ಬೆಂಗಳೂರಿನಲ್ಲಿ ಕುಸಿದ ತಾಪಮಾನ 
ರಾಜ್ಯ

Bengaluru Weather: ದಾಖಲೆ ಚಳಿಗೆ ಬೆಂಗಳೂರು ಗಡಗಡ; 8 ವರ್ಷಗಳಲ್ಲಿ ಕನಿಷ್ಠ ತಾಪಮಾನ ದಾಖಲು..!

ಬೆಂಗಳೂರಿನಲ್ಲಿ ಡಿಸೆಂಬರ್ 13, 2025 ರಂದು 13.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಕಳೆದ ಎಂಟು ವರ್ಷಗಳಲ್ಲಿ ನಗರದಲ್ಲಿ ದಾಖಲಾದ ಅತ್ಯಂತ ಕನಿಷ್ಠ ತಾಪಮಾನ ಇದಾಗಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೈ ಕೊರೆಯುವ ಚಳಿ ಮುಂದುವರಿದಿದ್ದು, ಜನ ಜೀವನದ ಮೇಲೆ ಪರಿಣಾಮ ಬೀರಿದೆ.

ಬೆಂಗಳೂರಿನಲ್ಲಿ ಡಿಸೆಂಬರ್ 13, 2025 ರಂದು 13.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಕಳೆದ ಎಂಟು ವರ್ಷಗಳಲ್ಲಿ ನಗರದಲ್ಲಿ ದಾಖಲಾದ ಅತ್ಯಂತ ಕನಿಷ್ಠ ತಾಪಮಾನ ಇದಾಗಿದೆ.

ಡಿಸೆಂಬರ್ 29, 1883 ರಂದು 8.9 ಡಿಗ್ರಿ ಸೆಲ್ಸಿಯಸ್ ಆಗಿತ್ತು. ಡಿಸೆಂಬರ್ 11, 2016 ರಂದು ಕನಿಷ್ಠ 12 ಡಿಗ್ರಿ ಸೆಲ್ಸಿಯಸ್ ಮತ್ತು ಡಿಸೆಂಬರ್ 24, 2011 ರಂದು 12.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

ಡಿಸೆಂಬರ್ 16, 2013 ರಂದು ನಗರದಲ್ಲಿ ಕನಿಷ್ಠ ತಾಪಮಾನ 13.6 ಡಿಗ್ರಿ ಸೆಲ್ಸಿಯಸ್ ಮತ್ತು ಡಿಸೆಂಬರ್ 18, 2018 ರಂದು 13.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಇದೀಗ 8 ವರ್ಷಗಳ ಬಳಿಕ ನಗರದಲ್ಲಿ ಕನಿಷ್ಠ ತಾಪಮಾನ ದಾಖಲಾಗಿದೆ.

ಬೆಂಗಳೂರು ಮತ್ತು ದಕ್ಷಿಣ ಕರ್ನಾಟಕದ ಇತರ ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ತಾಪಮಾನ ಮತ್ತಷ್ಟು ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

ಮುಂದಿನ ಕೆಲವು ದಿನಗಳಲ್ಲಿ ಈ ಪ್ರದೇಶದ ಕೆಲವು ಭಾಗಗಳಲ್ಲಿ ಹಗುರವಾದ ಮಳೆಯಾಗುವ ಮುನ್ಸೂಚನೆಯನ್ನೂ ಹವಾಮಾನ ಇಲಾಖೆ ನೀಡಿದೆ.

ಡಿಸೆಂಬರ್ 15, 2025 ರ ಸೋಮವಾರದಿಂದ ರಾತ್ರಿಯ ತಾಪಮಾನದಲ್ಲಿ ಸ್ವಲ್ಪ ಏರಿಕೆಯಾಗಲಿದೆ, ಇದಕ್ಕೆ ಕಾರಣ ಆಗ್ನೇಯ ದಿಕ್ಕಿನ ಗಾಳಿ. ಈ ಗಾಳಿಯು ವಾತಾವರಣದ ಮೇಲೆ ತೆಳುವಾದ ಮೋಡದ ಹೊದಿಕೆ ಮತ್ತು ನೀರಿನ ಆವಿಯ ಪದರವನ್ನು ರೂಪಿಸುತ್ತದೆ. ವಾತಾವರಣದಲ್ಲಿನ ತೇವಾಂಶದ ಮಟ್ಟವು ಹೆಚ್ಚಾಗುತ್ತದೆ, ಇದು ಹಗಲಿನ ತಾಪಮಾನದಲ್ಲಿ ಇಳಿಕೆಗೆ ಕಾರಣವಾಗುತ್ತದೆ ಮತ್ತು ರಾತ್ರಿಯ ತಾಪಮಾನದಲ್ಲಿ ಪ್ರಸ್ತುತ 14 ಡಿಗ್ರಿ ಸೆಲ್ಸಿಯಸ್‌ನಿಂದ ಸ್ವಲ್ಪ ಏರಿಕೆಯಾಗುತ್ತದೆ ಎಂದು ಐಎಂಡಿ ಹಿರಿಯ ವಿಜ್ಞಾನಿ ಸಿಎಸ್ ಪಾಟೀಲ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾ ವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ಮೀಸಲು!

ಕೇಂದ್ರ ಬಜೆಟ್ 2026-27: ವಿದೇಶಿ ನೆರವಿನಲ್ಲಿ ಮಹತ್ತರ ಬದಲಾವಣೆ, ಬಾಂಗ್ಲಾದೇಶಕ್ಕೆ ಅರ್ಧದಷ್ಟು ನೆರವು ಕಡಿತ!

80 Pak ಸೈನಿಕರ ಹತ್ಯೆ, 8 ನಗರಗಳ ವಶ: ಬಲೂಚ್‌ನಲ್ಲಿ ಅಶಾಂತಿ ಸೃಷ್ಟಿಗೆ ಭಾರತ ಕಾರಣ ಆರೋಪ ತಿರಸ್ಕರಿಸಿದ ಕೇಂದ್ರ!

ಕೇಂದ್ರ ಬಜೆಟ್ 2026: ಚುನಾವಣಾ ಆಯೋಗಕ್ಕೆ ಸಿಹಿ, ಆಯವ್ಯಯ ಹಂಚಿಕೆ ಶೇ.25ರಷ್ಟು ಹೆಚ್ಚಳ!

CCL 2026: ಚೆನ್ನೈ ವಿರುದ್ದದ ಸೋಲಿಗೆ ಪ್ರತೀಕಾರ; ಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ ಬುಲ್ಡೋಜರ್ಸ್!

SCROLL FOR NEXT