ಡಿ.ಕೆ ಶಿವಕುಮಾರ್ 
ರಾಜ್ಯ

ಯುಕೆಪಿ ಯೋಜನೆಯಿಂದ ಮುಳುಗಡೆಗೊಂಡ ಭೂ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಸಿದ್ಧ: ಡಿ.ಕೆ ಶಿವಕುಮಾರ್

ಕೃಷ್ಣ ಮೇಲ್ದಂಡೆ ಯೋಜನೆಯಲ್ಲಿ ಮುಳುಗಡೆಯಾಗಿರುವ ಬಾಗಲಕೋಟೆಯ ಸಣ್ಣ, ದೊಡ್ಡ ಹಾಗೂ ಅತಿ ದೊಡ್ಡ ಅಂಗಡಿಗಳ ಮಾಲೀಕರು ಯುನಿಟ್ 1, 2,3 ಕ್ಕೆ ವಾಣಿಜ್ಯ ಪ್ರದೇಶದಲ್ಲಿ 200 ಎಕರೆ ಭೂಮಿ ಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

ಬೆಳಗಾವಿ: ಯುಕೆಪಿ ಯೋಜನೆಯಿಂದ ಮುಳುಗಡೆಗೊಂಡ ಭೂಸಂತ್ರಸ್ತ ವರ್ತಕರಿಗೆ ಬಾಗಲಕೋಟೆಯಲ್ಲೇ 200 ಎಕರೆ ಪ್ರದೇಶದಲ್ಲಿ ಪುನರ್ ವಸತಿ ಕಲ್ಪಿಸಿ, ವಾಣಿಜ್ಯ ಚಟುವಟಿಕೆಗೆ ಅವಕಾಶ ಕಲ್ಪಿಸಿಕೊಡಲು ನಾವು ಸಿದ್ಧವಿದ್ದೇವೆ ಎಂದು ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಪಿ ಎಚ್ ಪೂಜಾರ್ ಅವರ ಪ್ರಶ್ನೆಗೆ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು.

ಪಿ.ಹೆಚ್ ಪೂಜಾರ್ ಅವರು ಕೃಷ್ಣಾ ಮೇಲ್ದಂಡೆ ಯೋಜನೆ ಆಲಮಟ್ಟಿ ಜಲಾಶಯದಿಂದಾಗಿ ವ್ಯಾಪಾರ ಕೇಂದ್ರಗಳ ಭೂಮಿ ಕೂಡ ಮೂರನೇ ಒಂದು ಭಾಗ ಮುಳುಗಡೆಯಾಗಿದ್ದು, ಸರ್ಕಾರ ಈ ವ್ಯಾಪಾರಸ್ಥರಿಗೆ ಒಂದೇ ಕಡೆ ಪುನರ್ವಸತಿ ಕಲ್ಪಿಸಿ ವಾಣಿಜ್ಯ ಚಟುವಟಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಡಿಸಿಎಂ ಅವರು, “ಕೃಷ್ಣ ಮೇಲ್ದಂಡೆ ಯೋಜನೆಯಲ್ಲಿ ಮುಳುಗಡೆಯಾಗಿರುವ ಬಾಗಲಕೋಟೆಯ ಸಣ್ಣ, ದೊಡ್ಡ ಹಾಗೂ ಅತಿ ದೊಡ್ಡ ಅಂಗಡಿಗಳ ಮಾಲೀಕರು ಯುನಿಟ್ 1, 2,3 ಕ್ಕೆ ವಾಣಿಜ್ಯ ಪ್ರದೇಶದಲ್ಲಿ 200 ಎಕರೆ ಭೂಮಿ ಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಈಗಾಗಲೇ ನಾವು 1635 ಎಕರೆ ಭೂಮಿಯನ್ನು ನಗರಾಭಿವೃದ್ಧಿ ಪ್ರಾಧಿಕಾರದಿಂದ ವಿನ್ಯಾಸ ಮಾಡಿ ನಕ್ಷೆಗೆ ಅನುಮತಿ ನೀಡಿದ್ದೇವೆ. ಪಟ್ಟಣ ಯೋಜನೆಯಲ್ಲಿ ಎಷ್ಟು ವಾಣಿಜ್ಯ ಹಾಗೂ ಎಷ್ಟು ವಾಸಯೋಗ್ಯ ಪ್ರದೇಶವಿರಬೇಕು ಎಂದು ನಿಗದಿ ಮಾಡಲಾಗುವುದು” ಎಂದು ತಿಳಿಸಿದರು.

200 ಎಕರೆ ಜಾಗವನ್ನು ವ್ಯಾಪಾರಕ್ಕೆ ಮೀಸಲಿಡಿ ಎಂದು ಕೇಳುತ್ತಿದ್ದಾರೆ. ವ್ಯಾಪಾರಸ್ಥರ ಬಗ್ಗೆ ಸದಸ್ಯರ ಅಭಿಲಾಷೆ, ಚಿಂತನೆ ಉತ್ತಮವಾಗಿದೆ. ನಾವು ಇದನ್ನು ಮಾಡುತ್ತಿರುವುದು ಭೂಸಂತ್ರಸ್ತರಿಗೆ ಪರಿಹಾರ ನೀಡಲು. ನಿಮಗೆ ಆಸಕ್ತಿ ಇದ್ದರೆ ವರ್ತಕರ ಜೊತೆ ಮಾತನಾಡಿ, ಅವರು ನಮಗೆ ಪ್ರಸ್ತಾವನೆಯನ್ನು ಸಲ್ಲಿಸಲಿ.

ಅವರಿಗಾಗಿ ಪ್ರತ್ಯೇಕವಾಗಿ ಭೂಸ್ವಾಧೀನ ಮಾಡಿಕೊಂಡು ವಾಣಿಜ್ಯ ಚಟುವಟಿಕೆಗೆ ಅವಕಾಶ ಕಲ್ಪಿಸೋಣ. ಅವರು ಯಾವ ಪ್ರದೇಶದಲ್ಲಿ ಕೇಳುತ್ತಾರೋ ಅಲ್ಲೇ ಮಾಡಿಕೊಡೋಣ. ಅಲ್ಲಿ ಅನುದಾನ ಕೊಟ್ಟರೆ ಇದು ಸಾಧ್ಯವಾಗುತ್ತದೆ.

ಆದರೆ ಕೃಷ್ಣಾ ಮೇಲ್ದಂಡೆ ಯೋಜನೆ ಅನುದಾನದಲ್ಲಿ ಇದನ್ನು ಮಾಡಲು ಕಷ್ಟವಾಗುತ್ತದೆ. ನಿಮ್ಮ ಆಶಯದಂತೆ ನಾವು ಈಗಾಗಲೇ ರೈತರಿಗೆ ಪರಿಹಾರ ನೀಡುವ ಮಾತು ಕೊಟ್ಟಿದ್ದೇವೆ. ಪ್ರತಿ ಎಕರೆಗೆ 35-40 ಲಕ್ಷ ಪರಿಹಾರ ನೀಡಲಾಗುತ್ತಿದ್ದು, ಒಟ್ಟಾರೆ ಇದಕ್ಕೆ ನಾವು 70 ಸಾವಿರ ಕೋಟಿ ನೀಡಬೇಕಾಗುತ್ತದೆ. ಬಾಗಲಕೋಟೆಯಲ್ಲೇ ಕೆಲವರು 10-12 ಕೋಟಿ ಪರಿಹಾರಕ್ಕೆ ಬೇಡಿಕೆ ಇಟ್ಟಿದ್ದಾರೆ. ಅದು ಸಾಧ್ಯವಿಲ್ಲ” ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ಮರೀಚಿಕೆ: ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಹೇಳಿದ್ದೇನು?

ಇದೇ ಮೊದಲು: UP YouTuber ಮನೆ ಮೇಲೆ ED ದಾಳಿ: ಲಂಬೋರ್ಗಿನಿ, BMW Z4 ಐಷಾರಾಮಿ ಕಾರುಗಳನ್ನು ನೋಡಿ ಅಧಿಕಾರಿಗಳು ದಂಗು!

ನಾವು ಭಿಕ್ಷುಕರಲ್ಲ; ಕೇಂದ್ರ ಹಣ ನಿಲ್ಲಿಸಿದರೂ ಉದ್ಯೋಗ ಸೃಷ್ಟಿಸುತ್ತೇವೆ: ಉದ್ಯೋಗ ಖಾತ್ರಿ ಯೋಜನೆಗೆ ಗಾಂಧಿ ಹೆಸರು ಘೋಷಿಸಿದ ದೀದಿ!

Hijab ವಿವಾದ ಬೆನ್ನಲ್ಲೇ ಸಿಎಂ ವಿರುದ್ಧ ದೂರು ದಾಖಲು: ಬೆದರಿಕೆ ಹಿನ್ನಲೆ ನಿತೀಶ್ ಕುಮಾರ್‌ ಭದ್ರತೆ ಹೆಚ್ಚಳ!

SHANTI Bill: ಅಣು ಶಕ್ತಿಯ ಖಾಸಗೀಕರಣ, ಸುರಕ್ಷತೆ, ಹೊಣೆಗಾರಿಕೆ ಬಗ್ಗೆ ವಿಪಕ್ಷಗಳು ಕಳವಳ; 'ಬಡತನ ಕಡಿಮೆ' ಮಾಡುತ್ತದೆ ಎಂದ ಸುಧಾ ಮೂರ್ತಿ!

SCROLL FOR NEXT