ಡಿಜಿಪಿ ಅಲೋಕ್ ಕುಮಾರ್ 
ರಾಜ್ಯ

ರಾಜ್ಯದ ಕಾರಾಗೃಹಗಳಲ್ಲಿ ವಿಶೇಷ ಕಾರ್ಯಾಚರಣೆ: ಮೊಬೈಲ್ ಫೋನ್, ಗಾಂಜಾ ವಶ; ಡಿಜಿಪಿ ಅಲೋಕ್ ಕುಮಾರ್

ಜೈಲುಗಳೊಳಗಿನ ಅಕ್ರಮ ಚಟುವಟಿಕೆಗಳನ್ನು ತಡೆಯಲು ಇಂತಹ ವಿಶೇಷ ಕಾರ್ಯಾಚರಣೆಗಳು ಮುಂದುವರಿಯುತ್ತವೆ ಎಂದು ತಿಳಿಸಿದರು.

ಬೆಂಗಳೂರು: ರಾಜ್ಯದಾದ್ಯಂತ ಕಳೆದ 36 ಗಂಟೆಗಳಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್‌ಗಳು ಮತ್ತು ಗಾಂಜಾ ಸೇರಿದಂತೆ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ಪೊಲೀಸ್ ಮಹಾನಿರ್ದೇಶಕ (ಕಾರಾಗೃಹ) ಅಲೋಕ್ ಕುಮಾರ್ ಬುಧವಾರ ಹೇಳಿದರು.

ಬೆಂಗಳೂರಿನ ಜೈಲಿನಿಂದ ಆರು ಮೊಬೈಲ್ ಫೋನ್‌ಗಳು ಮತ್ತು ನಾಲ್ಕು ಚಾಕುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಮೈಸೂರು ಜೈಲಿನಿಂದ ಒಂಬತ್ತು ಮೊಬೈಲ್ ಫೋನ್‌ಗಳು ಮತ್ತು 11 ಸಿಮ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

'ಬೆಳಗಾವಿ ಜೈಲಿನಲ್ಲಿ ನಾಲ್ಕು ಮೊಬೈಲ್ ಫೋನ್‌ಗಳು ಮತ್ತು ಹೊರಗಿನಿಂದ ಎಸೆದ 366 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು ಜೈಲಿನಿಂದ ನಾಲ್ಕು ಮೊಬೈಲ್ ಫೋನ್‌ಗಳು ಮತ್ತು ವಿಜಯಪುರ ಜೈಲಿನಿಂದ ಒಂದು ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ' ಎಂದು ಅವರು 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.

ಜೈಲುಗಳೊಳಗಿನ ಅಕ್ರಮ ಚಟುವಟಿಕೆಗಳನ್ನು ತಡೆಯಲು ಇಂತಹ ವಿಶೇಷ ಕಾರ್ಯಾಚರಣೆಗಳು ಮುಂದುವರಿಯುತ್ತವೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಧಾನಸಭೆಯಲ್ಲಿ 'ಗೃಹ ಲಕ್ಷ್ಮಿ' ಕೋಲಾಹಲ: ಬಿಜೆಪಿ ಸಭಾತ್ಯಾಗ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿಷಾದ.. ಇಷ್ಟಕ್ಕೂ ಆಗಿದ್ದೇನು? Video

ಪ್ರಚಾರಕ್ಕಾಗಿ ಕಾಂಗ್ರೆಸ್ ಬಿಜೆಪಿಗಿಂತ ಹೆಚ್ಚು ಖರ್ಚು ಮಾಡಿದೆ; ಗೆದ್ದ ಕ್ಷೇತ್ರಗಳು ಮಾತ್ರ ಶೂನ್ಯ: ADR

Video: ಡಾಲ್ಹೌಸಿ ಬಳಿ ಇಳಿಜಾರಿಗೆ ಉರುಳಿದ ವ್ಯಾನ್, ಪ್ರಯಾಣಿಕರ ನಾಟಕೀಯ ಪಾರು!

15 ವರ್ಷ ಮೀರಿದ ವಾಹನಗಳು ಗುಜುರಿಗೆ, ಸರ್ಕಾರದಿಂದ ಅನುಮೋದನೆ: ಸಚಿವ ರಾಮಲಿಂಗಾರೆಡ್ಡಿ

ಭಾರತಕ್ಕೆ NCP ಧಮ್ಕಿ: ಭದ್ರತಾ ಕಾರಣ ಢಾಕಾದಲ್ಲಿರುವ ವೀಸಾ ಕೇಂದ್ರ ಮುಚ್ಚಿದ ಭಾರತ!

SCROLL FOR NEXT