ಗೃಹ ಸಚಿವ ಜಿ ಪರಮೇಶ್ವರ 
ರಾಜ್ಯ

ಮಾಲೀಕರೇ ವಿದೇಶಿಗರಿಗೆ ಮನೆ ಬಾಡಿಗೆ ಕೊಡುವ ಮುನ್ನ ಎಚ್ಚರ; ಡ್ರಗ್ಸ್ ಮಾರಾಟಗಾರರಿರುವ ಕಟ್ಟಡ ಕೆಡವಲು ಸರ್ಕಾರ ಚಿಂತನೆ!

ಆಫ್ರಿಕನ್ ದೇಶಗಳಿಂದ ಅನೇಕ ವಿದೇಶಿ ವಿದ್ಯಾರ್ಥಿಗಳು ಕರ್ನಾಟಕಕ್ಕೆ ಬಂದಿದ್ದಾರೆ. ಅವರು ಮಾದಕ ದ್ರವ್ಯ ವ್ಯವಹಾರದಲ್ಲಿದ್ದಾರೆ. ನಾವು ಅವರನ್ನು ಹಿಡಿದು ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸುತ್ತೇವೆ.

ಬೆಳಗಾವಿ: ರಾಜ್ಯಾದ್ಯಂತ ಡ್ರಗ್ಸ್ ಮಾರಾಟವನ್ನು ತಡೆಯುವ ವಿಶಾಲ ಕಾರ್ಯತಂತ್ರದ ಭಾಗವಾಗಿ ಮಾದಕ ದ್ರವ್ಯ ವ್ಯಾಪಾರದಲ್ಲಿ ತೊಡಗಿರುವ ವಿದೇಶಿ ಪ್ರಜೆಗಳು ವಾಸಿಸುವ ಮನೆಗಳನ್ನು ಕೆಡವುವುದು ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳುತ್ತಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಶುಕ್ರವಾರ ಹೇಳಿದ್ದಾರೆ.

ಬೆಂಗಳೂರು, ದಾವಣಗೆರೆ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಹಾವಳಿಯ ಕುರಿತು ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಎಂಎಲ್‌ಸಿ ಕೆ ಅಬ್ದುಲ್ ಜಬ್ಬಾರ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಕಾಂಗ್ರೆಸ್ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ತೆಗೆದುಕೊಂಡ ವ್ಯಾಪಕ ಕ್ರಮಗಳನ್ನು ವಿವರಿಸಿದರು.

ಕೆಲವು ವಿದೇಶಿ ಪ್ರಜೆಗಳ ಭಾಗಿಯಾಗುವಿಕೆಯನ್ನು ಸೂಚಿಸಿದ ಸಚಿವರು, "ಆಫ್ರಿಕನ್ ದೇಶಗಳಿಂದ ಅನೇಕ ವಿದೇಶಿ ವಿದ್ಯಾರ್ಥಿಗಳು ಕರ್ನಾಟಕಕ್ಕೆ ಬಂದಿದ್ದಾರೆ. ಅವರು ಮಾದಕ ದ್ರವ್ಯ ವ್ಯವಹಾರದಲ್ಲಿದ್ದಾರೆ. ನಾವು ಅವರನ್ನು ಹಿಡಿದು ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸುತ್ತೇವೆ. ಆದರೆ ಪ್ರಕರಣ ದಾಖಲಾದ ನಂತರ ನಾವು ಅವರನ್ನು ಗಡೀಪಾರು ಮಾಡಲು ಸಾಧ್ಯವಿಲ್ಲ. ಹೀಗಾಗಿ ಅವರು ಪ್ರಕರಣ ದಾಖಲಿಸಬೇಕೆಂದು ಬಯಸುತ್ತಾರೆ" ಎಂದರು.

ಅಗತ್ಯ ಕಾರ್ಯವಿಧಾನಗಳನ್ನು ಪೂರ್ಣಗೊಳಿಸಿದ ನಂತರ ಸುಮಾರು 300 ಜನರನ್ನು ಗಡೀಪಾರು ಮಾಡಲಾಗಿದೆ ಎಂದು ಅವರು ಹೇಳಿದರು.

ಅಧಿಕಾರಿಗಳು ಗಡೀಪಾರು ಮಾಡಲಾದ ವ್ಯಕ್ತಿಗಳನ್ನು ಪತ್ತೆಹಚ್ಚುತ್ತಿದ್ದಾರೆ ಮತ್ತು ಅಪರಾಧಿಗಳಿಗೆ ಮನೆಗಳನ್ನು ಬಾಡಿಗೆಗೆ ನೀಡುವ ಸ್ಥಳೀಯ ಆಸ್ತಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದರು.

"ನಾವು ಅವರು ವಾಸಿಸುವ ಬಾಡಿಗೆ ಕಟ್ಟಡವನ್ನು ಸಹ ಕೆಡವುವ ಹಂತಕ್ಕೆ ಹೋಗಿದ್ದೇವೆ" ಎಂದು ಜಿ ಪರಮೇಶ್ವರ ಅವರು ಹೇಳಿದರು.

"ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಾವು ಬಹಳ ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಕರ್ನಾಟಕವನ್ನು ಮಾದಕ ದ್ರವ್ಯ ಮುಕ್ತ ರಾಜ್ಯವನ್ನಾಗಿ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳು ಸದನದಲ್ಲಿ ಹೇಳಿದ್ದಾರೆ" ಎಂದು ಗೃಹ ಸಚಿವರು ತಿಳಿಸಿದರು.

ಯುವಕರಲ್ಲಿ ಮಾದಕ ದ್ರವ್ಯ ಬಳಕೆಯನ್ನು ತಡೆಯಲು, ಇಲಾಖೆ ಅಧಿಕಾರಿಗಳಿಗೆ ನಿಯಮಿತವಾಗಿ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡುವಂತೆ ಸೂಚಿಸಿದೆ.

"ನಿನ್ನೆ, ಕೇವಲ ಒಂದು ದಿನ, ನಮ್ಮ ಅಧಿಕಾರಿಗಳು ಬೆಂಗಳೂರಿನ 1,000 ಶಾಲೆಗಳು ಮತ್ತು ಕಾಲೇಜುಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ನಾವು ಅದನ್ನು ನಿಯಮಿತವಾಗಿ ಮಾಡಬೇಕಾಗಿದೆ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತದಲ್ಲಿ 11,718 ಕೋಟಿ ರೂ.ವೆಚ್ಚದಲ್ಲಿ 'ಡಿಜಿಟಲ್ ಜನಗಣತಿ': ಕೇಂದ್ರ ಸಂಪುಟ ಅನುಮೋದನೆ!

'ಬೆದರಿಸುವ ಪ್ರಯತ್ನ ಬೇಡ': TN ಜಡ್ಜ್ ವಿರುದ್ಧದ INDIA ಕೂಟದ ಪದಚ್ಯುತಿ ಪ್ರಸ್ತಾವನೆ ಟೀಕಿಸಿದ ನಿವೃತ ನ್ಯಾಯಧೀಶರು!

ಕೇರಳ ನಟಿ ಮೇಲೆ ಅತ್ಯಾಚಾರ, ಹಲ್ಲೆ ಪ್ರಕರಣ: ಪಲ್ಸರ್ ಸುನಿ ಸೇರಿ ಎಲ್ಲಾ ಆರೋಪಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!

ಗೃಹ ಲಕ್ಷ್ಮಿ ಹಣ: ಸಚಿವೆ ಲಕ್ಮಿ ಹೆಬ್ಬಾಳ್ಕರ್ ಸದನಕ್ಕೆ ತಪ್ಪು ಮಾಹಿತಿ ನೀಡಿದ್ರಾ? 'ಡಿನ್ನರ್ ಪಾಲಿಟಿಕ್ಸ್' ಬಗ್ಗೆ ಬಿಜೆಪಿ ಕಿಡಿ!

'ಏನೋ ತಪ್ಪಾಗಿದೆ...' ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ಮದ್ರಾಸ್ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಪ್ರಶ್ನೆ!

SCROLL FOR NEXT