ಬಿಸಿಯೂಟದಲ್ಲಿ ಹುಳು ಪತ್ತೆ 
ರಾಜ್ಯ

ಕೊಪ್ಪಳ: ಶಾಲಾ ಬಿಸಿಯೂಟದಲ್ಲಿ ಹುಳು ಪತ್ತೆ; ಹೆಡ್ ಮಾಸ್ಟರ್ ಗೆ ಶೋಕಾಸ್ ನೋಟಿಸ್! Video

ಸರ್ಕಾರಿ ಶಾಲೆಯ ಮಕ್ಕಳಿಗೆ ಬಡಿಸಿದ ಊಟದಲ್ಲಿ ಹುಳುಗಳು ಕಂಡುಬಂದ ನಂತರ, ವಿದ್ಯಾರ್ಥಿಗಳು ಗಾಬರಿಗೊಂಡು ತಕ್ಷಣವೇ ಸಿಬ್ಬಂದಿ ಮತ್ತು ಪೋಷಕರಿಗೆ ಘಟನೆಯ ಬಗ್ಗೆ ತಿಳಿಸಿದ್ದಾರೆ.

ಕೊಪ್ಪಳ: ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುವ ಮಧ್ಯಾಹ್ನದ ಬಿಸಿಯೂಟದಲ್ಲಿ ಹುಳುಗಳು ಕಂಡುಬಂದ ಹಿನ್ನೆಲೆಯಲ್ಲಿ ಶಾಲಾ ಮುಖ್ಯೋಪಧ್ಯಾಯರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.

ಕೊಪ್ಪಳ ತಾಲ್ಲೂಕಿನ ಹಳೆ ನಿಂಗಾಪುರ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಹುಳುಗಳು ಪತ್ತೆಯಾಗಿದ್ದು, ಈ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಶಿಕ್ಷಣ ಇಲಾಖೆ ಸರ್ಕಾರಿ ಅನುದಾನಿತ ಶಾಲೆಯ ಮುಖ್ಯೋಪಾಧ್ಯಾಯರಿಗೆ ಶೋಕಾಸ್ ನೋಟಿಸ್ ನೀಡಿದೆ.

ಡಿಸೆಂಬರ್ 9 ರಂದು ಕೊಪ್ಪಳ ತಾಲೂಕಿನ ಬಿಸರಳ್ಳಿ ಗ್ರಾಮದ ಶಾಲೆಯಲ್ಲಿ ಈ ಘಟನೆ ವರದಿಯಾಗಿತ್ತು. ಆದಾಗ್ಯೂ, ಅಧಿಕಾರಿಗಳ ಸಕಾಲಿಕ ಹಸ್ತಕ್ಷೇಪದಿಂದಾಗಿ ಯಾವುದೇ ವಿದ್ಯಾರ್ಥಿಯು ಯಾವುದೇ ಸೋಂಕು ಅಥವಾ ಆಸ್ಪತ್ರೆಗೆ ದಾಖಲಾಗುವ ಬಗ್ಗೆ ದೂರು ನೀಡಿಲ್ಲ.

ವಿಷಯ ಬೆಳಕಿಗೆ ಬಂದ ತಕ್ಷಣ, ಮುಖ್ಯೋಪಾಧ್ಯಾಯರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಮತ್ತು ಘಟನೆಗೆ ಸಂಬಂಧಿಸಿದಂತೆ ಅವರಿಂದ ವರದಿಯನ್ನು ಕೋರಲಾಗಿದೆ ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಗಿದ್ದೇನು?

ಹಳೆ ನಿಂಗಾಪುರ ಸರ್ಕಾರಿ ಶಾಲೆಯ ಮಕ್ಕಳಿಗೆ ಬಡಿಸಿದ ಊಟದಲ್ಲಿ ಹುಳುಗಳು ಕಂಡುಬಂದ ನಂತರ, ವಿದ್ಯಾರ್ಥಿಗಳು ಗಾಬರಿಗೊಂಡು ತಕ್ಷಣವೇ ಸಿಬ್ಬಂದಿ ಮತ್ತು ಪೋಷಕರಿಗೆ ಘಟನೆಯ ಬಗ್ಗೆ ತಿಳಿಸಿದ್ದಾರೆ. ವಿದ್ಯಾರ್ಥಿಗಳು ಹುಳುಗಳನ್ನು ಕಂಡ ನಂತರ ಅನ್ನವನ್ನು ಎಸೆದು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಊಟದ ಸಿಬ್ಬಂದಿಯ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ಅವರು ಆರೋಪಿಸಿದರು.

ಪೋಷಕರ ಆಕ್ರೋಶರ ಆಕ್ರೋಶ

ಅಕ್ಷರ ದಾಸೋಹದ ಮೂಲಕ ಅಕ್ಕಿಯನ್ನು ವಿತರಿಸಲಾಗುತ್ತದೆ ಮತ್ತು ಅವುಗಳನ್ನು ದೀರ್ಘಕಾಲದವರೆಗೆ ಸಂಗ್ರಹಿಸಲಾಗುತ್ತದೆ ಎಂದು ಶಾಲಾ ಅಧಿಕಾರಿಗಳು ಹೇಳಿದ್ದಾರೆ. 'ಶಾಲೆಯ ಬಳಿ ಜಮಾಯಿಸಿದ ಪೋಷಕರು, ಅಕ್ಕಿ ಗುಣಮಟ್ಟವನ್ನು ಪರಿಶೀಲಿಸುತ್ತಿಲ್ಲ. ಅಡುಗೆಗೆ ಬಳಸಿರುವ ಅಕ್ಕಿಯನ್ನು ದೀರ್ಘಕಾಲದವರೆಗೆ ಸಂಗ್ರಹಿಸಿರಬಹುದು. ಅನ್ನ ಮಾಡುವಾಗ ಸರಿಯಾಗಿ ನೋಡದೆ ಬೇಯಿಸಿದ ಕಾರಣ, ಅನ್ನದಲ್ಲಿ ಹುಳುಗಳು ಪತ್ತೆಯಾಗಿವೆ' ಎಂದು ಸ್ಪಷ್ಟಪಡಿಸಿದ್ದಾರೆ.

ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹನುಮಂತಪ್ಪ ಹಟ್ಟಿ ಮಾತನಾಡಿ, ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ನಿರ್ವಹಿಸುವ ಅಕ್ಷರ ದಾಸೋಹ ಅಧಿಕಾರಿಗಳಿಂದ ಅಕ್ಕಿ ಬರುತ್ತದೆ. ಈ ವಿಷಯ ನಮ್ಮ ಗಮನಕ್ಕೆ ಬಂದಿದೆ. ನಾನು ಅಡುಗೆಯವರಿಗೆ ಕರೆ ಮಾಡಿ ಅಕ್ಕಿಯನ್ನು ಚೆನ್ನಾಗಿ ತೊಳೆದು ಬೇಯಿಸಬೇಕೆಂದು ಸೂಚಿಸಿದ್ದೇನೆ. ಹುಳುಗಳಿದ್ದರೆ ಅವರಿಗೆ ತಿಳಿಸಿ ಬದಲಾಯಿಸಬೇಕು. ಆದಾಗ್ಯೂ, ಅಕ್ಷರ ದಾಸೋಹ ಅಧಿಕಾರಿಗಳು ದಾಸ್ತಾನು ಮಾಡಿರುವ ಅಕ್ಕಿಯನ್ನು ವಿತರಿಸುವುದರಿಂದ, ಈ ಸಮಸ್ಯೆ ಉಂಟಾಗುತ್ತಿದೆ. ಈ ಇಡೀ ಪರಿಸ್ಥಿತಿಯ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಜಿಲ್ಲಾಡಳಿತವು ಇದರ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದ ಅವರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗಳ ಸ್ಪಷ್ಟನೆ

'ನಾವು ಈ ಸಮಸ್ಯೆಯನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದೇವೆ ಮತ್ತು ಎರಡು ದಿನಗಳಲ್ಲಿ ಮುಖ್ಯೋಪಾಧ್ಯಾಯರಿಂದ ವರದಿ ಕೇಳಿದ್ದೇವೆ. ವರದಿ ಬಂದ ನಂತರ, ಮುಂದಿನ ಕ್ರಮವನ್ನು ಅದಕ್ಕೆ ಅನುಗುಣವಾಗಿ ನಿರ್ಧರಿಸಲಾಗುವುದು. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು, ಜಿಲ್ಲೆಯಾದ್ಯಂತ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಸರಬರಾಜು ಮಾಡಲಾದ ಆಹಾರ ಧಾನ್ಯಗಳ ಮಾದರಿಗಳನ್ನು ಗುಣಮಟ್ಟದ ಪರಿಶೀಲನೆಗಾಗಿ ಸಂಗ್ರಹಿಸಲು ಆಹಾರ ಆರೋಗ್ಯ ಅಧಿಕಾರಿಗೆ ಸೂಚಿಸಲಾಗಿದೆ.

ನಾವು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರೊಂದಿಗೆ ಸಭೆಗಳನ್ನು ನಡೆಸುತ್ತಿದ್ದೇವೆ, ಆಹಾರ ಧಾನ್ಯಗಳ ನಿಯಮಿತ ತಪಾಸಣೆ ನಡೆಸುವಂತೆ ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ಉತ್ತಮ ಗುಣಮಟ್ಟದ ಆಹಾರ ಧಾನ್ಯಗಳ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಜಾಗೃತಿ ಮೂಡಿಸುವಂತೆ ಸೂಚಿಸುತ್ತಿದ್ದೇವೆ' ಎಂದು ಅಧಿಕಾರಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಹಲ್ಗಾಮ್ ಉಗ್ರ ದಾಳಿ: 1,597 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ NIA; ಉನ್ನತ LeT ಕಮಾಂಡರ್ ಸಾಜಿದ್ ಜಾಟ್ ಹೆಸರು ಉಲ್ಲೇಖ!

Gold Rate: ಮತ್ತೆ ಗಗನಕ್ಕೇರಿದ ಚಿನ್ನದ ದರ, ಒಂದೇ ದಿನ ಬರೊಬ್ಬರಿ 4 ಸಾವಿರ ರೂ ಏರಿಕೆ, ಎಷ್ಟು ಗೊತ್ತಾ?

Video: ಯಶವಂತಪುರ ನಿಲ್ದಾಣದಲ್ಲಿ ಹೈಡ್ರಾಮಾ: RPF ಸಿಬ್ಬಂದಿ ಮೇಲೆ ಪುಂಡರ ಹಲ್ಲೆ, ರೈಲು ವಿಳಂಬ! ಆಗಿದ್ದೇನು?

ನವೆಂಬರ್‌ನಲ್ಲಿ ನಿರುದ್ಯೋಗ ದರ ಶೇ. 4.7 ಕ್ಕೆ ಇಳಿಕೆ, ಉದ್ಯೋಗ ಮಾರುಕಟ್ಟೆ ಚೇತರಿಕೆ!

ನಿತೀಶ್ ಕುಮಾರ್ ವಿವಾದ: ನೇಮಕಾತಿ ಪತ್ರ ಪಡೆಯಲು ಬಂದ Muslim ವೈದ್ಯೆಯ hijab ಗೆ ಕೈ ಹಾಕಿದ ಸಿಎಂ; ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ| video

SCROLL FOR NEXT