ಮೃತ ರಾಜೇಶ್ - ರೇವಣ್ಣ ಪುತ್ರನ ಕಾರು 
ರಾಜ್ಯ

ಮಾಗಡಿ: ಮಾಜಿ ಸಚಿವ ಎಚ್ಎಂ ರೇವಣ್ಣ ಪುತ್ರನ ಕಾರು, ಬೈಕಿಗೆ ಡಿಕ್ಕಿ; ಯುವಕ ಸಾವು

ಘಟನೆ ವೇಳೆ ರೇವಣ್ಣ ಪುತ್ರ ಶಶಾಂಕ್ ಕಾರು ಚಲಾಯಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಆದರೆ ಈ ಆರೋಪವನ್ನು ನಿರಾಕರಿಸಿದ ರೇವಣ್ಣ, ನನ್ನ ಪುತ್ರನ ಕಾರು ಅಪಘಾತವಾಗಿದ್ದು ನಿಜ. ಆದರೆ ಚಾಲಕ ಕಾರು ಚಲಾಯಿಸುತ್ತಿದ್ದರು ಎಂದು ಹೇಳಿದ್ದಾರೆ.

ರಾಮನಗರ: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಹೆಚ್ಎಂ ರೇವಣ್ಣ ಅವರ ಪುತ್ರ ಆರ್. ಶಶಾಂಕ್‌ ಪ್ರಯಾಣಿಸತ್ತಿದ್ದ ಕಾರು ಗುರುವಾರ ತಡ ರಾತ್ರಿ ಬೈಕಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಯುವಕ ಸಾವನ್ನಪ್ಪಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕು ಗುಡೇಮಾರನಹಳ್ಳಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಘಟನೆ ವೇಳೆ ರೇವಣ್ಣ ಪುತ್ರ ಶಶಾಂಕ್ ಕಾರು ಚಲಾಯಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಆದರೆ ಈ ಆರೋಪವನ್ನು ನಿರಾಕರಿಸಿದ ರೇವಣ್ಣ, ನನ್ನ ಪುತ್ರನ ಕಾರು ಅಪಘಾತವಾಗಿದ್ದು ನಿಜ. ಆದರೆ ಚಾಲಕ ಕಾರು ಚಲಾಯಿಸುತ್ತಿದ್ದರು ಎಂದು ಹೇಳಿದ್ದಾರೆ.

ಮಾಗಡಿ ತಾಲೂಕಿನ ಬೆಳಗುಂಬ ಗ್ರಾಮದ ನಿವಾಸಿ ರಾಜೇಶ್(27) ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, KA 51 MQ 0555 ನಂಬರ್‌ನ ಕಾರು ಡಿಕ್ಕಿಯಾದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕಾರು ಆರ್. ಶಶಾಂಕ್ ಅವರ ಹೆಸರಿನಲ್ಲಿರುವುದು ದೃಢಪಟ್ಟಿದೆ.

ಈ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರನ್ನು ಯಾರು ಚಾಲನೆ ಮಾಡುತ್ತಿದ್ದರು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಡಿಗೋಗೆ ಮತ್ತೊಂದು ಶಾಕ್: ಫ್ಲೈಟ್ ಇನ್ಸ್‌ಪೆಕ್ಟರ್‌ಗಳ ಅಮಾನತು ಬೆನ್ನಲ್ಲೇ 58.75 ಕೋಟಿ ರೂ. ತೆರಿಗೆ ನೋಟಿಸ್!

ಇಂಡಿಗೋ ಬಿಕ್ಕಟ್ಟು: ನಾಲ್ವರು ವಿಮಾನ ಕಾರ್ಯಾಚರಣೆ ಇನ್ಸ್‌ಪೆಕ್ಟರ್‌ಗಳನ್ನು ಅಮಾನತುಗೊಳಿಸಿದ DGCA!

ಬೆಳಗಾವಿ ಅಧಿವೇಶನ ಮುಗಿದ ತಕ್ಷಣ ಡಿಕೆ ಶಿವಕುಮಾರ್ CM: ಶಾಸಕ ಇಕ್ಬಾಲ್ ಹುಸೇನ್

ಬೆಂಗಳೂರು: ನಾಲ್ಕು ಅಂತಸ್ತಿನ ಕಟ್ಟಡ ಬೆಂಕಿಗೆ ಆಹುತಿ; ನಿವಾಸಿಗಳನ್ನು ರಕ್ಷಿಸಿದ ಮೂವರು ಪೊಲೀಸರು!

ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಚರ್ಚೆ ಮತ್ತು ಸಿಎಂ ಕುರ್ಚಿ ಕಿತ್ತಾಟದ ನೆರಳು (ನೇರನೋಟ)

SCROLL FOR NEXT