ಮುರುಘಾ ಮಠದ ಶಿವಮೂರ್ತಿ ಶರಣರು 
ರಾಜ್ಯ

ಪೋಕ್ಸೊ ಪ್ರಕರಣ: ಮುರುಘಾ ಶ್ರೀ ಖುಲಾಸೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತೆ

ನವೆಂಬರ್ 26 ರಂದು ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಚನ್ನಬಸಪ್ಪ ಹಡಪದ್ ನೀಡಿದ ತೀರ್ಪಿನ ವಿರುದ್ಧ ಸಂತ್ರಸ್ತೆ ತನ್ನ ವಕೀಲ ಶ್ರೀನಿವಾಸ್ ಡಿಸಿ ಮೂಲಕ ಕ್ರಿಮಿನಲ್ ಮೇಲ್ಮನವಿ(CRL A 2498/2025) ಸಲ್ಲಿಸಿದ್ದಾರೆ.

ಚಿತ್ರದುರ್ಗ: ಪೋಕ್ಸೊ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರನ್ನು ಖುಲಾಸೆಗೊಳಿಸಿದ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಆದೇಶ ಪ್ರಶ್ನಿಸಿ ಸಂತ್ರಸ್ತೆ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ನವೆಂಬರ್ 26 ರಂದು ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಚನ್ನಬಸಪ್ಪ ಹಡಪದ್ ನೀಡಿದ ತೀರ್ಪಿನ ವಿರುದ್ಧ ಸಂತ್ರಸ್ತೆ ತನ್ನ ವಕೀಲ ಶ್ರೀನಿವಾಸ್ ಡಿಸಿ ಮೂಲಕ ಕ್ರಿಮಿನಲ್ ಮೇಲ್ಮನವಿ(CRL A 2498/2025) ಸಲ್ಲಿಸಿದ್ದಾರೆ.

2022 ಆಗಸ್ಟ್‌ 31 ರಂದು ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್, ಮೊದಲ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರು ನಿರ್ದೋಷಿ ಎಂದು ತೀರ್ಪು ನೀಡಿದೆ. ಪ್ರಕರಣದ ಎರಡನೇ ಆರೋಪಿ ರಶ್ಮಿ ಹಾಗೂ ನಾಲ್ಕನೇ ಆರೋಪಿ ಪರಮಶಿವಯ್ಯ ಅವರನ್ನು ಕೂಡ ನಿರ್ದೋಷಿ ಎಂದು ಕೋರ್ಟ್​​ ತೀರ್ಪು ನೀಡಿದ್ದು, ಈ ತೀರ್ಪು ಪ್ರಶ್ನಿಸಿ ಸಂತ್ರಸ್ತೆ ಮೇಲ್ಮನವಿ ಸಲ್ಲಿಸಿದ್ದಾರೆ.

ವೈದ್ಯಕೀಯ ವರದಿಯಲ್ಲಿ ಲೈಂಗಿಕ ದೌರ್ಜನ್ಯದ ಯಾವುದೇ ಪುರಾವೆಗಳಿಲ್ಲ ಮತ್ತು ವೈದ್ಯರು ಮತ್ತು ಮ್ಯಾಜಿಸ್ಟ್ರೇಟ್ ಮುಂದೆ ಸಂತ್ರಸ್ತರು ನೀಡಿದ ಸಾಕ್ಷ್ಯಗಳು ವಿರೋಧಾತ್ಮಕವಾಗಿವೆ ಎಂದು ಕೆಳ ನ್ಯಾಯಾಲಯವು ತೀರ್ಪು ನೀಡಿತ್ತು. ಕಳೆದ 15 ವರ್ಷಗಳಿಂದ ಶರಣರು ಮತ್ತು ಬಸವರಾಜನ್ ನಡುವೆ ಆಸ್ತಿ ವಿವಾದವಿತ್ತು ಎಂದು ನ್ಯಾಯಾಲಯವು ಕಂಡುಕೊಂಡಿದ್ದು, ಇದು ಪ್ರಕರಣವನ್ನು ದುರ್ಬಲಗೊಳಿಸಿದೆ.

ಶ್ರೀಗಳ ವಿರುದ್ಧ ದಾಖಲಾಗಿರುವ ಪ್ರಕರಣವು ಪಿತೂರಿ ಎಂದು ನ್ಯಾಯಾಲಯ ಹೇಳಿದೆ. "ಸಂತ್ರಸ್ತರು ನೀಡಿದ ಹೇಳಿಕೆಗಳು ಒಂದಕ್ಕೊಂದು ಹೊಂದಿಕೆಯಾಗುತ್ತಿಲ್ಲ. ಮಾಜಿ ಶಾಸಕ ಮತ್ತು ಮಠದ ವ್ಯವಸ್ಥಾಪಕ ಎಸ್.ಕೆ. ಬಸವರಾಜನ್ ಅವರು ಘಟನೆಗೆ ಸಂಬಂಧಿಸಿದಂತೆ ಎಸ್ಪಿಗೆ ಸಾಕ್ಷ್ಯ ಮತ್ತು ಫೋಟೋಗಳನ್ನು ನೀಡಿರುವುದಾಗಿ ಹೇಳಿದ್ದರೂ, ವಿಚಾರಣೆಯ ಸಮಯದಲ್ಲಿ ಅದನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿಲ್ಲ" ಎಂದು ತೀರ್ಪಿನಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

ಜನಸಂಖ್ಯಾ ಬದಲಾವಣೆ ಪರಿಶೀಲಿಸಲು ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ

ಬೆಂಗಳೂರು: ಕೆಲಸ ಮಾಡುತ್ತಿದ್ದ ಕಂಪನಿಗೆ ಕನ್ನ! ಚಿನ್ನದ ಗಟ್ಟಿ, ಆಭರಣಗಳನ್ನು ಕದ್ದ 9 ಕಾರ್ಮಿಕರ ಬಂಧನ

IPL 2026: ನಾವೇನು ಸಿನಿಮಾ ಸ್ಟಾರ್‌ಗಳಲ್ಲ: ವಿಮಾನ ನಿಲ್ಗಾಣದಲ್ಲಿ Riyan Parag ಗರಂ, ವೈಭವ್ ಸೂರ್ಯವಂಶಿ ಶಾಕ್! Video

SCROLL FOR NEXT