ಶಾಮನೂರು ಶಿವಶಂಕರಪ್ಪ 
ರಾಜ್ಯ

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ

ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಸಂಜೆ ವಿಧಿವಶರಾಗಿದ್ದಾರೆ.

ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಸಂಜೆ ವಿಧಿವಶರಾಗಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ 94 ವರ್ಷದ ಶಾಮನೂರು ಶಿವಶಂಕರಪ್ಪ (Shamanuru Shivashankarappa) ನಿಧನರಾಗಿದ್ದಾರೆ.

ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದ ಶಾಮನೂರು ಶಿವಶಂಕರಪ್ಪ ಅವರು ಆರು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ರಾಜ್ಯದ ವಿವಿಧ ಸರ್ಕಾರಗಳಲ್ಲಿ ಪ್ರಮುಖ ಖಾತೆಗಳನ್ನು ನಿಭಾಯಿಸುವ ಮೂಲಕ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ತೋಟಗಾರಿಕೆ ಸಚಿವರಾಗಿದ್ದು ಅವರ ಸೊಸೆ ಪ್ರಭಾ ಮಲ್ಲಿಕಾರ್ಜುನ ಸಂಸದರಾಗಿದ್ದಾರೆ. 1931ರ ಜೂನ್ 16ರಂದು ದಾವಣಗೆರೆಯಲ್ಲಿ ಜನಿಸಿದ್ದ ಶಾಮನೂರು ಶಿವಶಂಕರಪ್ಪ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿಧಾನಸಭೆಯ ಸದಸ್ಯರಾಗಿದ್ದು, ಅವರು ಭಾರತದಲ್ಲಿ ರಾಜ್ಯ ವಿಧಾನಸಭೆಯ ಅತ್ಯಂತ ಹಿರಿಯ ಸದಸ್ಯರಾಗಿದ್ದರು.

ಶಾಮನೂರು ಶಿವಶಂಕರಪ್ಪ ಅವರು ವಿಧಾನಸಭೆಗೆ ಆರು ಸಲ ಶಾಸಕರಾಗಿ, ಒಮ್ಮೆ ಸಂಸದರಾಗಿ ಆಯ್ಕೆಯಾಗಿದ್ದಾರೆ. 1997ರಲ್ಲಿ ದಾವಣಗೆರೆ ಲೋಕಸಭೆ ಮಧ್ಯಂತರ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಐದು ದೇಶಕದ ರಾಜಕೀಯ ಜೀವನದಲ್ಲಿ ಒಂದು ಬಾರಿ ಸೋಲನ್ನಪ್ಪಿದ್ದರು. 1994, 2004, 2008, 2013, 2018, 2023 ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Epstein ಕಡತಗಳಲ್ಲಿ ಪ್ರಧಾನಿ ಮೋದಿ ಉಲ್ಲೇಖ: ಭಾರತದ ಪ್ರತಿಕ್ರಿಯೆ ಏನು?

5th T20I: ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 46 ರನ್ ಗೆಲುವು; 4-1 ಅಂತರದಲ್ಲಿ ಸರಣಿ ವಶ

ಮಹಾರಾಷ್ಟ್ರ ನೂತನ DCM ಸುನೇತ್ರಾ ಪವಾರ್‌ಗೆ ಕಂದಾಯ ಸೇರಿ ಮೂರು ಖಾತೆ ಹಂಚಿಕೆ; ಕೈತಪ್ಪಿದ ಹಣಕಾಸು

5th T20: 42 ಎಸೆತಗಳಲ್ಲಿ ಶತಕ ಬಾರಿಸಿದ ಇಶಾನ್ ಕಿಶಾನ್! 272 ರನ್ ಟಾರ್ಗೆಟ್ ನೀಡಿದ ಭಾರತ! Video

IND vs NZ 5th T20I: UAE ಆಟಗಾರನ 'ವಿಶ್ವದಾಖಲೆ' ಮುರಿದ ಸೂರ್ಯ ಕುಮಾರ್ ಯಾದವ್!

SCROLL FOR NEXT