿಕೆ

18 ರಿಂದ 52 ವರ್ಷದೊಳಗಿನ ಮಹಿಳೆಯರಿಗೆ ತಿಂಗಳಲ್ಲಿ ಒಂದು ದಿನ ಮುಟ್ಟಿನ ರಜೆ ನೀಡುವ ಅಧಿಸೂಚನೆಯನ್ನು ಸರ್ಕಾರ ನವೆಂಬರ್ 20 ರಂದು ಹೊರಡಿಸಿತ್ತು.

ಬೆಂಗಳೂರು: ಹೈಕೋರ್ಟ್‌ನಲ್ಲಿ, ಮಹಿಳಾ ನೌಕರರಿಗೆ ತಿಂಗಳಲ್ಲಿ ಒಂದು ದಿನ ಮುಟ್ಟಿನ ರಜೆ ನೀಡುವ ನೀತಿಯನ್ನು ಸಮರ್ಥಿಸಿಕೊಂಡ ಸರ್ಕಾರ, ಸಂವಿಧಾನದ 162ನೇ ವಿಧಿಯ ಅಡಿಯಲ್ಲಿ ಕಾರ್ಯನಿರ್ವಾಹಕ ಆದೇಶಗಳನ್ನು ಹೊರಡಿಸಲು ರಾಜ್ಯಕ್ಕೆ ಅಧಿಕಾರ ನೀಡುವ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಬುಧವಾರ ಉಲ್ಲೇಖಿಸಿದೆ.

18 ರಿಂದ 52 ವರ್ಷದೊಳಗಿನ ಮಹಿಳೆಯರಿಗೆ ತಿಂಗಳಲ್ಲಿ ಒಂದು ದಿನ ಮುಟ್ಟಿನ ರಜೆ ನೀಡುವ ಅಧಿಸೂಚನೆಯನ್ನು ಸರ್ಕಾರ ನವೆಂಬರ್ 20 ರಂದು ಹೊರಡಿಸಿತ್ತು.

ಈ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಜ್ಯೋತಿ ಎಂ ಅವರ ಪೀಠದ ಮುಂದೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಅವರು ರಾಜ್ಯದ ಆಕ್ಷೇಪಣೆಗಳನ್ನು ಸಲ್ಲಿಸಿದರು.

ಅಧಿಸೂಚನೆಯನ್ನು ಪ್ರಶ್ನಿಸಿ ಬೆಂಗಳೂರು ಹೋಟೆಲ್‌ಗಳ ಸಂಘ ಮತ್ತು ಅವಿರತ ಎಎಫ್‌ಎಲ್ ಕನೆಕ್ಟಿವಿಟಿ ಸಿಸ್ಟಮ್ಸ್ ಲಿಮಿಟೆಡ್, ಬೆಂಗಳೂರು ಮತ್ತು ಇತರರು ಅರ್ಜಿಗಳನ್ನು ಸಲ್ಲಿಸಿದ್ದಾರೆ.

ರಾಜ್ಯ ಸರ್ಕಾರ ಮುಟ್ಟಿನ ರಜೆಯನ್ನು ಕಡ್ಡಾಯಗೊಳಿಸುವ ಅಧಿಸೂಚನೆಯನ್ನು ಹೊರಡಿಸುವದಾದರೆ ಕೇಂದ್ರ ಕಾನೂನುಗಳನ್ನು ತಿದ್ದುಪಡಿ ಮಾಡಬೇಕು ಎಂಬ ಅರ್ಜಿದಾರರ ವಾದ ಆಧಾರರಹಿತವಾಗಿದೆ ಎಂದು ಸರ್ಕಾರ ಹೇಳಿದೆ.

ಅಧಿಸೂಚನೆಯನ್ನು ಆ ಶಾಸನಗಳ ಅಡಿಯಲ್ಲಿ ಅಂಗೀಕರಿಸಲಾಗಿಲ್ಲ. ಆದರೆ ಸಂವಿಧಾನದ 162ನೇ ವಿಧಿಯ ಅಡಿಯಲ್ಲಿ ಅಂಗೀಕರಿಸಲಾಗಿದೆ. ಇದು ಅರ್ಜಿದಾರರು ವಾದಿಸಿದಂತೆ ಕೇಂದ್ರ ಕಾಯ್ದೆಗಳೊಂದಿಗೆ ಸಂಘರ್ಷದಲ್ಲಿಲ್ಲ. ಇದಕ್ಕೆ ಸಚಿವ ಸಂಪುಟದ ಅನುಮೋದನೆ ಮಾತ್ರ ಬೇಕಾಗುತ್ತದೆ ಎಂದು ಸರ್ಕಾರ ಹೇಳಿದೆ.

ಅರ್ಜಿದಾರರು ಉಲ್ಲೇಖಿಸಿರುವ ಕೇಂದ್ರ ಕಾಯ್ದೆಗಳು, ಪ್ರತಿಯೊಬ್ಬ ಉದ್ಯೋಗಿಯೂ ತನಗೆ ನೀಡಲಾದ ಯಾವುದೇ ಕಾನೂನಿನಡಿಯಲ್ಲಿ ನೀಡಲಾದ ರಜೆಯ ಪ್ರಯೋಜನವನ್ನು ಪಡೆಯಲು ಅನುಮತಿಸುವ ನಿರ್ದಿಷ್ಟ ನಿಬಂಧನೆಯನ್ನು ಹೊಂದಿವೆ ಎಂದು ಸರ್ಕಾರ ಹೇಳಿದೆ.

ತಜ್ಞ ಸಮಿತಿಯ ಶಿಫಾರಸುಗಳು, ಕಾನೂನು ಆಯೋಗದ ವರದಿ ಮತ್ತು ಇತರ ಹಲವಾರು ತಜ್ಞರ ಅಭಿಪ್ರಾಯಗಳನ್ನು ಪರಿಗಣಿಸಿ ಈ ಅಧಿಸೂಚನೆಯನ್ನು ಹೊರಡಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಆಕ್ಷೇಪಾರ್ಹ ಆದೇಶವು ಆರ್ಥಿಕ ಹೊಣೆಗಾರಿಕೆಗೆ ಕಾರಣವಾಗುತ್ತದೆ ಎಂಬ ಅರ್ಜಿದಾರರ ವಾದವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಏಕೆಂದರೆ ನೌಕರರ ಆರೋಗ್ಯವು ರಾಜ್ಯದ ದೃಷ್ಟಿಯಲ್ಲಿ ಹೆಚ್ಚು ಮುಖ್ಯವಾಗಿದೆ ಎಂದು ಅಡ್ವೊಕೇಟ್ ಜನರಲ್ ಹೇಳಿದರು. ವಾದ ಆಲಿಸಿದ ನ್ಯಾಯಾಲಯ, ವಿಚಾರಣೆಯನ್ನು ಜನವರಿ 20 ಕ್ಕೆ ಮುಂದೂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026: ಷೇರುಮಾರುಕಟ್ಟೆ 'ರಕ್ತಪಾತ', ಹೂಡಿಕೆದಾರರ 9.40 ಲಕ್ಷ ಕೋಟಿ ರೂ ನಷ್ಟ! ಕುಸಿತಕ್ಕೆ ಕಾರಣವೇನು?

'ಆಗ ಸಿದ್ಧಾರ್ಥ್, ಈಗ CJ Roy': 'ತೆರಿಗೆ ಭಯೋತ್ಪಾದನೆ'; ಐಟಿ ದಾಳಿ ಕುರಿತು ಕೇಂದ್ರಕ್ಕೆ ಉದ್ಯಮಿ Mohandas Pai ಪತ್ರ! Video

T20 World Cup 2026: 'ಟೂರ್ನಿ ಆಡ್ತೇವೆ.. ಆದ್ರೆ ಭಾರತದ ವಿರುದ್ಧ ಆಡಲ್ಲ'; ಐಸಿಸಿಗೆ PCB ಹೊಸ ತಲೆನೋವು!

ಇನ್ಮುಂದೆ ಷೇರು ಮರುಖರೀದಿ ಲಾಭಕ್ಕೂ ತೆರಿಗೆ! Capital gains ಎಂದು ಪರಿಗಣಿಸುವ ಘೋಷಣೆ

U19 World Cup: ಪಾಕಿಸ್ತಾನವನ್ನು ಬಗ್ಗು ಬಡಿದು ಭಾರತ ಸೆಮಿಫೈನಲ್‌ಗೆ ಲಗ್ಗೆ; ಅಫ್ಘಾನ್ ಜೊತೆ ಗುದ್ದಾಟ!

SCROLL FOR NEXT