ಸಚಿವ ಕೃಷ್ಣ ಬೈರೇಗೌಡ 
ರಾಜ್ಯ

ತಾಂತ್ರಿಕ ಸಮಸ್ಯೆಗಳಿಂದಾಗಿ 44,000ಕ್ಕೂ ಹೆಚ್ಚು ರೈತರಿಗೆ ಪ್ರವಾಹ ಪರಿಹಾರ ಸಿಕ್ಕಿಲ್ಲ: ಸಚಿವ ಕೃಷ್ಣ ಬೈರೇಗೌಡ

ಕಲಬುರಗಿ ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಅನೇಕ ಜನರಿಗೆ ಯಾವುದೇ ಪರಿಹಾರ ಸಿಕ್ಕಿಲ್ಲ ಎಂದು ಶಾಸಕ ತಿಪ್ಪಣ್ಣ ಕಾಮಕನೂರ್ ಅವರು ವಿಧಾನ ಪರಿಷತ್ತಿನಲ್ಲಿ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಬೆಳಗಾವಿ: 44,208 ರೈತರು ಮಳೆ ಮತ್ತು ಪ್ರವಾಹ ಸಂಬಂಧಿತ ಬೆಳೆ ನಷ್ಟಕ್ಕೆ ಇನ್ನೂ ಪರಿಹಾರ ಪಡೆದಿಲ್ಲ. ಅಧಿಕೃತ ದಾಖಲೆಗಳಲ್ಲಿನ ತಾಂತ್ರಿಕ ಹೊಂದಾಣಿಕೆಯ ಕೊರತೆಯೇ ಈ ವಿಳಂಬಕ್ಕೆ ಕಾರಣ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಶುಕ್ರವಾರ ಹೇಳಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಅನೇಕ ಜನರಿಗೆ ಯಾವುದೇ ಪರಿಹಾರ ಸಿಕ್ಕಿಲ್ಲ ಎಂದು ಶಾಸಕ ತಿಪ್ಪಣ್ಣ ಕಾಮಕನೂರ್ ಅವರು ವಿಧಾನ ಪರಿಷತ್ತಿನಲ್ಲಿ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಹಲವಾರು ರೈತರು ನೆರವು ಪಡೆದಿಲ್ಲ ಎಂಬ ಕಾಮಕನೂರ್ ಅವರ ಮಾತನ್ನು ಒಪ್ಪಿಕೊಂಡ ಸಚಿವರು, "ಸುಮಾರು ಶೇಕಡಾ ಮೂರರಷ್ಟು ರೈತರು ಯಾವುದೇ ಪರಿಹಾರವನ್ನು ಪಡೆದಿಲ್ಲ. ಹೆಸರುಗಳಲ್ಲಿ ಹೊಂದಾಣಿಕೆ ಇಲ್ಲದಿರುವುದು ಇದಕ್ಕೆ ಕಾರಣ. ಆಧಾರ್‌ನಲ್ಲಿ ಅವರ ಹೆಸರು ಕೃಷಿ ಇಲಾಖೆಯಲ್ಲಿರುವ ಹೆಸರಿನೊಂದಿಗೆ ಹೊಂದಾಣಿಕೆಯಾಗುತ್ತಿಲ್ಲ" ಎಂದರು.

ಒಟ್ಟು 44,208 ರೈತರು ಪರಿಹಾರ ಪಡೆದಿಲ್ಲ.ತಾಂತ್ರಿಕ ಸಮಸ್ಯೆ ಸರಿಪಡಿಸಿದ ನಂತರ, ಅವರ ಬ್ಯಾಂಕ್ ಖಾತೆಗಳಿಗೆ ಹಣವನ್ನು ಜಮಾ ಮಾಡಲಾಗುತ್ತದೆ. ರೈತರು ತಮ್ಮ ಹೆಸರುಗಳನ್ನು ತಿದ್ದುಪಡಿ ಮಾಡಬೇಕು ಮತ್ತು ಬ್ಯಾಂಕ್ ಖಾತೆಗಳೊಂದಿಗೆ ಆಧಾರ್ ಅನ್ನು ಲಿಂಕ್ ಮಾಡಬೇಕು ಎಂದು ಅವರು ಮನವಿ ಮಾಡಿದರು.

ಕಲಬುರಗಿ ಜಿಲ್ಲೆಯಲ್ಲಿ 3.23 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಇದಕ್ಕಾಗಿ ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ(SDRF) ಮಾನದಂಡಗಳ ಪ್ರಕಾರ 250.97 ಕೋಟಿ ರೂ. ಪರಿಹಾರ ನೀಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು,

ರಾಜ್ಯ ಸರ್ಕಾರವು 247.75 ಕೋಟಿ ರೂ.ಗಳ ಹೆಚ್ಚುವರಿ ಪರಿಹಾರವನ್ನು ಸಹ ನೀಡಿದೆ ಎಂದು ಅವರು ಹೇಳಿದರು.

ರಾಜ್ಯಾದ್ಯಂತ ಒಟ್ಟು 14.21 ಲಕ್ಷ ರೈತರಿಗೆ ಪರಿಹಾರ ನೀಡಲಾಗುತ್ತಿದೆ. SDRF ಮಾನದಂಡಗಳ ಅಡಿಯಲ್ಲಿ 1,216 ಕೋಟಿ ರೂ.ಗಳನ್ನು ನೀಡಲಾಗಿದೆ. ಇದಕ್ಕೆ ಪೂರಕವಾಗಿ ಸರ್ಕಾರವು 1,033 ಕೋಟಿ ರೂ.ಗಳ ಹೆಚ್ಚುವರಿ ಅನುದಾನವನ್ನು ನೀಡಿದೆ. ಎರಡೂ ಸೇರಿ, ರೈತರಿಗೆ 2,249 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ತಮಿಳುನಾಡು ಸರ್ಕಾರದಿಂದ ಮತ್ತೊಂದು ಮಹತ್ವದ ಘೋಷಣೆ: ಸಣ್ಣ ರೈತರ ₹50,000 ವರೆಗಿನೆ ಬೆಳೆ ಸಾಲ ಮನ್ನಾ!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

SCROLL FOR NEXT