ಕರ್ನಾಟಕ ಪೊಲೀಸ್ 
ರಾಜ್ಯ

3,600 ಹುದ್ದೆ ಭರ್ತಿಗೆ ಹಣಕಾಸು ಇಲಾಖೆ ಅನುಮೋದನೆ; Pakistan Zindabad ಘೋಷಣೆ- 12 ಕೇಸ್ ದಾಖಲು: ಗೃಹ ಸಚಿವ ಪರಮೇಶ್ವರ್

ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 'ಪಾಕಿಸ್ತಾನ ಜಿಂದಾಬಾದ್' ಘೋಷಣೆ ಕೂಗಿದವರ ವಿರುದ್ಧ 12 ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ ವಿಧಾನ ಪರಿಷತ್ ಗೆ ತಿಳಿಸಿದ್ದಾರೆ.

ಬೆಳಗಾವಿ: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 'ಪಾಕಿಸ್ತಾನ ಜಿಂದಾಬಾದ್' ಘೋಷಣೆ ಕೂಗಿದವರ ವಿರುದ್ಧ 12 ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ ವಿಧಾನ ಪರಿಷತ್ ಗೆ ತಿಳಿಸಿದ್ದಾರೆ.

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಪರಿಷತ್ ಸದಸ್ಯ ಸಿಟಿ ರವಿ ಈ ಬಗ್ಗೆ ಪ್ರಶ್ನೆ ಎತ್ತಿದ್ದರು. 6 ಪ್ರಕರಣಗಳಲ್ಲಿ ಸ್ವಯಂಪ್ರೇರಿತ ಪ್ರಕರಣಗಳು ದಾಖಲಾಗಿದ್ದು ಆರು ಪ್ರಕರಣಗಳಲ್ಲಿ ದೂರಿನ ಆಧಾರದ ಮೇಲೆ ಅವುಗಳನ್ನು ದಾಖಲಿಸಲಾಗಿದೆ. ದಾಖಲಾಗಿರುವ 12 ಪ್ರಕರಣಗಳಲ್ಲಿ ಐದು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಾಗಿದೆ. ಎರಡು ಪ್ರಕರಣಗಳಲ್ಲಿ ಬಿ ವರದಿಗಳನ್ನು ಸಲ್ಲಿಸಲಾಗಿದೆ. ಮೂರು ಪ್ರಕರಣಗಳಲ್ಲಿ ತನಿಖೆ ಇನ್ನೂ ನಡೆಯುತ್ತಿದೆ. ಒಂದು ಪ್ರಕರಣದಲ್ಲಿ ಸಿ ರಿಪೋಟ್ ಸಲ್ಲಿಸಲಾಗಿದೆ. ಒಂದು ಪ್ರಕರಣದಲ್ಲಿ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯದಿಂದ ವರದಿ ಬಾಕಿ ಇದೆ ಎಂದು ಪರಮೇಶ್ವರ ಹೇಳಿದರು.

ಎಂಎಲ್‌ಸಿ ಜಗದೇವ್ ಗುತ್ತೇದಾರ್ ಅವರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,600 ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದೆ. ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದರು. ಆಂತರಿಕ ಮೀಸಲಾತಿ ಪ್ರಕ್ರಿಯೆಗೆ ಮೊದಲೇ ಅಧಿಸೂಚನೆ ಹೊರಡಿಸಿರುವುದರಿಂದ, 947 ಪಿಎಸ್‌ಐ ಹುದ್ದೆಗಳ ಭರ್ತಿ ಈಗಾಗಲೇ ಪೂರ್ಣಗೊಂಡಿದ್ದು ಅಭ್ಯರ್ಥಿಗಳು ತರಬೇತಿಯಲ್ಲಿದ್ದಾರೆ ಎಂದು ಹೇಳಿದರು.

ಆಂತರಿಕ ಮೀಸಲಾತಿ ಪ್ರಕ್ರಿಯೆಯು ಈಗ ಬಹುತೇಕ ಪೂರ್ಣಗೊಂಡಿರುವುದರಿಂದ, ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ವೇಗಗೊಳಿಸಲಾಗುವುದು ಎಂದು ಅವರು ಹೇಳಿದರು. ಪ್ರಸ್ತುತ ಪರಿಸ್ಥಿತಿಯನ್ನು ನಿರ್ವಹಿಸಲು 167 ಗೃಹರಕ್ಷಕ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ