ಸಂತ್ರಸ್ತ ಮಹಿಳೆ 
ರಾಜ್ಯ

ಮಡಿಕೇರಿ: Facebook ಗೆಳತಿ ಮಾತು ನಂಬಿ ರೂಂಮಿಗೆ ಬಂದ ಯುವಕ; ಅರೆಬೆತ್ತಲಾಗಿ ನಡುರಸ್ತೆಯಲ್ಲಿ ಓಡಿದ್ದು ನೋಡಿ ದಂಗಾದ ಜನ!

ಫೇಸ್‌ಬುಕ್‌ನಲ್ಲಿ ಪರಿಚಯವಾದ ಮಹಿಳೆ ಮಾತು ನಂಬಿ ಮಂಡ್ಯದಿಂದ ಮಡಿಕೇರಿಗೆ ಹೋಗಿದ್ದ ವ್ಯಕ್ತಿಯೊಬ್ಬ ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ ಹಣ ಹಾಗೂ ವಸ್ತುಗಳನ್ನು ಕಳೆದುಕೊಂಡಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ಮಡಿಕೇರಿ: ಫೇಸ್‌ಬುಕ್‌ನಲ್ಲಿ ಪರಿಚಯವಾದ ಮಹಿಳೆ ಮಾತು ನಂಬಿ ಮಂಡ್ಯದಿಂದ ಮಡಿಕೇರಿಗೆ ಹೋಗಿದ್ದ ವ್ಯಕ್ತಿಯೊಬ್ಬ ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ ಹಣ ಹಾಗೂ ವಸ್ತುಗಳನ್ನು ಕಳೆದುಕೊಂಡಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮಹೇಶ್ ಎಂಬಾತ ಒಬ್ಬನೇ ಬಂದಿರುವುದನ್ನು ಗಮನಿಸಿದ ಮಹಿಳೆ ಮಡಿಕೇರಿಯ ಮಂಗಳಾದೇವಿ ನಗರದ ಮನೆಯೊಂದಕ್ಕೆ ಕರೆಸಿಕೊಂಡಿದ್ದಾಳೆ.

ಕೆಲಹೊತ್ತು ಮಹೇಶನ ಜೊತೆ ಪಾನೀಯ ಸೇವಿಸಿದ ಮಹಿಳೆ ಸಂಬಂಧಿಕರೊಬ್ಬರು ಮೃತಪಟ್ಟಿರುವುದಾಗಿ ತುರ್ತು ಕರೆಬಂದಿದ್ದಾಗಿ ಹೇಳಿ ಅಲ್ಲಿಂದ ಹೊರಬಂದಿದ್ದಾಳೆ. ಅದೇ ಸಮಯದಲ್ಲಿ ಮನೆಗೆ ನುಗ್ಗಿದ ನಾಲ್ವರು ಯುವಕರು ಮಹೇಶ ಬಳಿ ಇದ್ದ ಹಣ ಹಾಗೂ ವಸ್ತುಗಳನ್ನು ಕಿತ್ತುಕೊಂಡು ಹಲ್ಲೆ ನಡೆಸಿದ್ದಾರೆ. ಅಲ್ಲದೆ ಮನೆಯಲ್ಲಿ ಕೂಡಿಹಾಕಿ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಮಧ್ಯೆ ಶೌಚಕ್ಕೆ ಹೋಗುವುದಾಗಿ ಹೇಳಿ ಅಲ್ಲಿಂದ ತಪ್ಪಿಸಿಕೊಂಡು ಅರಬೆತ್ತಲೆಯಲ್ಲೇ ಓಡಿ ಹೋಗಿ ಮಡಿಕೇರಿ ನಗರ ಪೊಲೀಸರಿಗೆ ದೂರು ನೀಡಿದ್ದಾನೆ. ಈ ಕೃತ್ಯವನ್ನು ಹನಿಟ್ರ್ಯಾಪ್ ಪ್ರಕರಣವೆಂದು ಪರಿಗಣಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಂಗನ ಜ್ವರಕ್ಕೆ ಈ ವರ್ಷ ಮೊದಲ ಸಾವು: ಶಿವಮೊಗ್ಗದಲ್ಲಿ 29 ವರ್ಷದ ಯುವಕ ಬಲಿ, ಆರೋಗ್ಯ ಇಲಾಖೆಗೆ ಮುನ್ನೆಚ್ಚರಿಕೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ 'ಸ್ಕ್ಯಾಮ್ ಲಾರ್ಡ್' ಪೋಸ್ಟ್: ಬಿಜೆಪಿ ವಿರುದ್ಧ ಕಾಂಗ್ರೆಸ್ ದೂರು ದಾಖಲು

ಜಿದ್ದಿಗೆ ಬಿದ್ದ ಸಿದ್ದು- ಡಿಕೆಶಿ: ಕಾಂಗ್ರೆಸ್ ನಾಯಕರಲ್ಲಿ ಮೂಡದ ಒಮ್ಮತ; ಅಪೆಕ್ಸ್ ಬ್ಯಾಂಕ್ ಚುನಾವಣೆ ಮುಂದೂಡಿಕೆ !

ಕುಟುಂಬವೇ ಮೊದಲು: ರಾಜಕೀಯ ವೈಷಮ್ಯ ಬದಿಗಿಟ್ಟು ಅಂತ್ಯ ಸಂಸ್ಕಾರದಲ್ಲಿ 'ಅತ್ತಿಗೆ'ಗೆ ಅಧಾರ ಸ್ತಂಭವಾಗಿ ನಿಂತ ಸುಪ್ರಿಯಾ ಸುಳೆ!

ಅಜಿತ್ ಪವಾರ್ ಪತ್ನಿ ಸುನೇತ್ರಾ ಪವರ್ ಗೆ ಡಿಸಿಎಂ ಹುದ್ದೆ?: NCP ನಾಯಕರು ಏನಂತಾರೆ, ಪಕ್ಷದ ಭವಿಷ್ಯ ಬಗ್ಗೆ ನಡೆದ ಚರ್ಚೆಯೇನು?

SCROLL FOR NEXT