ಪ್ರಿಯಾಂಕ್ ಖರ್ಗೆ 
ರಾಜ್ಯ

ದ್ವೇಷ ಭಾಷಣ ಕಾಯ್ದೆಗೆ ಬಿಜೆಪಿ ಮತ್ತು ಅಂಗಸಂಸ್ಥೆಗಳು ಏಕೆ ಭಯಭೀತರಾಗುತ್ತಿವೆ?: ಪ್ರಿಯಾಂಕ್ ಖರ್ಗೆ

'ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ಮಸೂದೆ - 2025' ಅನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದ್ದು, ವಿರೋಧ ಪಕ್ಷಗಳು ವಿರೋಧಿಸಿವೆ.

ಬೆಳಗಾವಿ: ರಾಜ್ಯ ವಿಧಾನಸಭೆಯಲ್ಲಿ ದ್ವೇಷ ಭಾಷಣ ಮಸೂದೆಯನ್ನು ಮಂಡಿಸುವುದಕ್ಕೆ ಭಾರತೀಯ ಜನತಾ ಪಕ್ಷ (BJP) ವಿರೋಧ ಮಾಡುತ್ತಿರುವುದು ಏಕೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ಪ್ರಶ್ನಿಸಿದ್ದಾರೆ.

ಸುದ್ದಿಸಂಸ್ಥೆ ಎಎನ್ಐ ಜೊತೆಗೆ ಮಾತನಾಡಿದ ಅವರು, 'ದ್ವೇಷ ಭಾಷಣ ಮಸೂದೆ ಕುರಿತು ವಿಧಾನಸಭೆಯಲ್ಲಿ ಚರ್ಚಿಸಲಾಗುವುದು. ಬಿಜೆಪಿ ಮತ್ತು ಅದರ ಅಂಗಸಂಸ್ಥೆಗಳು ಏಕೆ ಭಯಭೀತರಾಗುತ್ತಿವೆ? ಅದಕ್ಕೂ ಅವರಿಗೂ ಯಾವುದೇ ಸಂಬಂಧವಿಲ್ಲ' ಎಂದು ತಿಳಿಸಿದರು.

ಪ್ರಸ್ತಾವಿತ ಕಾನೂನು ಅಸ್ತಿತ್ವದಲ್ಲಿರುವ ಕಾನೂನು ಚೌಕಟ್ಟುಗಳಿಗೆ ಅನುಗುಣವಾಗಿದೆ. ಎಲ್ಲದಕ್ಕೂ ಒಂದು ಕಾನೂನು ಇದೆ. ಆದ್ದರಿಂದ ದ್ವೇಷ ಭಾಷಣಕ್ಕೂ ಕಾನೂನು ಜಾರಿಯಾಗುತ್ತಿದೆ. ಅದರಲ್ಲಿ ತಪ್ಪೇನು?' ಎಂದು ಸಚಿವ ಸಂತೋಷ್ ಲಾಡ್ ಪ್ರಶ್ನಿಸಿದರು.

ಇದೇ ರೀತಿಯ ಅಭಿಪ್ರಾಯಗಳನ್ನು ಪ್ರತಿಧ್ವನಿಸುತ್ತಾ ಸಚಿವ ಮಧು ಬಂಗಾರಪ್ಪ, 'ಸಾಮಾಜಿಕ ಮಾಧ್ಯಮವನ್ನು ಸರಿಯಾಗಿ ಬಳಸಬೇಕು. ಸಾಮಾಜಿಕ ಮಾಧ್ಯಮದಲ್ಲಿ ತಪ್ಪು ಮಾಹಿತಿಯನ್ನು ಹರಡುವುದು ಶಿಕ್ಷಾರ್ಹವಾಗಿರಬೇಕು" ಎಂದು ಅವರು ಹೇಳಿದರು.

'ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ಮಸೂದೆ - 2025'ಕ್ಕೆ ಡಿಸೆಂಬರ್ 4 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಈ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದ್ದು, ವಿರೋಧ ಪಕ್ಷಗಳು ಇದನ್ನು ವಿರೋಧಿಸಿವೆ.

ಧರ್ಮ, ಜನಾಂಗ, ಭಾಷೆ, ಜನ್ಮಸ್ಥಳ, ಜಾತಿ, ಲಿಂಗದ ಆಧಾರದಲ್ಲಿ ದ್ವೇಷದ ಭಾಷಣ ಮಾಡುವವರನ್ನು ನಿರ್ಬಂಧಿಸಲು ಮುಂದಾಗಿರುವ ರಾಜ್ಯ ಸರ್ಕಾರವು, ಕಾಯ್ದೆಯನ್ನು ಜಾರಿಗೆ ತರಲಿದೆ. ಹೀಗಾಗಿ, ದ್ವೇಷ ಭಾಷಣವನ್ನು ನಿಗ್ರಹಿಸಲು ರಾಜ್ಯ ಸರ್ಕಾರ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ಪ್ರತಿಬಂಧಕ) ಮಸೂದೆಯನ್ನು ಅಧಿವೇಶನದಲ್ಲಿ ಮಂಡಿಸಲಾಗಿದೆ. ಕಳೆದ ಕೆಲವು ದಿನಗಳಿಂದ ರಾಜಕೀಯ ವಲಯದಲ್ಲಿ ಬಿಸಿ ಚರ್ಚೆಯಾಗುತ್ತಿರುವ ಮಸೂದೆ ಇದು.

ಈ ಕಾಯ್ದೆಯ ಅನ್ವಯ ದ್ವೇಷಾಪರಾಧ ಎಸಗಿದವರಿಗೆ ಒಂದು ವರ್ಷದಿಂದ ಏಳು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಇದೇ ಮುಂದುವರಿದರೆ, 2 ವರ್ಷದಿಂದ 10 ವರ್ಷದವರೆಗೆ ಜೈಲು ಶಿಕ್ಷೆ ನೀಡಲಾಗುತ್ತದೆ ಹಾಗೂ 50 ಸಾವಿರದಿಂದ ಒಂದು ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ದೇಶದ ಅತ್ಯಂತ ದುಬಾರಿ ಪೆಂಟ್‌ಹೌಸ್! ಈ ಐಷಾರಾಮಿ ಮನೆ 271 ಕೋಟಿಗೆ ಮಾರಾಟ!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೋಗಿದ್ದ ಟೆಕ್ಕಿ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿ ಶಾಂತಲಾ ಡ್ರಾಪ್‌ ಪಾಯಿಂಟ್‌ ಸರ್ಚ್‌; ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ರಷ್ಯಾ ಮೇಲೆ ಉಕ್ರೇನ್ ಭೀಕರ ದಾಳಿ: 13 ಮಂದಿ ಬಲಿ, 75 ಜನರಿಗೆ ಗಾಯ; ಇದು 4 ವರ್ಷಗಳಲ್ಲೇ ಅತ್ಯಂತ ಡೆಡ್ಲಿ ಅಟ್ಯಾಕ್!