ರಾಷ್ಟ್ರಪತಿ ದ್ರೌಪದಿ ಮುರ್ಮು 
ರಾಜ್ಯ

2047 ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರ; ತಂತ್ರಜ್ಞಾನ, ಮೌಲ್ಯಗಳನ್ನು ಬಲಪಡಿಸುವ ಅಗತ್ಯವಿದೆ: ರಾಷ್ಟ್ರಪತಿ ಮುರ್ಮು

ಎಲ್ಲರ ಒಳಗೊಳ್ಳುವಿಕೆ, ಸೇವೆ ಮತ್ತು ಮಾನವ ಘನತೆಯಿಂದ ಮಾರ್ಗದರ್ಶಿಸಲ್ಪಟ್ಟ ಭವಿಷ್ಯವನ್ನು ನಿರ್ಮಿಸಲು ಕೇಂದ್ರವು ಬದ್ಧವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.

ಮಂಡ್ಯ: 2047ರ ಹೊತ್ತಿಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುತ್ತಾ ದಾಪುಗಾಲು ಹಾಕುತ್ತಿದ್ದು, ದೇಶಕ್ಕೆ ತಂತ್ರಜ್ಞಾನದ ಶಕ್ತಿ ಮತ್ತು ಮೌಲ್ಯಗಳ ಬಲ ಎರಡೂ ಅಗತ್ಯವಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ ಹೇಳಿದರು.

ಜಿಲ್ಲೆಯ ಮಳವಳ್ಳಿಯಲ್ಲಿ ಆದಿ ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿ ಮಹಾಸ್ವಾಮೀಜಿಯವರ 1066ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಷ್ಟ್ರಪತಿ, 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರದತ್ತ ಮುಂಚೂಣಿಯಲ್ಲಿರುವಾಗ ನಮಗೆ ತಂತ್ರಜ್ಞಾನದ ಶಕ್ತಿ ಮತ್ತು ಮೌಲ್ಯಗಳ ಬಲ ಎರಡೂ ಬೇಕು. ಅಭಿವೃದ್ಧಿ ಹೊಂದಿದ ಭಾರತಕ್ಕೆ ನೈತಿಕತೆಯೊಂದಿಗೆ ಆಧುನಿಕ ಶಿಕ್ಷಣ, ಪರಿಸರದ ಜವಾಬ್ದಾರಿಯೊಂದಿಗೆ ಆವಿಷ್ಕಾರ, ಸಾಮಾಜಿಕ ಒಳಗೊಳ್ಳುವಿಕೆಯೊಂದಿಗೆ ಆರ್ಥಿಕ ಬೆಳವಣಿಗೆ ಮತ್ತು ಸಹಾನುಭೂತಿಯೊಂದಿಗೆ ಪ್ರಗತಿಯ ಅಗತ್ಯವಿದೆ ಎಂದರು.

ಈ ಸಮಗ್ರ ದೃಷ್ಟಿಯೊಂದಿಗೆ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ.ಎಲ್ಲರ ಒಳಗೊಳ್ಳುವಿಕೆ, ಸೇವೆ ಮತ್ತು ಮಾನವ ಘನತೆಯಿಂದ ಮಾರ್ಗದರ್ಶಿಸಲ್ಪಟ್ಟ ಭವಿಷ್ಯವನ್ನು ನಿರ್ಮಿಸಲು ಕೇಂದ್ರವು ಬದ್ಧವಾಗಿದೆ ಎಂದು ಅವರು ಪುನರುಚ್ಚರಿಸಿದರು.

ಯುವಕರ ಪಾತ್ರವನ್ನು ಒತ್ತಿಹೇಳಿದ ಮುರ್ಮು, ಭಾರತದ ದೊಡ್ಡ ಶಕ್ತಿ ಅದರ ಯುವ ಜನತೆಯಲ್ಲಿದೆ. ಕೌಶಲ್ಯ ಮತ್ತು ಜ್ಞಾನದಿಂದ ಮಾತ್ರವಲ್ಲದೆ ಸಮಗ್ರತೆ ಮತ್ತು ಉದ್ದೇಶಿತ ಪ್ರಜ್ಞೆಯಿಂದಲೂ ಅವರ ಭವಿಷ್ಯ ರೂಪುಗೊಳ್ಳುತ್ತದೆ. ಮಹಾಸ್ವಾಮೀಜಿಯವರ ಜೀವನ ಮತ್ತು ಬೋಧನೆಗಳು ಸಾವಿರ ವರ್ಷಗಳ ನಂತರವೂ ಅಸಂಖ್ಯಾತ ಜನರಿಗೆ ಸ್ಫೂರ್ತಿ ಮತ್ತು ಮಾರ್ಗದರ್ಶನ ನೀಡುತ್ತಿವೆ ಎಂದು ಅವರು ಹೇಳಿದರು.

10ನೇ ಶತಮಾನದಲ್ಲಿ ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠವನ್ನು ಸುತ್ತೂರಿನಲ್ಲಿ ಸ್ಥಾಪಿಸಿದ್ದನ್ನು ಸ್ಮರಿಸಿದ ರಾಷ್ಟ್ರಪತಿ, ಪವಿತ್ರ ಆಧ್ಯಾತ್ಮಿಕ ಕೇಂದ್ರವಾಗಿ ಪ್ರಾರಂಭವಾದ ಮಠ, ಸಮಾಜ ಪರಿವರ್ತನೆಯ ಪ್ರಬಲ ಶಕ್ತಿಯಾಗಿ ಕ್ರಮೇಣ ಹೊರಹೊಮ್ಮಿತು. ಜ್ಞಾನದ ಕೇಂದ್ರವಾಗಿ ಬೆಳವಣಿಗೆಯಾದ ಮಠವು, ಶಿಸ್ತು, ಭಕ್ತಿ ಮತ್ತು ಸಹಾನುಭೂತಿಯ ಮೌಲ್ಯಗಳೊಂದಿಗೆ ಪೀಳಿಗೆಯನ್ನು ಪೋಷಿಸಿತು. ಸುತ್ತೂರಿನ ಅವಿಚ್ಛಿನ್ನ ಗುರು ಪರಂಪರೆಯು ಈ ಮಹಾನ್ ಸಂಪ್ರದಾಯದ ನಿರಂತರ ಆತ್ಮವಾಗಿದೆ.ತಲೆಮಾರುಗಳಾದ್ಯಂತ ಆಧ್ಯಾತ್ಮಿಕ ಮೌಲ್ಯಗಳನ್ನು ಸಂರಕ್ಷಿಸುತ್ತಿದ್ದು, ಬಲಪಡಿಸುತ್ತಿದೆ ಎಂದು ಹೇಳಿದರು.

ಜಗದ್ಗುರು ಡಾ.ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಯವರ ಕೊಡುಗೆಗಳ ಬಗ್ಗೆ ಮಾತನಾಡಿದ ಮುರ್ಮು, ಅವರ ಸಾರ್ವಜನಿಕ ಸೇವೆಯ ಪರಂಪರೆಯು ಲಕ್ಷಾಂತರ ಜನರಿಗೆ ವಿಶೇಷವಾಗಿ ಧರ್ಮ, ಶಿಕ್ಷಣ, ಆರೋಗ್ಯ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲಿ ಪ್ರಯೋಜನವನ್ನು ನೀಡಿದೆ ಎಂದು ಹೇಳಿದರು. ಕರ್ನಾಟಕ 12ನೇ ಶತಮಾನದ ಸಮಾಜ ಸುಧಾರಕ ಬಸವೇಶ್ವರರಂತಹ ಸಂತರ ಪುಣ್ಯಭೂಮಿ ಎಂದು ಬಣ್ಣಿಸಿದ ರಾಷ್ಟ್ರಪತಿಗಳು, ಅವರ 'ಕಾಯಕವೇ ಕೈಲಾಸಟ ಎಂಬ ಸಂದೇಶವು ಮಾನವೀಯತೆಗೆ ಸ್ಫೂರ್ತಿ ನೀಡುತ್ತಿದೆ ಎಂದರು.

ಅಧ್ಯಾತ್ಮಿಕ ಅನ್ವೇಷಣೆ ಹಾಗೂ ಸಮಾಜಸೇವೆ ಜೊತೆಜೊತೆಯಾಗಿ ಸಾಗುತ್ತಿರುವ ಸುತ್ತೂರು ಮಠದ ಆದರ್ಶಗಳು ಹಾಗೂ ಕಾರ್ಯಚಟುವಟಿಕೆಗಳಲ್ಲಿ ಇದು ಬಿಂಬಿತವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಜೆಎಸ್‌ಎಸ್ ಮಹಾವಿದ್ಯಾಪೀಠವು ಶಿಕ್ಷಣ ಮತ್ತು ಸಾಮಾಜಿಕ ಅಭಿವೃದ್ಧಿಗೆ ಮೀಸಲಾಗಿರುವ ಭಾರತದ ವಿಶಿಷ್ಟ ಸಂಸ್ಥೆಗಳಲ್ಲಿ ಒಂದಾಗಿದೆ. ಪ್ರಪಂಚದಾದ್ಯಂತ ಸಂಸ್ಥೆಗಳೊಂದಿಗೆ, ಯುವ ಮನಸ್ಸುಗಳನ್ನು ರೂಪಿಸುವುದು, ಆರೋಗ್ಯ ರಕ್ಷಣೆ, ಮಹಿಳೆಯರ ಸಬಲೀಕರಣ, ಗ್ರಾಮೀಣ ಸಮುದಾಯಗಳನ್ನು ಉನ್ನತೀಕರಿಸುವುದು, ಸಂಸ್ಕೃತಿಯನ್ನು ಸಂರಕ್ಷಿಸುವುದು ಮತ್ತು ಅಂತರ್ಗತ ಸಮಾಜವನ್ನು ಬಲಪಡಿಸುವಲ್ಲಿ ತೊಡಗಿಸಿಕೊಂಡಿದೆ. ಸುತ್ತೂರು ಮಠವು ಸಾಮಾಜಿಕ ಅಭಿವೃದ್ಧಿಯ ಆಧಾರಸ್ತಂಭವಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲೋಕಾಯುಕ್ತ ದಾಳಿ: ನಾಲ್ವರು ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ಸಿಕ್ಕಿದ್ದು 18.2 ಕೋಟಿ ರೂ. ಅಕ್ರಮ ಆಸ್ತಿ!

ಕೇಂದ್ರದ ಆದೇಶವನ್ನೇ ಧಿಕ್ಕರಿಸಿದ ಕೇರಳ: IFFK ಯಲ್ಲಿ ನಿರ್ಬಂಧಿತ ಎಲ್ಲಾ ಚಲನಚಿತ್ರಗಳನ್ನು ಪ್ರದರ್ಶಿಸಲು ಆದೇಶ!

ಕಾಂಗ್ರೆಸ್ ಸಂಸದರಿಗೆ 'ವಿಪ್' ಜಾರಿ: ಮುಂದಿನ ಮೂರು ದಿನ ಲೋಕಸಭೆಯಲ್ಲಿ ಕಡ್ಡಾಯ ಹಾಜರಿಗೆ ಸೂಚನೆ

Hijab ವಿವಾದ: 'ಅಪಾರ್ಥ ಬೇಡ.. ನಿತೀಶ್ ಕುಮಾರ್ ತಂದೆ ಸ್ವರೂಪ'; ಬಿಹಾರ ಮುಸ್ಲಿಂ ಸಚಿವ ಸ್ಪಷ್ಟನೆ

ಬೋಂಡಿ ಬೀಚ್‌ನಲ್ಲಿ ಗುಂಡಿನ ದಾಳಿ: ಓರ್ವ ಆರೋಪಿ ಹೈದರಾಬಾದ್ ನಿವಾಸಿ; ಸ್ಫೋಟಕ ಮಾಹಿತಿ ಹಂಚಿಕೊಂಡ ತೆಲಂಗಾಣ ಪೊಲೀಸರು!

SCROLL FOR NEXT