ಸಾಂದರ್ಭಿಕ ಚಿತ್ರ  
ರಾಜ್ಯ

ಹಾವೇರಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ, ಶಿಕ್ಷಕನಿಗೆ ಥಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ; Video

ಮಕ್ಕಳು ತಮ್ಮ ಪೋಷಕರಿಗೆ ಮಾಹಿತಿ ನೀಡಿದ ನಂತರ ಈ ವಿಷಯ ಬೆಳಕಿಗೆ ಬಂದಿದ್ದು, ಸಮುದಾಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಹಾವೇರಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತ ಸರ್ಕಾರಿ ಶಾಲಾ ಶಿಕ್ಷಕನೊಬ್ಬನನ್ನು ಸ್ಥಳೀಯರು ಥಳಿಸಿ, ಚಪ್ಪಲಿ ಹಾರ ಹಾಕಿ ಪೊಲೀಸ್ ಠಾಣೆಗೆ ಮೆರವಣಿಗೆ ಮಾಡಿದ ನಂತರ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಉದ್ವಿಗ್ನತೆ ಭುಗಿಲೆದ್ದಿದೆ.

ಸವಣೂರಿನ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಕರೊಬ್ಬರು ಹಲವು ವರ್ಷಗಳಿಂದ ಹಲವಾರು ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಕ್ಕಳು ತಮ್ಮ ಪೋಷಕರಿಗೆ ಮಾಹಿತಿ ನೀಡಿದ ನಂತರ ಈ ವಿಷಯ ಬೆಳಕಿಗೆ ಬಂದಿದ್ದು, ಸಮುದಾಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಪೋಷಕರು ಮತ್ತು ಸ್ಥಳೀಯ ನಿವಾಸಿಗಳ ಗುಂಪೊಂದು ಶಾಲೆಗೆ ಹೋಗಿ ಶಿಕ್ಷಕನನ್ನು ತರಗತಿಯಿಂದ ಹೊರಗೆ ಎಳೆದುಕೊಂಡು ಬಂದು ಹಲ್ಲೆ ನಡೆಸಿದರು. ನಂತರ ಅವರು ಆತನ ಕುತ್ತಿಗೆಗೆ ಚಪ್ಪಲಿ ಹಾರ ಹಾಕಿ ಸಾರ್ವಜನಿಕರ ಮುಂದೆ ಬೀದಿಗಳಲ್ಲಿ ಸವಣೂರು ಪೊಲೀಸ್ ಠಾಣೆಗೆ ಮೆರವಣಿಗೆ ಮೂಲಕ ಕರೆದುಕೊಂಡು ಹೋಗಿ ಒಪ್ಪಿಸಿದರು.

ಪೋಷಕರಿಂದ ಬಂದ ದೂರುಗಳ ಆಧಾರದ ಮೇಲೆ ಶಿಕ್ಷಕನನ್ನು ವಶಕ್ಕೆ ಪಡೆದು ವಿವರವಾದ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಾವು ಆರೋಪಗಳನ್ನು ಪರಿಶೀಲಿಸುತ್ತಿದ್ದೇವೆ, ಹೇಳಿಕೆಗಳನ್ನು ದಾಖಲಿಸುತ್ತಿದ್ದೇವೆ. ಕಾನೂನಿನ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸ್ಥಳೀಯವಾಗಿ ಪ್ರಸಾರವಾದ ಗುಂಪು ಹಲ್ಲೆಯ ವೀಡಿಯೊಗಳನ್ನು ಪರಿಶೀಲಿಸುತ್ತಿದ್ದೇವೆ, ತನಿಖೆ ನಡೆಸುತ್ತೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯು ನಿವಾಸಿಗಳು ಮತ್ತು ಶಿಕ್ಷಣ ಅಧಿಕಾರಿಗಳಲ್ಲಿ ಕಳವಳವನ್ನು ಹುಟ್ಟುಹಾಕಿದ್ದು, ಜಿಲ್ಲೆಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ರಕ್ಷಣೆಗೆ ಬಲವಾದ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಲವರು ಒತ್ತಾಯಿಸಿದ್ದಾರೆ. ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ebola ಭೀತಿ: ಏರ್ ಲೈನ್ ಗಳಿಗೆ ಡಿಜಿಸಿಎ SOP ಬಿಡುಗಡೆ

ಭಾರತ ಇರಾನ್ ನ IRGC ಯನ್ನು ಉಗ್ರ ಸಂಘಟನೆಯೆಂದು ಘೋಷಿಸಲಿ: ಇಸ್ರೇಲ್ ಒತ್ತಾಯ

ಟ್ರಂಪ್ ಭಾರತವನ್ನ ನರಕದ ಕೂಪ ಅಂದಿದ್ರಲ್ಲಾ ಆ ಬಗ್ಗೆ ಏನ್ ಹೇಳ್ತಿರಾ?; ಪತ್ರಕರ್ತನ ಪ್ರಶ್ನೆಗೆ ರುಬಿಯೊ ಗಲಿಬಿಲಿ!

CM ಬದಲಾವಣೆ ಚರ್ಚೆ ಮಧ್ಯೆ ಸಿದ್ದರಾಮಯ್ಯ ಸಂಪುಟದಲ್ಲಿ ಮಹತ್ವದ ಬದಲಾವಣೆ

ಗುಲ್ಮಾರ್ಗ್: ಕೈಕೊಟ್ಟ ವಿಶ್ವದ 2ನೇ ಅತಿ ಎತ್ತರದ ಕೇಬಲ್ ಕಾರ್; ಆಕಾಶದಲ್ಲೇ ಸಿಲುಕಿದ 300 ಪ್ರವಾಸಿಗರು! Video ನೋಡಿ

SCROLL FOR NEXT