ಮೃತ ಅರುಣ್ ಕುಮಾರ್  
ರಾಜ್ಯ

ಬೆಂಗಳೂರು: 'ಮುದ್ದು ಗಿಣಿ' ರಕ್ಷಿಸಲು ಹೋದವನಿಗೆ ಕಾದಿತ್ತು ಅಪತ್ತು! ಅಷ್ಟಕ್ಕೂ ಏನಾಯ್ತು..?

ಸುಮಾರು 2.5 ಲಕ್ಷ ರೂಪಾಯಿ ಮೌಲ್ಯದ ತನ್ನ ಮುದ್ದಾದ ಗಿಣಿ ರಕ್ಷಿಸಲು ಯತ್ನಿಸಿದ 32 ವರ್ಷದ ವ್ಯಕ್ತಿಯೊಬ್ಬರಿಗೆ ಹೈಟೆನ್ಷನ್ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ

ಬೆಂಗಳೂರು: ಮುದ್ದು ಮುದ್ದಾಗಿ ಸಾಕಿದ ಗಿಣಿಯನ್ನು ರಕ್ಷಿಸಲು ಹೋದ ವ್ಯಕ್ತಿಯೊಬ್ಬರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ.

ಸುಮಾರು 2.5 ಲಕ್ಷ ರೂಪಾಯಿ ಮೌಲ್ಯದ ತನ್ನ ಮುದ್ದಾದ ಗಿಣಿ ರಕ್ಷಿಸಲು ಯತ್ನಿಸಿದ 32 ವರ್ಷದ ವ್ಯಕ್ತಿಯೊಬ್ಬರಿಗೆ ಹೈಟೆನ್ಷನ್ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಮೃತರನ್ನು ಅರುಣ್ ಕುಮಾರ್ ಎಂದು ಗುರುತಿಸಲಾಗಿದೆ. ಅವರು ವಾಹನದ ನಂಬರ್ ಪ್ಲೇಟ್ ತಯಾರಿಸುವ ವ್ಯವಹಾರ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ಬೆಂಗಳೂರಿನ ಗಿರಿನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಹೈ-ವೋಲ್ಟೇಜ್ ವಿದ್ಯುತ್ ಕಂಬದ ಮೇಲಿದ್ದ ತನ್ನ ದುಬಾರಿ ಮೊತ್ತದ ಗಿಣಿಯನ್ನು ರಕ್ಷಿಸಲು ಭರದಲ್ಲಿ ಕುಮಾರ್, ಕಾಂಪೌಂಡ್ ಗೋಡೆ ಮೇಲೆರಿದ್ದಾರೆ.

ಈ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಗೋಡೆಯಿಂದ ಕೆಳಗಡೆ ಬಿದ್ದಿದ್ದಾರೆ. ತಕ್ಷಣ ಕುಮಾರ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಈ ಕುರಿತು ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ಜೊತೆ ಒಪ್ಪಂದಕ್ಕೆ ಇರಾನ್‌ ಕಾತರ, ಶೀಘ್ರದಲ್ಲೇ ಯುದ್ಧ ಅಂತ್ಯ: ತೈಲ ಬೆಲೆ ಭಾರೀ ಕುಸಿತ; ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಆನೇಕಲ್‌ನಲ್ಲಿ ಬೆಂಗಳೂರಿನ 2ನೇ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ರೈತರು, KRS ತೀವ್ರ ವಿರೋಧ!

ನಿಜಕ್ಕೂ ನಮ್ಮದು F…Good Team: ಲೈವ್​ನಲ್ಲೇ 'ಅಶ್ಲೀಲ ಪದ' ಬಳಸಿದ ರಿಷಭ್ ಪಂತ್, ವ್ಯಾಪಕ ಟೀಕೆ, Video!

ಇಟಲಿಯಲ್ಲಿ ಪ್ರಧಾನಿ ಮೋದಿ: “ವೆಲ್‌ಕಮ್ ಟು ರೋಮ್ ಮೈ ಫ್ರೆಂಡ್” ಎಂದು ಆತ್ಮೀಯ ಸ್ವಾಗತ ಕೋರಿದ ಜಾರ್ಜಿಯಾ ಮೆಲೋನಿ..!

Operation Epic Fury: ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕಾಗೆ ಮಹಾಘಾತಕ: F-35 ಸೇರಿ 42 ಯುದ್ಧ ವಿಮಾನ, ಡ್ರೋನ್‌ಗಳಿಗೆ ಹಾನಿ..!

SCROLL FOR NEXT