ಸಾಂದರ್ಭಿಕ ಚಿತ್ರ 
ರಾಜ್ಯ

ವಿಐಪಿಗಳಿಗೆ ಟ್ರೋಫಿ, ಸ್ಮರಣಿಕೆ ಬೇಡ; ಪರಿಸರ ಸ್ನೇಹಿ ವಸ್ತುಗಳನ್ನೇ ನೀಡಿ: ಅಧಿಕಾರಿಗಳಿಗೆ DPAR ಸೂಚನೆ

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(ಪ್ರೋಟೋಕಾಲ್) ಎಲ್ಲಾ ಹಿರಿಯ ಅಧಿಕಾರಿಗಳು, ರಾಜ್ಯಪಾಲರ ಕಚೇರಿ, ಸಚಿವಾಲಯ ಮತ್ತು ಇತರ ಕಚೇರಿಗಳಿಗೆ ಹೊಸ ನಿಯಮವನ್ನು ಜಾರಿಗೆ ತರಲು ಸುತ್ತೋಲೆ ಹೊರಡಿಸಿದೆ.

ಬೆಂಗಳೂರು: ಇನ್ನು ಮುಂದೆ ಸರ್ಕಾರಿ ಅಥವಾ ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಗಣ್ಯರಿಗೆ ಟ್ರೋಫಿಗಳು, ಸ್ಮರಣಿಕೆಗಳನ್ನು ನೀಡುವುದಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ.

ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(ಪ್ರೋಟೋಕಾಲ್) ಎಲ್ಲಾ ಹಿರಿಯ ಅಧಿಕಾರಿಗಳು, ರಾಜ್ಯಪಾಲರ ಕಚೇರಿ, ಸಚಿವಾಲಯ ಮತ್ತು ಇತರ ಕಚೇರಿಗಳಿಗೆ ಹೊಸ ನಿಯಮವನ್ನು ಜಾರಿಗೆ ತರಲು ಸುತ್ತೋಲೆ ಹೊರಡಿಸಿದೆ.

ಗಣ್ಯರಿಗೆ ಟ್ರೋಫಿ, ಸ್ಮರಣಿಕೆ ಬದಲಾಗಿ ಸ್ಥಳೀಯ ಕುಶಲಕರ್ಮಿಗಳು ತಯಾರಿಸಿದ ಕರಕುಶಲ ವಸ್ತುಗಳು, ಪುಸ್ತಕಗಳು, ಸಸಿಗಳನ್ನು ನೀಡಿ ಗೌರವಿಸಬೇಕು ಎಂದು ಡಿಪಿಎಆರ್ ಸೂಚಿಸಿದೆ.

"ಈ ಟ್ರೋಫಿಗಳನ್ನು ಗಣ್ಯರಿಗೆ ನೀಡುವಲ್ಲಿ ಒಳ್ಳೆಯ ಉದ್ದೇಶವಿದ್ದರೂ, ಈ ಪದ್ಧತಿಯು ಆರ್ಥಿಕ ಮತ್ತು ಪರಿಸರದ ಮೇಲೆ ಪರಿಣಾಮ ಬೀರುವುದರಿಂದ ಕಳವಳವನ್ನುಂಟುಮಾಡುತ್ತಿದೆ" ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಸರ್ಕಾರಿ ಮತ್ತು ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಗಣ್ಯರಿಗೆ ಹೂವಿನ ಹೂಗುಚ್ಛಗಳು, ಹಾರಗಳು, ಹಣ್ಣಿನ ಬುಟ್ಟಿಗಳು ಅಥವಾ ಶಾಲುಗಳನ್ನು ನೀಡಬಾರದು ಎಂಬ 2021ರ ಸುತ್ತೋಲೆಯ ಜೊತೆಗೆ ಬುಧವಾರದ ನಿರ್ದೇಶನವು ಇದೆ. ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡುವಂತೆ ಕಾರ್ಯಕ್ರಮ ಸಂಘಟಕರಿಗೆ ನಿರ್ದೇಶನ ನೀಡಿದೆ.

ಲ್ಯಾಮಿನೇಟೆಡ್ ಮರದ ಫಲಕಗಳು, ಪ್ಲಾಸ್ಟಿಕ್, ಲೋಹ ಅಥವಾ ಗಾಜಿನ ಸ್ಮರಣಿಕೆಗಳಂತಹ ವಸ್ತುಗಳು ಪರಿಸರದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ ಎಂದು ಇತ್ತೀಚಿನ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!